Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಮುವೇಲನು ಮರಣಹೊಂದಿದನು. ಇಸ್ರಾಯೇಲ್ಯರೆಲ್ಲರೂ ಒಟ್ಟಾಗಿ ಬಂದು ಅವನಿಗಾಗಿ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಮುವೇಲನು ಮರಣಹೊಂದಿದನು. ಇಸ್ರಯೇಲರೆಲ್ಲರೂ ಕೂಡಿಬಂದು ಅವನಿಗಾಗಿ ಸಂತಾಪಸೂಚಿಸುತ್ತಾ ಅವನ ಶವವನ್ನು ರಾಮಾದಲ್ಲಿದ್ದ ಅವನ ಮನೆಯ ಅಂಗಳದಲ್ಲೇ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಮುವೇಲನು ಮೃತಿಹೊಂದಿದನು. ಇಸ್ರಾಯೇಲ್ಯರೆಲ್ಲರೂ ಕೂಡಿ ಬಂದು ಅವನಿಗೋಸ್ಕರ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಅರಣ್ಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಮುವೇಲನು ಮರಣಹೊಂದಿದನು. ಇಸ್ರೇಲರೆಲ್ಲರೂ ಒಟ್ಟಾಗಿ ಸೇರಿ ಸಮುವೇಲನ ಮರಣಕ್ಕಾಗಿ ಗೋಳಾಡಿದರು. ಅವರು ಸಮುವೇಲನನ್ನು ಅವನ ನಿವಾಸವಿದ್ದ ರಾಮದಲ್ಲಿ ಸಮಾಧಿಮಾಡಿದರು. ನಂತರ ದಾವೀದನು ಪಾರಾನ್ ಮರಳುಗಾಡಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಮುಯೇಲನು ಮರಣಹೊಂದಿದನು. ಇಸ್ರಾಯೇಲರೆಲ್ಲರು ಕೂಡಿಬಂದು ಅವನಿಗೋಸ್ಕರ ಗೋಳಾಡಿ, ರಾಮದಲ್ಲಿರುವ ಅವನ ಮನೆಯ ಅಂಗಳದಲ್ಲಿ ಅವನನ್ನು ಸಮಾಧಿಮಾಡಿದರು. ಅನಂತರ ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:1
20 ತಿಳಿವುಗಳ ಹೋಲಿಕೆ  

ಸಮುವೇಲನು ಮರಣ ಹೊಂದಿದನು. ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ, ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ, ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನು.


ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರು ಮೋಶೆಗೋಸ್ಕರ ಮೂವತ್ತು ದಿನಗಳ ವರೆಗೆ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು.


ಆರೋನನು ಸತ್ತುಹೋದ ಸಂಗತಿಯನ್ನು ಇಸ್ರಾಯೇಲ್ ಸಮೂಹದವರು ಕೇಳಿ ಮೂವತ್ತು ದಿನಗಳು ಅವನಿಗಾಗಿ ಶೋಕಿಸಿದರು.


ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಆಮೋನನು ಅರಸನಾದನು.


ಭಕ್ತರಾದ ಜನರು ಸ್ತೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.


ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.


ಅವನು ಪಾರಾನಿನ ಅರಣ್ಯದಲ್ಲಿ ವಾಸ ಮಾಡಿದನು. ಅವನ ತಾಯಿ ಐಗುಪ್ತ ದೇಶದಿಂದ ಕನ್ಯೆಯನ್ನು ತಂದು ಅವನಿಗೆ ಮದುವೆ ಮಾಡಿಸಿದಳು.


ಯೆಹೋಯಾದಾವನ ಮಗನಾದ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವವನ್ನು ಅರಣ್ಯದಲ್ಲಿರುವ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು.


ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಪಾರಾನ್ ಅರಣ್ಯದಿಂದ ಇಸ್ರಾಯೇಲರ ಮುಖ್ಯಸ್ಥರನ್ನು ಕಳುಹಿಸಿದನು.


ಜನಾಂಗಗಳ ಎಲ್ಲಾ ಅರಸರೂ, ಹೌದು, ಸಕಲ ಅರಸರೂ ತಮ್ಮ ತಮ್ಮ ವೈಭವದೊಡನೆ ಸಮಾಧಿಗಳಲ್ಲಿ ದೀರ್ಘ ನಿದ್ರೆ ಮಾಡುತ್ತಾರೆ.


ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!


ಅಲ್ಲಿ ಅವನ ಸ್ವಂತ ಮನೆಯಿದ್ದುದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ವಿವಾದಗಳನ್ನು ತೀರಿಸುತ್ತಿದ್ದನು.


ಆ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ, ಆರೋನರು ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು.


ತರುವಾಯ ಅವರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳಿದುಕೊಂಡರು.


ಆ ದೇಶದ ಜನರಾಗಿದ್ದ ಕಾನಾನ್ಯರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣದಲ್ಲಿ ನಡೆದ ಗೋಳಾಟವನ್ನು ನೋಡಿ ಐಗುಪ್ತರಿಗೆ ಬಂದಿರುವ ಈ ಶೋಕವು ಬಹು ವಿಶೇಷವಾಗಿದೆ ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ “ಆಬೇಲ್ ಮಿಚ್ರಯಿಮ್” ಎಂದು ಹೆಸರಾಯಿತು.


ಇದಲ್ಲದೆ ಸೇಯೀರೆಂಬ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಹೋರಿಯರನ್ನು, ಅಲ್ಲೇ ಸೋಲಿಸಿ ಮರಳುಗಾಡಿನ ಹತ್ತಿರವಿರುವ ಎಲ್ಪಾರಾನಿನ ವರೆಗೂ ಹಿಂದಟ್ಟಿದನು.


ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ನಂತರ ಅವನ ಮಗನಾದ ಆಮೋನನು ಅರಸನಾದನು.


ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಗಾಗಿ ಗೋಳಾಡಿ ಕಣ್ಣೀರು ಸುರಿಸಿದನು.


ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳೊಂದಿಗೆ ಸಂಗಮಿಸಲು, ಯೆಹೋವನು ಆಕೆಯ ಪ್ರಾರ್ಥನೆಯನ್ನು ಪರಿಗಣಿಸಿದ್ದರಿಂದ ಆಕೆಯು ಗರ್ಭಿಣಿಯಾದಳು.


“ನಿಮ್ಮ ಪೂರ್ವಿಕರು ಎಲ್ಲಿ? ಪ್ರವಾದಿಗಳು ಸದಾಕಾಲ ನಿತ್ಯನಿರಂತರವಾಗಿ ಇರುವರೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು