Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಸೌಲನು ದಾವೀದನಿಗೆ, “ನನ್ನ ಮಗನೇ ದಾವೀದನೇ ನೀನು ಆಶೀರ್ವಾದ ಹೊಂದು. ನೀನು ಹೇಗೂ ಮಹಾಕಾರ್ಯಗಳನ್ನು ನಡಿಸಿ ಸಫಲನಾಗುವಿ” ಎಂದು ಹೇಳಿ ತನ್ನ ಊರಿಗೆ ಹೊರಟನು. ದಾವೀದನು ತನ್ನ ದಾರಿಯನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಗ ಸೌಲನು ದಾವೀದನಿಗೆ, “ಪುತ್ರನೇ, ದಾವೀದನೇ, ದೇವರು ನಿನ್ನನ್ನು ಹರಸಲಿ! ನೀನು ಮಹಾಕಾರ್ಯಗಳನ್ನು ಸಾಧಿಸಿ ಯಶಸ್ವಿಯಾಗು,” ಎಂದು ಹೇಳಿ ತನ್ನ ಊರಿಗೆ ಹೊರಟನು; ದಾವೀದನು ತನ್ನ ದಾರಿ ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಸೌಲನು ದಾವೀದನಿಗೆ - ನನ್ನ ಮಗನೇ, ದಾವೀದನೇ, ನೀನು ಆಶೀರ್ವಾದ ಹೊಂದು; ನೀನು ಹೇಗೂ ಮಹಾಕಾರ್ಯಗಳನ್ನು ನಡಿಸಿ ಸಫಲನಾಗುವಿ ಎಂದು ಹೇಳಿ ತನ್ನ ಊರಿಗೆ ಹೊರಟನು; ದಾವೀದನು ತನ್ನ ದಾರಿ ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಂತರ ಸೌಲನು ದಾವೀದನಿಗೆ, “ದೇವರು ನಿನ್ನನ್ನು ಆಶೀರ್ವದಿಸಲಿ, ನನ್ನ ಮಗನಾದ ದಾವೀದನೇ, ನೀನು ದೊಡ್ಡ ಕಾರ್ಯಗಳನ್ನು ಮಾಡುವೆ; ನೀನು ಯಶಸ್ವಿಯಾಗುವೆ” ಎಂದನು. ದಾವೀದನು ತನ್ನ ಮಾರ್ಗದಲ್ಲಿ ಹೊರಟುಹೋದನು. ಸೌಲನು ಮನೆಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಸೌಲನು ದಾವೀದನಿಗೆ, “ನನ್ನ ಮಗನಾದ ದಾವೀದನೇ, ದೇವರು ನಿನ್ನನ್ನು ಆಶೀರ್ವದಿಸಲಿ. ನೀನು ಮಹತ್ಕಾರ್ಯಗಳನ್ನು ಮಾಡುವೆ, ಗೆದ್ದೇ ಗೆಲ್ಲುವೆ,” ಎಂದನು. ಹಾಗೆಯೇ ದಾವೀದನು ತನ್ನ ಮಾರ್ಗವಾಗಿ ಹೋದನು. ಸೌಲನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:25
10 ತಿಳಿವುಗಳ ಹೋಲಿಕೆ  

ಸವಿಮಾತನಾಡಿದರೂ ಅವನನ್ನು ನಂಬಬೇಡ, ಅವನ ಹೃದಯದಲ್ಲಿ ಎಷ್ಟೋ ಹೇಯ ಕೃತ್ಯಗಳು.


ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುವನೋ? ನೀನು ಈ ಹೊತ್ತು ನನಗೆ ಉಪಕಾರಮಾಡಿದ್ದಕ್ಕಾಗಿ ಯೆಹೋವನು ನಿನಗೆ ಉಪಕಾರ ಮಾಡಲಿ.


ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.


ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ.


ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ?


ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು. ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯು ಕಂಡು ಅಲ್ಲಿ ಅವನೊಡನೆ ಮಾತನಾಡಿದನು.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.


ಅನಂತರ ಸೌಲನು ತನ್ನ ಮನೆಗೆ ಹೊರಟನು. ದಾವೀದನು ತನ್ನ ಜನರೊಡನೆ ಆಶ್ರಯಗಿರಿಗೆ ಹೋದನು.


ಕೇಳು, ನೀನು ಹೇಗೂ ಅರಸನಾಗುವಿ ಎಂದೂ ಇಸ್ರಾಯೇಲ್ ರಾಜ್ಯವು ನಿನ್ನಿಂದ ಸ್ಥಿರವಾಗುವುದೆಂದು ಬಲ್ಲೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು