Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ದಾವೀದನು ಹಿತ್ತಿಯನ ಮಗನಾದ ಅಹೀಮೆಲೆಕನಿಗೂ, ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದ್ದಕ್ಕೆ ಅಬೀಷೈಯು, “ನಾನು ಬರುತ್ತೇನೆ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಹಾಗು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನು ಉದ್ದೇಶಿಸಿ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದನು. ಅದಕ್ಕೆ ಅಬೀಷೈಯು, “ನಾನು ಬರುತ್ತೇನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನೂ ಕುರಿತು - ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ ಎಂದು ಕೇಳಿದ್ದಕ್ಕೆ ಅಬೀಷೈಯು - ನಾನು ಬರುತ್ತೇನೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದಾವೀದನು ಹಿತ್ತಿಯನಾದ ಅಹೀಮೆಲೆಕನ ಮತ್ತು ಚೆರೂಯಳ ಮಗನೂ ಯೋವಾಬನ ಸಹೋದರನೂ ಆದ ಅಬೀಷೈರೊಡನೆ ಮಾತನಾಡಿದನು. ಅವನು ಅವರಿಗೆ, “ನನ್ನೊಡನೆ ಸೌಲನ ಪಾಳೆಯಕ್ಕೆ ಯಾರು ಬರುತ್ತೀರಿ?” ಎಂದು ಕೇಳಿದನು. “ನಾನು ಬರುತ್ತೇನೆ” ಎಂದು ಅಬೀಷೈ ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಮತ್ತು ಚೆರೂಯಳ ಮಗನಾಗಿರುವ ಯೋವಾಬನ ಸಹೋದರ ಅಬೀಷೈಯನ್ನು ನೋಡಿ, “ನನ್ನ ಸಂಗಡ ಸೌಲನ ದಂಡಿನಲ್ಲಿ ಪ್ರವೇಶಿಸಲು ಬರುವವರು ಯಾರು?” ಎಂದು ಕೇಳಿದನು. ಅದಕ್ಕೆ ಅಬೀಷೈಯನು, “ನಾನು ನಿನ್ನ ಸಂಗಡ ಬರುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:6
22 ತಿಳಿವುಗಳ ಹೋಲಿಕೆ  

ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ, ಅಬೀಷೈ, ಅಸಾಹೇಲ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.


ಹಿತ್ತಿಯನಾದ ಊರೀಯ, ಒಟ್ಟಿಗೆ ಮೂವತ್ತೇಳು ಮಂದಿ.


ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಜನರಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ, ಮುನ್ನೂರು ಜನರನ್ನು ಕೊಂದು ಈ ಮೂವರಲ್ಲಿ ಕೀರ್ತಿಹೊಂದಿದನು.


ಅರಸನು ಯೋವಾಬ, ಅಬೀಷೈ ಮತ್ತು ಇತ್ತೈ ಎಂಬುವರಿಗೆ, “ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನಿಗೆ ದಯೆ ತೋರಿಸಿರಿ” ಎಂದು ಆಜ್ಞಾಪಿಸಿದನು. ದಾವೀದನು ಸೇನಾಧಿಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು.


ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ, ನನ್ನ ದೃಷ್ಟಿಯಲ್ಲಿ ಅನೀತಿಯನ್ನು ಕೆಟ್ಟದ್ದಾಗಿರುವುದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿರುವೆ.


ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದದ್ದರಿಂದ ಅವರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಸತ್ತನು” ಎಂದನು.


ಯೆರುಬ್ಬೇಷೆತನ ಮಗನಾದ ಅಬೀಮೆಲೇಕನನ್ನು ಕೊಂದವರು ಯಾರು ಎಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿ ಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ಹಿತ್ತಿಯನಾದ ನಿನ್ನ ಸೇವಕ ಊರೀಯನು ಮೃತನಾದನೆಂದು ಹೇಳು” ಎಂಬುದಾಗಿ ಆಜ್ಞಾಪಿಸಿ ಅವನನ್ನು ಕಳುಹಿಸಿದನು.


ಆಗ ದಾವೀದನು ದೂತರ ಮುಖಾಂತರವಾಗಿ ಯೋವಾಬನಿಗೆ, “ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು” ಎಂದು ಹೇಳಿ ಕಳುಹಿಸಿದನು. ಅವನು ಊರೀಯನನ್ನು ಕಳುಹಿಸಿದನು.


ಹಿತ್ತಿಯರೂ, ಪೆರಿಜೀಯರೂ, ರೆಫಾಯರೂ,


ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆ ಮೇಲೆ ಹೇತ್ ಹುಟ್ಟಿದನು.


ಆಮೇಲೆ ಆಕೆಯ ಶವದ ಬಳಿಯಿಂದ ಅಬ್ರಹಾಮನು ಎದ್ದು ಹಿತ್ತಿಯರ ಬಳಿಗೆ ಹೋಗಿ ಅವರಿಗೆ,


ಏಸಾವನು ನಲವತ್ತು ವರ್ಷದವನಾದಾಗ ಹಿತ್ತಿಯನಾದ ಬೇರಿಯ ಮಗಳಾದ ಯೆಹೂದೀತಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆ ಮಾಡಿಕೊಂಡನು.


“ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.


ದಾವೀದನೂ ಮತ್ತು ಅಬೀಷೈಯೂ ರಾತ್ರಿಯಲ್ಲಿ ಆ ಪಾಳೆಯಕ್ಕೆ ಹೋದಾಗ ಸೌಲನು ಬಂಡಿಗಳ ಗುಂಪಿನ ಮಧ್ಯದಲ್ಲಿ ಮಲಗಿಕೊಂಡು ನಿದ್ರೆಮಾಡುತ್ತಿದ್ದನು. ಅವನ ಬರ್ಜಿಯು ಅವನ ತಲೆಯ ಹತ್ತಿರ ನೆಲದಲ್ಲಿ ನೆಡಲ್ಪಟ್ಟಿತ್ತು. ಅಬ್ನೇರನೂ, ಸೈನಿಕರೂ ಅವನ ಸುತ್ತಲೂ ಮಲಗಿದ್ದರು.


ಐಗುಪ್ತದೇಶದಿಂದ ರಥಗಳನ್ನೂ ಮತ್ತು ಕುದುರೆಗಳನ್ನೂ ತರಿಸಬೇಕಾದರೆ ಪ್ರತಿಯೊಂದು ರಥಕ್ಕೆ ಆರುನೂರು ರೂಪಾಯಿಗಳನ್ನೂ, ಕುದುರೆಗೆ ನೂರೈವತ್ತು ರೂಪಾಯಿಗಳನ್ನೂ ಕೊಡಬೇಕಾಗಿತ್ತು. ಅವು ಹಿತ್ತಿಯರ ಮತ್ತು ಅರಾಮ್ಯರ ಎಲ್ಲಾ ಅರಸರಿಗೆ ಇವರ ಮುಖಾಂತರವಾಗಿಯೇ ಮಾರಾಟವಾಗುತ್ತಿದ್ದವು.


ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, “ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ” ಅಂದುಕೊಂಡು,


ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ, ಒಂದು ಗುಂಪು ಕೆರೆಯ ಈಚೆಯಲ್ಲಿಯೂ ಇನ್ನೊಂದು ಗುಂಪು ಆಚೆಯಲ್ಲಿಯೂ ಕುಳಿತುಕೊಂಡರು.


ಮಾಕಾ ಊರಿನ ಅಹಸ್ಬೈ ಎಂಬುವನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲ ಎಂಬುವನ ಮಗನಾದ ಎಲೀಯಾಮ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು