Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸಮುವೇಲನು ಮರಣ ಹೊಂದಿದನು. ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ, ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ, ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸಮುವೇಲನು ಮರಣಹೊಂದಿದ್ದನು. ಇಸ್ರಯೇಲರು ಅವನಿಗಾಗಿ ಸಂತಾಪ ಸೂಚಿಸುತ್ತಾ ಅವನ ಶವವನ್ನು ಅವನ ಸ್ವಂತ ಊರಾದ ರಾಮಾದಲ್ಲಿ ಸಮಾಧಿಮಾಡಿದ್ದರು. ಸೌಲನು ಭೂತಪ್ರೇತಗಳನ್ನು ವಿಚಾರಿಸುವವರನ್ನೂ ಬೇತಾಳಿಕರನ್ನೂ ನಾಡಿನಿಂದ ಹೊರಡಿಸಿಬಿಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸಮುವೇಲನು ಮೃತಿಹೊಂದಿದ್ದನು. ಇಸ್ರಾಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸಮುವೇಲನು ಮರಣಹೊಂದಿದನು. ಸಮುವೇಲನ ಮರಣಕ್ಕಾಗಿ ಇಸ್ರೇಲರೆಲ್ಲಾ ತಮ್ಮ ಸಂತಾಪವನ್ನು ಸೂಚಿಸಿದರು. ಅವರು ಸಮುವೇಲನನ್ನು ಅವನ ಊರಾದ ರಾಮದಲ್ಲಿ ಸಮಾಧಿಮಾಡಿದರು. ಸೌಲನು ಈ ಮೊದಲು, ಸತ್ತವರ ಆತ್ಮದೊಂದಿಗೆ ಮಾತನಾಡುವವರನ್ನೂ ಜ್ಯೋತಿಷಿಗಳನ್ನೂ ಬಲಾತ್ಕಾರದಿಂದ ಇಸ್ರೇಲಿನಿಂದ ಓಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸಮುಯೇಲನು ಮರಣಹೊಂದಿದನು. ಇಸ್ರಾಯೇಲರೆಲ್ಲರು ಅವನಿಗೋಸ್ಕರ ಗೋಳಾಡಿ, ಅವನ ಸ್ವಂತ ಪಟ್ಟಣವಾದ ರಾಮದಲ್ಲಿ ಅವನನ್ನು ಹೂಳಿಟ್ಟರು. ಇದಲ್ಲದೆ ಸೌಲನು ಮಾಂತ್ರಿಕಳನ್ನೂ, ಭೂತಪ್ರೇತಗಳನ್ನು ಆರಾಧಿಸುವವರನ್ನೂ ದೇಶದಲ್ಲಿಂದ ಹೊರಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:3
12 ತಿಳಿವುಗಳ ಹೋಲಿಕೆ  

ಸಮುವೇಲನು ಮರಣಹೊಂದಿದನು. ಇಸ್ರಾಯೇಲ್ಯರೆಲ್ಲರೂ ಒಟ್ಟಾಗಿ ಬಂದು ಅವನಿಗಾಗಿ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.


“‘ಸತ್ತವರಲ್ಲಿ ವಿಚಾರಿಸುವವರೂ, ಬೇತಾಳಿಕರೂ ಅವರು ಸ್ತ್ರೀಯರಾಗಲಿ ಅಥವಾ ಪುರುಷರಾಗಲಿ ಅವರು ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು, ಆ ಶಿಕ್ಷೆಗೆ ಅವರೇ ಕಾರಣರು’” ಎಂದು ಹೇಳಿದನು.


“‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.


ಮಾಟಗಾರ್ತಿಯನ್ನು ಜೀವದಿಂದ ಉಳಿಸಬಾರದು.


ಆಗ ಆಕೆಯು ಅವನಿಗೆ, “ಸೌಲನು ಮಾಡಿದ್ದು ನಿನಗೆ ಗೊತ್ತುಂಟು. ಅವನು ಸತ್ತವರಲ್ಲಿ ವಿಚಾರಿಸುವವರನ್ನು ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನಲ್ಲಾ, ಹೀಗಿದ್ದರೂ ನಾನೂ ಸಾಯುವಂತೆ ನೀನು ನನ್ನ ಪ್ರಾಣಕ್ಕೆ ಉರುಲೊಡ್ಡುವುದೇಕೆ?” ಅಂದಳು.


ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.


ಅಲ್ಲಿ ಅವನ ಸ್ವಂತ ಮನೆಯಿದ್ದುದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ವಿವಾದಗಳನ್ನು ತೀರಿಸುತ್ತಿದ್ದನು.


“‘ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಅವಳ ತಂದೆ ಅವಳನ್ನು ಅವನಿಗೆ ಕೊಡುವುದಕ್ಕೆ ಒಪ್ಪದೇ ಹೋದರೆ ಆ ಮನುಷ್ಯನು ತಕ್ಕ ಹಣವನ್ನು ದಂಡವಾಗಿ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು