Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದುದರಿಂದ ಅವನು ತನ್ನ ಸೇವಕರಿಗೆ, “ಸತ್ತವರಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ. ನಾನು ಆಕೆಯ ಹತ್ತಿರ ಹೋಗಿ ವಿಚಾರಿಸುವೆನು” ಎಂದು ಹೇಳಿದನು. ಆಗ ಅವರು, “ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದುದರಿಂದ ಅವನು ತನ್ನ ಸೇವಕರಿಗೆ, “ಭೂತಪ್ರೇತಗಳಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ; ನಾನು ಆಕೆಯ ಬಳಿಗೇ ಹೋಗಿ ವಿಚಾರಿಸುವೆನು,” ಎಂದು ಹೇಳಿದನು. ಅವರು, “ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದದರಿಂದ ಅವನು ತನ್ನ ಸೇವಕರಿಗೆ - ಸತ್ತವರಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ; ನಾನು ಆಕೆಯ ಹತ್ತಿರ ಹೋಗಿ ವಿಚಾರಿಸುವೆನು ಎಂದು ಹೇಳಲಾಗಿ ಅವರು - ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕಡೆಯದಾಗಿ, ಸೌಲನು ತನ್ನ ಸೇನಾಧಿಪತಿಗಳಿಗೆ, “ಸತ್ತವರ ಆತ್ಮಗಳೊಂದಿಗೆ ಮಾತನಾಡಬಲ್ಲ ಒಬ್ಬ ಮಾಂತ್ರಿಕ ಹೆಂಗಸನ್ನು ಕಂಡುಹಿಡಿಯಿರಿ. ಈ ಯುದ್ಧದಲ್ಲಿ ಏನಾಗುವುದೆಂಬುದನ್ನು ನಾನು ಹೋಗಿ ಅವಳನ್ನು ಕೇಳುತ್ತೇನೆ” ಎಂದು ಹೇಳಿದನು. ಅವನ ಅಧಿಕಾರಿಗಳು, “ಏಂದೋರಿನಲ್ಲಿ ಒಬ್ಬ ಬೇತಾಳಿಕಳಿದ್ದಾಳೆ” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಸೌಲನು ತನ್ನ ದಾಸರಿಗೆ, “ನಾನು ವಿಚಾರಿಸುವಂತೆ ಮಾಂತ್ರಿಕಳಾದ ಒಬ್ಬ ಸ್ತ್ರೀಯನ್ನು ವಿಚಾರಿಸಿರಿ,” ಎಂದನು. ಅವನ ದಾಸರು ಅವನಿಗೆ, “ಇಗೋ, ಎಂದೋರಿನಲ್ಲಿ ಮಾಂತ್ರಿಕಳಾದ ಒಬ್ಬ ಸ್ತ್ರೀ ಇದ್ದಾಳೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:7
13 ತಿಳಿವುಗಳ ಹೋಲಿಕೆ  

ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವುದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.


ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, ಹೊಲದ ಗೊಬ್ಬರವಾಗಿ ಹೋದರಲ್ಲಾ.


ಸೌಲನು ಯೆಹೋವನ ಮಾತು ಕೇಳದೆ ಆತನಿಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದಲೂ, ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೇ, ಭೂತ, ಪ್ರೇತಗಳನ್ನು ನಂಬಿ ದೇವ ದ್ರೋಹಿಯಾದುದರಿಂದ ಅವನಿಗೆ ಇಂಥ ಮರಣವಾಯಿತು.


ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬುವವರ ಪ್ರಾಂತ್ಯಗಳಲ್ಲಿ ಬೇತಷೆಯಾನ್, ಇಬ್ಲೆಯಾಮ, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ, ತಾನಾಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳಿಗೆ ಸೇರಿದ ಊರುಗಳು ಸಿಕ್ಕಿದವು.


ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.


“‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.


ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.


ಅವನು ಅವರೊಡನೆ ಮಾತನಾಡುತ್ತಿರುವಾಗಲೇ, ಸೇವಕನು ಅರಸನೊಂದಿಗೆ ಬಂದನು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು, ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು” ಎಂದನು.


ಸಮುವೇಲನು ಮರಣ ಹೊಂದಿದನು. ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ, ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ, ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನು.


ಮಾಟಗಾರರು, ತಂತ್ರಗಾರರು, ಸತ್ತವರಲ್ಲಿ ವಿಚಾರಿಸುವವರು, ಬೇತಾಳ, ಪ್ರೇತ, ಭೂತ ಎಂದು ಪೂಜಿಸುವವರು ಯಾರೂ ನಿಮ್ಮಲ್ಲಿ ಇರಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು