Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 29:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ಫಿಲಿಷ್ಟಿಯ ಪ್ರಭುಗಳು ಅವನ ಮೇಲೆ ಕೋಪಗೊಂಡು ಅವನಿಗೆ, “ಈ ಮನುಷ್ಯನನ್ನು ಕಳುಹಿಸಿಬಿಡು, ಇವನು ಹಿಂದಿರುಗಿ ಹೋಗಿ ನೀನು ನೇಮಿಸಿದ ಸ್ಥಳದಲ್ಲೇ ವಾಸಿಸಲಿ. ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೆ ಶತ್ರುವಾಗಿ ನಿಂತಾನು, ಫಿಲಿಷ್ಟಿಯರ ತಲೆಗಳನ್ನು ಕಡಿದಿದ್ದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೆ ಆ ಫಿಲಿಷ್ಟಿಯ ರಾಜರುಗಳು ಅವನ ಮೇಲೆ ಕೋಪಗೊಂಡು, :ಈ ಮನುಷ್ಯನನ್ನು ಕಳುಹಿಸಿಬಿಡು; ಇವನು ಹಿಂದಿರುಗಿ ಹೋಗಿ ನೀನು ನೇಮಿಸಿದ್ದ ಸ್ಥಳದಲ್ಲೇ ವಾಸಿಸಲಿ; ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೇ ಶತ್ರುವಾಗಿ ನಿಂತಾನು. ಫಿಲಿಷ್ಟಿಯರ ತಲೆಗಳನ್ನು ಕಡುಯುವುದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೆ ಫಿಲಿಷ್ಟಿಯಪ್ರಭುಗಳು ಅವನ ಮೇಲೆ ಕೋಪಗೊಂಡು ಅವನಿಗೆ - ಈ ಮನುಷ್ಯನನ್ನು ಕಳುಹಿಸಿಬಿಡು, ಇವನು ಹಿಂದಿರುಗಿ ಹೋಗಿ ನೀನು ನೇವಿುಸಿದ ಸ್ಥಳದಲ್ಲೇ ವಾಸಿಸಲಿ; ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೆ ಶತ್ರುವಾಗಿ ನಿಂತಾನು. ಫಿಲಿಷ್ಟಿಯರ ತಲೆಗಳನ್ನು ಕಡಿಯುವದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಫಿಲಿಷ್ಟಿಯರ ಅಧಿಪತಿಗಳು ಆಕೀಷನ ಮೇಲೆ ಬಹಳ ಕೋಪಗೊಂಡು, “ದಾವೀದನನ್ನು ಹಿಂದಕ್ಕೆ ಕಳುಹಿಸು! ನೀನು ಕೊಟ್ಟಿರುವ ನಗರಕ್ಕೆ ದಾವೀದನು ಹಿಂದಿರುಗಿ ಹೋಗಲೇಬೇಕು. ಅವನು ನಮ್ಮೊಡನೆ ಯುದ್ಧಕ್ಕೆ ಬರುವಂತಿಲ್ಲ. ಅವನು ನಮ್ಮ ಜೊತೆಯಲ್ಲಿದ್ದರೆ, ಆಗ ನಮ್ಮ ಪಾಳೆಯದಲ್ಲಿ ಒಬ್ಬ ಶತ್ರುವಿದ್ದಂತಾಗುತ್ತದೆ. ಅವನು ನಮ್ಮ ಜನರನ್ನು ಕೊಲ್ಲುವುದರ ಮೂಲಕ ತನ್ನ ರಾಜನ ಮೆಚ್ಚಿಕೆಯನ್ನು ಗಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಫಿಲಿಷ್ಟಿಯರ ಅಧಿಪತಿಗಳು ಆಕೀಷನ ಮೇಲೆ ಕೋಪಗೊಂಡು ಅವನಿಗೆ, “ಇವನು ಯುದ್ಧದಲ್ಲಿ ನಮಗೆ ಶತ್ರುವಾಗಿರದಂತೆ, ಯುದ್ಧಕ್ಕೆ ನಮ್ಮ ಸಂಗಡ ಇವನನ್ನು ಬರಗೊಡದೆ, ನೀನು ಅವನಿಗೆ ನೇಮಿಸಿದ ಸ್ಥಳಕ್ಕೆ ತಿರುಗಿ ಹೋಗುವಹಾಗೆ ಅವನನ್ನು ಕಳುಹಿಸಿಬಿಡು. ಏಕೆಂದರೆ ಇವನು ಯಾವುದರಿಂದ ತನ್ನ ಯಜಮಾನನ ಮೆಚ್ಚಿಗೆ ಪಡೆದುಕೊಳ್ಳುವನು. ಅದು ಈ ಮನುಷ್ಯರ ತಲೆಗಳಿಂದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 29:4
8 ತಿಳಿವುಗಳ ಹೋಲಿಕೆ  

ಇದಲ್ಲದೆ ಮೊದಲಿನಿಂದಲೇ ಫಿಲಿಷ್ಟಿಯರನ್ನು ಸೇರಿಕೊಂಡು ಅವರೊಡನೆ ಪಾಳೆಯದಲ್ಲಿದ್ದ ಇಬ್ರಿಯರು, ಸೌಲ ಮತ್ತು ಯೋನಾತಾನರ ಜೊತೆಯಲ್ಲಿ ಬಂದ ಇಸ್ರಾಯೇಲರನ್ನು ಕೂಡಿಕೊಂಡರು.


ಸೌಲನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗುವ ಫಿಲಿಷ್ಟಿಯರ ಜೊತೆಯಲ್ಲಿ ದಾವೀದನೂ ಹೋಗುತ್ತಿರುವಾಗ ಕೆಲವು ಜನ ಮನಸ್ಸೆಯವರು ಬಂದು ಅವನೊಡನೆ ಸೇರಿಕೊಂಡರು. ದಾವೀದನು ನಿಜವಾಗಿ ಫಿಲಿಷ್ಟಿಯರಿಗೆ ಸಹಾಯಕನು ಆಗಿರಲಾರನೆಂದು, ಅವರ ಪ್ರಭುಗಳು, “ಇವನು ನಮ್ಮ ತಲೆಗಳನ್ನು ಕಡಿದು ತಿರುಗಿ ತನ್ನ ಯಜಮಾನನಾದ ಸೌಲನೊಂದಿಗೆ ಸೇರಿಕೊಂಡಾನು” ಎಂಬುದಾಗಿ ಆಲೋಚಿಸಿ ಅವನನ್ನು ಹಿಂದಕ್ಕೆ ಕಳುಹಿಸಿದರು.


ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ.


ಆಕೀಷನು ಕೂಡಲೇ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟುಬಿಟ್ಟನು. ಆದ್ದರಿಂದ ಚಿಕ್ಲಗ್ ಎಂಬುದು ಇಂದಿನವರೆಗೂ ಯೆಹೂದ ರಾಜರಿಗೆ ಸೇರಿದೆ.


ಆಗ ಆಕೀಷನು ದಾವೀದನಿಗೆ, “ನೀನು ಒಳ್ಳೆಯವನೆಂದು ನನಗೆ ಗೊತ್ತದೆ, ನನ್ನ ದೃಷ್ಟಿಯಲ್ಲಿ ನೀನು ದೇವದೂತನಂತಿರುತ್ತೀ. ಆದರೆ ಫಿಲಿಷ್ಟಿಯ ಪ್ರಭುಗಳು, ‘ಇವನು ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೊರಡಬಾರದು’ ಎಂದು ಹೇಳುತ್ತಾರಲ್ಲಾ.


ದಾವೀದನೂ ಅವನ ಜನರೂ ಮೂರನೆಯ ದಿನ ಚಿಕ್ಲಗ್ ಊರನ್ನು ಮುಟ್ಟಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣ ಪ್ರಾಂತ್ಯಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿ,


ನಮಗೆ ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಸೇರಿಕೊಂಡು, ನಮಗೆ ವಿರುದ್ಧವಾಗಿ ಹೋರಾಡಿ ದೇಶವನ್ನು ಬಿಟ್ಟುಹೋದಾರು. ಆದ್ದರಿಂದ ಅವರು ನಮ್ಮ ದೇಶವನ್ನು ಬಿಟ್ಟು ಹೋಗದಂತೆ ನಾವು ಉಪಾಯ ಮಾಡೋಣ” ಎಂದು ಹೇಳಿ


ಅವನು ಹಿಂತಿರುಗಿ ಚಿಕ್ಲಗಿಗೆ ಹೋಗುವಾಗ ಮನಸ್ಸೆ ಕುಲದ ಸಹಸ್ರಾಧಿಪತಿಗಳಾದ ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹು ಮತ್ತು ಚಿಲ್ಲೆತೈ ಎಂಬುವರು ಬಂದು ಅವನೊಂದಿಗೆ ಸೇರಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು