Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ದೈವೋಕ್ತಿಗಳು ವಿರಳವಾಗಿದ್ದವು; ದೇವದರ್ಶನಗಳು ಅಪರೂಪವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬಾಲಕ ಸಮುವೇಲನು ಏಲಿಯ ನೇತೃತ್ವದಲ್ಲಿ ಸರ್ವೇಶ್ವರನ ಸೇವೆಮಾಡುತ್ತಾ ಬಂದನು. ಆ ಕಾಲದಲ್ಲಿ ದೇವೋಕ್ತಿಗಳು ವಿರಳ ಆಗಿದ್ದವು; ದೇವದರ್ಶನಗಳು ಅಪರೂಪವಾಗಿಬಿಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನಷ್ಟೆ. ಆ ಕಾಲದಲ್ಲಿ ದೇವೋಕ್ತಿಗಳು ವಿರಳವಾಗಿದ್ದವು, ದೇವದರ್ಶನಗಳು ಅಪರೂಪವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ಯೆಹೋವನು ಜನರೊಂದಿಗೆ ಪದೇಪದೇ ಮಾತಾಡುತ್ತಿರಲಿಲ್ಲ; ದರ್ಶನಗಳ ಸಂಖ್ಯೆಯೂ ಕಡಿಮೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬಾಲಕನಾದ ಸಮುಯೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವ ದೇವರಿಗೆ ಸೇವೆ ಮಾಡಿಕೊಂಡಿದ್ದನು. ಆ ದಿನಗಳಲ್ಲಿ ಯೆಹೋವ ದೇವರ ವಾಕ್ಯವು ವಿರಳವಾಗಿತ್ತು. ಅಲ್ಲಿ ದೇವದರ್ಶನಗಳು ಅಪರೂಪವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:1
11 ತಿಳಿವುಗಳ ಹೋಲಿಕೆ  

ನಮ್ಮ ಆರಾಧನಾ ಚಿಹ್ನೆಗಳು ಈಗ ಕಾಣುವುದಿಲ್ಲ. ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ; ಇದು ಎಷ್ಟರವರೆಗೆ ಇರುವುದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ.


ಯೆಹೋವನು ಶೀಲೋವಿನಲ್ಲಿ ದರ್ಶನಕೊಡುವುದಕ್ಕೆ ಪ್ರಾರಂಭಿಸಿ ತನ್ನ ವಾಕ್ಯದಿಂದ ಸಮುವೇಲನಿಗೆ ತನ್ನನ್ನು ಪ್ರಕಟಿಸಿಕೊಳ್ಳುತ್ತಾ ಬಂದನು. ಸಮುವೇಲನು ಇಸ್ರಾಯೇಲರೆಲ್ಲರಿಗೆ ದೈವೋತ್ತರಗಳನ್ನು ತಿಳಿಸುತ್ತಿದ್ದನು.


ಅನಂತರ ಎಲ್ಕಾನನು ರಾಮದಲ್ಲಿದ್ದ ತನ್ನ ಮನೆಗೆ ಹೋದನು; ಹುಡುಗನು ಯಾಜಕನಾದ ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.


ಆದರೆ ಬಾಲಕನಾದ ಸಮುವೇಲನು ಏಫೋದೆಂಬ ನಾರು ಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.


ಮನುಷ್ಯರನ್ನು ಚೊಕ್ಕ ಬಂಗಾರಕ್ಕಿಂತಲೂ ಮತ್ತು ಓಫೀರಿನ ಬಂಗಾರಕ್ಕಿಂತಲೂ ವಿರಳವಾಗುವಂತೆ ಮಾಡುವೆನು.


ಅನಂತರ ಸಮುವೇಲನು ಮಲಗಿ ಮುಂಜಾನೆಯಲ್ಲೇ ಎದ್ದು ಯೆಹೋವನ ಮಂದಿರದ ಬಾಗಿಲುಗಳನ್ನು ತೆರೆದನು. ಅವನು ತಾನು ಕಂಡದ್ದನ್ನು ಏಲಿಗೆ ತಿಳಿಸುವುದಕ್ಕೆ ಭಯಪಟ್ಟನು.


ನನ್ನ ಹೃದಯದ ಹಾಗೂ ಮನಸ್ಸಿನ ಆಲೋಚನೆಗಳನ್ನು ನೆರವೇರಿಸುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತ ಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.’


ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡ ಬಿದ್ದು, ನಮಗೆ ಒಂದು ಬೆಳ್ಳಿಕಾಸನ್ನು ರೊಟ್ಟಿಯ ಚೂರನ್ನು ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ಯಾಜಕನ ಸೇವೆಯಲ್ಲಿ ಯಾವುದಕ್ಕಾದರೂ ನಮ್ಮನ್ನು ಸೇರಿಸಿಕೋ” ಎಂದು ಅವನನ್ನು ಬೇಡಿಕೊಳ್ಳುವರು, ಎಂದು ಹೇಳಿದನು.


ದೇವದರ್ಶನ ಇಲ್ಲದಿರುವಲ್ಲಿ ಜನರು ನಾಶವಾಗುವರು, ಧರ್ಮೋಪದೇಶವನ್ನು ಕೈಕೊಳ್ಳುವವನೋ ಧನ್ಯನಾಗುವನು.


ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು; ‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು