Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನು ಅವನನ್ನು ತನ್ನ ಪ್ರವಾದಿಯನ್ನಾಗಿ ನೇಮಿಸಿಕೊಂಡದ್ದು ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರಾಯೇಲರಿಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರ ಅವನನ್ನು ತಮ್ಮ ಪ್ರವಾದಿಯನ್ನಾಗಿ ನೇಮಿಸಿಕೊಂಡರು. ಈ ಸಂಗತಿ ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲ ಇಸ್ರಯೇಲರಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನು ಅವನನ್ನು ತನ್ನ ಪ್ರವಾದಿಯನ್ನಾಗಿ ನೇವಿುಸಿಕೊಂಡದ್ದು ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರಾಯೇಲ್ಯರಿಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸಮುವೇಲನು ಯೆಹೋವನ ನಿಜಪ್ರವಾದಿಯೆಂಬುದು ದಾನಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರೇಲರಿಗೂ ಆಗ ತಿಳಿದು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಸಮುಯೇಲನು ಯೆಹೋವ ದೇವರ ಪ್ರವಾದಿಯಾಗಿ ದೃಢಪಟ್ಟನೆಂದು ದಾನ್ ಊರು ಮೊದಲ್ಗೊಂಡು ಬೇರ್ಷೆಬದವರೆಗೂ ಇದ್ದ ಇಸ್ರಾಯೇಲರೆಲ್ಲರು ತಿಳಿದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:20
10 ತಿಳಿವುಗಳ ಹೋಲಿಕೆ  

ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ, ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲರೆಲ್ಲರೂ ಏಕಮನಸ್ಸಿನಿಂದ ಹೊರಟು ಮಿಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ಸೇರಿದರು.


ಯೆಹೋವನಾದ ದೇವರು ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸದೆ ಹೋದರೆ, ಆತನು ನನಗೆ ಬೇಕಾದದ್ದನ್ನು ಮಾಡಲಿ” ಅಂದನು.


ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು;


ಹೀಗಿರುವುದರಿಂದ ನನ್ನ ಆಲೋಚನೆಯನ್ನು ಕೇಳು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರೊಳಗಿನಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.


ಇಷ್ಟರೊಳಗೆ ಸುಮಾರು ನಾನೂರೈವತ್ತು ವರ್ಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದ ವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು.


ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ಬಿಡಿಸಿ ಸುರಕ್ಷಿತವಾಗಿ ಜೀವಿಸುವಂತೆ ಮಾಡಿದನು.


ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲರೂ ಮತ್ತು ಯೆಹೂದ್ಯರೂ ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದ ಗಿಡ ಇವುಗಳ ನೆರಳಿನಲ್ಲಿ ವಾಸಮಾಡುತ್ತಾ ಸುರಕ್ಷಿತರಾಗಿದ್ದರು.


‘ಪ್ರವಾದಿಯು ಹೇಳಿದ ಮಾತು ಯೆಹೋವನ ಮಾತಲ್ಲವೆಂದು ತಿಳಿದುಕೊಳ್ಳುವುದು ಹೇಗೆ’ ಅಂದುಕೊಳ್ಳುತ್ತೀರೋ?


ನೀನು ಮುಂತಿಳಿಸಿದ್ದು ಸಂಭವಿಸುವಾಗ, ತಮ್ಮ ಮಧ್ಯದಲ್ಲಿ ಪ್ರವಾದಿಯು ಇದ್ದಾನೆ ಎಂದು ಅವರಿಗೆ ತಿಳಿಯುವುದು.”


ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ಮತ್ತು ನಿಮ್ಮ ಯುವಕರಲ್ಲಿ ಪ್ರತಿಷ್ಠಿತರನ್ನೂ ಎಬ್ಬಿಸಿದೆನು. ಇಸ್ರಾಯೇಲಿನ ಜನರೇ, ಇದು ಸತ್ಯವಲ್ಲವೋ?” ಎಂದು ಯೆಹೋವನು ಅನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು