Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾವು ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ನಾವು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾವು ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣಪ್ರಾಂತವನ್ನು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕೆರೇತ್ಯರು ವಾಸಿಸುವ ನೆಗೆವ್ ಮೇಲೆ ನಾವು ಆಕ್ರಮಣ ಮಾಡಿದೆವು. ನಾವು ಯೆಹೂದ ದೇಶದ ಮೇಲೆ ಮತ್ತು ಕಾಲೇಬ್ಯರು ವಾಸಿಸುವ ನೆಗೆವ್ ಪ್ರಾಂತ್ಯಗಳ ಮೇಲೆ ಆಕ್ರಮಣ ಮಾಡಿದೆವು. ನಾವು ಚಿಕ್ಲಗನ್ನು ಸುಟ್ಟುಹಾಕಿದೆವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾವು ಕೆರೇತ್ಯರ ದಕ್ಷಿಣ ಪ್ರಾಂತದ ಮೇಲೆಯೂ, ಯೆಹೂದದ ಮೇರೆಯ ಮೇಲೆಯೂ, ಕಾಲೇಬನ ದಕ್ಷಿಣ ಪ್ರಾಂತದ ಮೇಲೆಯೂ ದಾಳಿಮಾಡಿ, ಚಿಕ್ಲಗ್ ಊರನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:14
14 ತಿಳಿವುಗಳ ಹೋಲಿಕೆ  

ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ವಾಸಿಸುವ ಜನರೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು, ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು.


ಅರಸನು ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್ ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನೂ, ಕೆರೇತ್ಯ ಮತ್ತು ಪೆಲೇತ್ಯರನ್ನೂ ಅವನ ಜೊತೆಯಲ್ಲಿ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿದ್ದಾರೆ.


ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು.


ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ರಾಜನ ಮುಖ್ಯಸಲಹೆಗಾರರಾಗಿದ್ದರು.


ಅವರು ಅಲ್ಲಿಗೆ ಹೋದಾಗ ಆ ಗುಂಪಿನವರು ತಮಗೆ ಫಿಲಿಷ್ಟಿಯ ಮತ್ತು ಯೆಹೂದ ಪ್ರಾಂತ್ಯಗಳಲ್ಲಿ ದೊರಕಿದ ದೊಡ್ಡ ಕೊಳ್ಳೆಯ ನಿಮಿತ್ತವಾಗಿ ಸಂತೋಷಿಸಿ, ಉಂಡು ಕುಡಿದು, ಕುಣಿದಾಡುತ್ತಾ ಅಲ್ಲಿನ ಬೈಲಿನಲ್ಲಿ ವ್ಯಾಪಿಸಿಕೊಂಡಿದ್ದರು.


ದಾವೀದನೂ ಅವನ ಜನರೂ ಮೂರನೆಯ ದಿನ ಚಿಕ್ಲಗ್ ಊರನ್ನು ಮುಟ್ಟಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣ ಪ್ರಾಂತ್ಯಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿ,


ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು.


ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ಬೆಟ್ಟವನ್ನು ಅವನಿಗೆ ಸ್ವತ್ತಾಗಿ ಕೊಟ್ಟನು.


ಯೆಹೋಯಾದನ ಮಗನಾದ ಬೆನಾಯನು, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನಾದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.


ಆದರೆ ಇದರ ಹೊಲಗಳನ್ನೂ, ಇದಕ್ಕೆ ಸೇರಿದ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.


ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆಯು ಬಹು ಬುದ್ಧಿವಂತೆಯೂ, ಸುಂದರಿಯೂ ಆಗಿದ್ದಳು. ಕಾಲೇಬನ ವಂಶದವನಾದ ಆ ಮನುಷ್ಯನು ನಿಷ್ಠುರನೂ, ದುಷ್ಕರ್ಮಿಯೂ ಆಗಿದ್ದನು. ಅವನು ಬಹು ಶ್ರೀಮಂತನಾಗಿದ್ದನು. ಅವನಿಗೆ ಮೂರು ಸಾವಿರ ಕುರಿಗಳೂ, ಸಾವಿರ ಆಡುಗಳೂ ಇದ್ದವು. ಅವನು ಒಂದು ಸಾರಿ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು.


ಆಗ ದಾವೀದನು ಅವನನ್ನು, “ನೀನು ಯಾರ ಕಡೆಯವನು, ಎಲ್ಲಿಯವನು?” ಎಂದು ಕೇಳಿದನು. ಅವನು “ನಾನು ಐಗುಪ್ತನು, ಒಬ್ಬ ಅಮಾಲೇಕ್ಯನ ದಾಸನು. ನಾನು ಮೂರು ದಿನಗಳ ಹಿಂದೆ ಅಸ್ವಸ್ಥನಾಗಿ ಮಲಗಿಕೊಂಡಿದ್ದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.


ಅನಂತರ ದಾವೀದನು, “ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರೆದುಕೊಂಡು ಹೋಗುವಿಯೋ?” ಎಂದು ಕೇಳಿದ್ದಕ್ಕೆ ಅವನು, “ನೀನು ನನ್ನನ್ನು ಕೊಲ್ಲುವುದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರೆ ನಿನ್ನನ್ನು ಆ ಗುಂಪಿನವರ ಬಳಿಗೆ ಕರಕೊಂಡು ಹೋಗುವೆನು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು