Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರು ಕೇಳುವರು? ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಮಾನು ಕಾಯುವವನಿಗೂ ಸಿಕ್ಕಬೇಕು. ಉಭಯರಿಗೂ ಸಮಭಾಗವಾಗಬೇಕು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರೂ ಕೇಳಬಾರದು. ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಧನಸಾಮಗ್ರಿಗಳನ್ನು ಕಾಯ್ದವನಿಗೂ ಸಿಕ್ಕಬೇಕು. ಉಭಯತ್ರರಿಗೂ ಸಮಪಾಲಾಗಬೇಕು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರು ಕೇಳುವರು? ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಮಾನು ಕಾಯ್ದವನಿಗೂ ಸಿಕ್ಕಬೇಕು. ಉಭಯರಿಗೂ ಸಮಭಾಗವಾಗಬೇಕು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನೀವು ಹೇಳುವುದನ್ನು ಯಾರೂ ಕೇಳುವುದಿಲ್ಲ! ಯುದ್ಧಮಾಡುವವನಿಗೆ ಸಿಗುವ ಪಾಲು ಮತ್ತು ಯುದ್ಧ ಸಾಮಾಗ್ರಿಗಳನ್ನು ಕಾಯುವವನಿಗೆ ಸಿಗುವ ಪಾಲು ಒಂದೇ ಸಮನಾಗಿರಬೇಕು. ಪ್ರತಿಯೊಬ್ಬರ ಪಾಲೂ ಒಂದೇ ಸಮವಾಗಿರಬೇಕು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಲಕರಣೆಗಳ ಬಳಿಯಲ್ಲಿ ಕಾದಿರುವವನಿಗೂ ಪಾಲು ಇರಲಿ. ಅವರವರ ಪಾಲು ಇರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:24
7 ತಿಳಿವುಗಳ ಹೋಲಿಕೆ  

ಅವರನ್ನು ಆಶೀರ್ವದಿಸಿ “ನೀವು ಬಹಳ ಸಮೃದ್ಧಿಯುಳ್ಳವರಾಗಿ ದನಕುರಿ, ಬೆಳ್ಳಿಬಂಗಾರ, ತಾಮ್ರ, ಕಬ್ಬಿಣ, ವಸ್ತ್ರ, ಮೊದಲಾದ ವಸ್ತುಗಳನ್ನು ತೆಗೆದುಕೊಂಡು ನಿಮ್ಮನಿಮ್ಮ ನಿವಾಸಗಳಿಗೆ ಹೋಗಿರಿ. ನಿಮ್ಮ ಶತ್ರುಗಳಿಂದ ತೆಗೆದುಕೊಂಡ ಕೊಳ್ಳೆಯಲ್ಲಿ ನಿಮ್ಮ ಸಹೋದರರಿಗೂ ಪಾಲು ಕೊಡಿರಿ” ಎಂದನು


ಒಟ್ಟು ಎರಡು ಭಾಗಮಾಡಿ ಯುದ್ಧಕ್ಕೆ ಹೋದ ಭಟರಿಗೆ ಅರ್ಧವನ್ನೂ, ಮಿಕ್ಕ ಸಮೂಹದವರಿಗೆ ಅರ್ಧವನ್ನೂ ಹಂಚಿಕೊಡಬೇಕು.


ಓಡಿ ಹೋಗುತ್ತಾರೆ; ಸೈನ್ಯದೊಡನೆ ಅರಸುಗಳು ಓಡಿ ಹೋಗುತ್ತಾರೆ; ಮನೆಯಲ್ಲಿದ್ದ ಸ್ತ್ರೀಯರು ಕೊಳ್ಳೆಯನ್ನು ಹಂಚುತ್ತಾರೆ.


ಅವನು ತನ್ನ ಜನರಿಗೆ “ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ” ಎಂದು ಆಜ್ಞಾಪಿಸಿದನು. ಅವರೆಲ್ಲರು ಕಟ್ಟಿಕೊಂಡರು. ದಾವೀದನೂ ಸೊಂಟಕ್ಕೆ ಕತ್ತಿಯನ್ನು ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರು ಮಂದಿ ದಾವೀದನ ಜೊತೆಯಲ್ಲಿ ಹೋದರು. ಇನ್ನೂರು ಮಂದಿ ಸಾಮಾನುಗಳ ಬಳಿಯಲ್ಲಿ ಇದ್ದರು.


ಆಗ ದಾವೀದನು ಅವರಿಗೆ, “ಸಹೋದರರೇ, ಯೆಹೋವನು ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದಿದ್ದ ಶತ್ರುಗಳ ಗುಂಪನ್ನು ನಮ್ಮ ಕೈಗೆ ಒಪ್ಪಿಸಿ ನಮಗೆ ಇಷ್ಟನ್ನೆಲ್ಲಾ ಕೊಟ್ಟ ಮೇಲೆ ನೀವು ಹೀಗೆ ಮಾಡಬಾರದು.


ದಾವೀದನು ಇಸ್ರಾಯೇಲರಲ್ಲಿ ಇದನ್ನು ಕಟ್ಟಳೆಯಾಗಿ ನೇಮಿಸಿದ್ದರಿಂದ ಇಂದಿನವರೆಗೂ ಹಾಗೆಯೇ ನಡೆಯುತ್ತಾ ಬಂದಿದೆ.


ಇದಲ್ಲದೆ ಕುಗ್ಗಿದವರೂ, ಸಾಲಗಾರರೂ, ಮನನೊಂದವರೂ, ಆಗಿರುವ ಸರ್ವಜನರೂ ಬಂದು ಅವನನ್ನು ಆಶ್ರಯಿಸಿಕೊಳ್ಳಲು, ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು