Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 31:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರಲ್ಲಿದ್ದ ಶೂರರೆಲ್ಲರೂ ಹೊರಟು, ರಾತ್ರಿಯೆಲ್ಲಾ ನಡೆದುಹೋಗಿ, ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ಷೆಯಾನಿನ ಗೋಡೆಯಿಂದ ಇಳಿಸಿ, ಯಾಬೇಷಿಗೆ ತೆಗೆದುಕೊಂಡು ಬಂದು ಅಲ್ಲಿ ಅವುಗಳನ್ನು ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಅವರಲ್ಲಿದ್ದ ಶೂರರೆಲ್ಲರೂ ಹೊರಟು, ರಾತ್ರಿಯೆಲ್ಲಾ ನಡೆದುಹೋಗಿ, ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ ಷೆಯಾನಿನ ಗೋಡೆಯಿಂದ ಇಳಿಸಿ, ಯಾಬೇಷಿಗೆ ತೆಗೆದುಕೊಂಡು ಬಂದು, ಅಲ್ಲಿ ಅವುಗಳನ್ನು ದಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರಲ್ಲಿದ್ದ ಶೂರರೆಲ್ಲರೂ ಹೊರಟು ರಾತ್ರಿಯೆಲ್ಲಾ ನಡೆದುಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ಷೆಯಾನಿನ ಗೋಡೆಯಿಂದ ಇಳಿಸಿ ಯಾಬೇಷಿಗೆ ತೆಗೆದುಕೊಂಡು ಬಂದು ಅಲ್ಲಿ ಅವುಗಳನ್ನು ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದ್ದರಿಂದ ಯಾಬೆಷಿನ ಸೈನಿಕರೆಲ್ಲ ಬೇತ್‌ಷೆಯಾನಿಗೆ ಹೋದರು. ಅವರು ರಾತ್ರಿಯೆಲ್ಲಾ ನಡೆದರು! ನಂತರ ಅವರು ಬೇತ್‌ಷೆಯಾನಿನ ಗೋಡೆಯಲ್ಲಿದ್ದ ಸೌಲನ ದೇಹವನ್ನು ಇಳಿಸಿದರು. ನಂತರ ಅವರು ಸೌಲನ ಗಂಡುಮಕ್ಕಳ ದೇಹಗಳನ್ನೂ ಇಳಿಸಿದರು. ನಂತರ ಅವರು ಆ ದೇಹಗಳನ್ನು ಯಾಬೇಷಿಗೆ ತೆಗೆದುಕೊಂಡು ಹೋದರು. ಸೌಲ ಮತ್ತು ಅವನ ಮೂವರು ಗಂಡುಮಕ್ಕಳ ದೇಹಗಳನ್ನು ಯಾಬೇಷಿನ ಜನರು ಅಲ್ಲಿ ದಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು, ರಾತ್ರಿಯೆಲ್ಲಾ ನಡೆದುಹೋಗಿ, ಬೇತ್ ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶವವನ್ನೂ, ಅವನ ಪುತ್ರರ ಶವಗಳನ್ನೂ ತೆಗೆದುಕೊಂಡು ಯಾಬೇಷಿಗೆ ಬಂದು, ಅವುಗಳನ್ನು ಅಲ್ಲಿ ದಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 31:12
6 ತಿಳಿವುಗಳ ಹೋಲಿಕೆ  

ಅವನ ಶರೀರವನ್ನು ವೈದ್ಯರ ಆಲೋಚನೆ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರಹದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗೋಸ್ಕರ ದಾವೀದನಗರದಲ್ಲಿ ತೆಗೆಸಿದ್ದ ಸಮಾಧಿಯಲ್ಲಿ ಇಟ್ಟರು. ಹೇರಳವಾಗಿ ಅವನಿಗೋಸ್ಕರ ಬಹಳಷ್ಟು ಧೂಪ ಹಾಕಿ ಸಂತಾಪ ಸೂಚಿಸಿದರು.


ನಿನಗಿಂತ ಮುಂಚಿನ ನಿನ್ನ ಪೂರ್ವಿಕರಾದ ಅರಸರಿಗೆ ಧೂಪಹಾಕಿದ ಪ್ರಕಾರ ನಿನಗೂ ಹಾಕುವರು; ಅಯ್ಯೋ, ಪ್ರಭುವೇ ಎಂದು ನಿನಗಾಗಿ ಗೋಳಾಡುವರು; ನಾನೇ ನುಡಿದಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ’” ಎಂದನು.


ಶವವನ್ನು ಸುಡಲು ಬಂದ ಸಂಬಂಧಿಕರು, ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, “ನಿಮ್ಮ ಹತ್ತಿರ ಇನ್ನೂ ಯಾರಾದರೂ ಇದ್ದಾರೋ?” ಎಂದು ಮನೆಯಲ್ಲಿರುವವರನ್ನು ಕೇಳುವಾಗ ಅವನು, “ಇಲ್ಲ” ಎನ್ನುವನು. ಆಗ ಸಂಬಂಧಿಕನು, “ಸುಮ್ಮನಿರು, ನಾವು ಯೆಹೋವನ ಹೆಸರನ್ನು ನೆನಪುಮಾಡಿಕೊಳ್ಳಬಾರದು.”


ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಗುಡಿಯಲ್ಲಿಟ್ಟರು. ಅವನ ಶವವನ್ನು ಬೇತ್ಷೆಯಾನಿನ ಕೋಟೆ ಗೋಡೆಗೆ ನೇತುಹಾಕಿದರು.


ಆಗ ಅವರಲ್ಲಿರುವ ಶೂರರೆಲ್ಲರೂ ಹೊರಟುಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಯಾಬೇಷಿಗೆ ತೆಗೆದುಕೊಂಡು ಬಂದು, ಅವರ ಎಲುಬುಗಳನ್ನು ಅಲ್ಲಿದ್ದ ಏಲಾ ಮರದ ಕೆಳಗೆ ಸಮಾಧಿ ಮಾಡಿ, ಏಳು ದಿನಗಳ ವರೆಗೆ ಉಪವಾಸ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು