Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 4:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರ ಹಿರಿಯರು ಅವರಿಗೆ, “ಯೆಹೋವನು ಈ ಹೊತ್ತು ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶೀಲೋವಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸೋಣ; ಆತನು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ತಪ್ಪಿಸಲಿ” ಎಂದು ಆಲೋಚನೆ ಹೇಳಿದ್ದರಿಂದ ಅವರು ಜನರನ್ನು ಕಳುಹಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಸ್ರಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರೊಡನೆ ಅವರ ಹಿರಿಯರು, “ಸರ್ವೇಶ್ವರ ಈ ದಿನ ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶಿಲೋವಿನಿಂದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ತರೋಣ; ಅವರು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ರಕ್ಷಿಸಲಿ,” ಎಂದು ಸಮಾಲೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲ್ಯರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರ ಹಿರಿಯರು ಅವರಿಗೆ - ಯೆಹೋವನು ಈ ಹೊತ್ತು ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶೀಲೋವಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸೋಣ; ಆತನು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಗೆ ನಮ್ಮನ್ನು ತಪ್ಪಿಸಲಿ ಎಂದು ಆಲೋಚನೆ ಹೇಳಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಸ್ರೇಲರ ಸೈನಿಕರು ಪಾಳೆಯಕ್ಕೆ ಹಿಂದಿರುಗಿದರು. ಇಸ್ರೇಲರ ಹಿರಿಯರು, “ಫಿಲಿಷ್ಟಿಯರು ನಮ್ಮನ್ನು ಸೋಲಿಸಲು ಯೆಹೋವನು ಅವಕಾಶ ನೀಡಿದ್ದೇಕೆ? ಶೀಲೋವಿನಿಂದ ಯೆಹೋವನ ಪವಿತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ತರಿಸೋಣ. ಈ ರೀತಿ ದೇವರು ನಮ್ಮೊಂದಿಗೆ ಯುದ್ಧರಂಗಕ್ಕೆ ಬರಲಿ. ಆತನು ನಮ್ಮನ್ನು ಶತ್ರುಗಳಿಂದ ರಕ್ಷಿಸುತ್ತಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು, “ಈ ಹೊತ್ತು ಯೆಹೋವ ದೇವರು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿದ್ದೇನು? ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ, ನಾವು ಅದನ್ನು ಶೀಲೋವಿನಿಂದ ತರಿಸೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 4:3
34 ತಿಳಿವುಗಳ ಹೋಲಿಕೆ  

ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು.


ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ.


ಅದರಲ್ಲಿ ಚಿನ್ನದ ಧೂಪಾರತಿಯು ಮತ್ತು ಚಿನ್ನದ ತಗಡಿನಿಂದ ಹೊದಿಸಿದ ಒಡಂಬಡಿಕೆಯ ಮಂಜೂಷಗಳಿದ್ದವು. ಆ ಮಂಜೂಷದೊಳಗೆ ಮನ್ನ ಇಟ್ಟಿದ್ದ ಚಿನ್ನದ ಪಾತ್ರೆಯೂ, ಆರೋನನ ಚಿಗುರಿದ ಕೋಲೂ, ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು.


ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು.


‘ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ’ ಎಂಬ ಸುಳ್ಳು ಮಾತುಗಳ ಮೇಲೆ ಭರವಸವಿಡಬೇಡಿರಿ.


ನೀವು ದೇಶದಲ್ಲಿ ಹೆಚ್ಚಿ ಅಭಿವೃದ್ಧಿಗೆ ಬಂದ ಕಾಲದಲ್ಲಿ, ‘ಯೆಹೋವನ ನಿಬಂಧನ ಮಂಜೂಷ’ ಇದರ ಪ್ರಸ್ತಾವವಿರದು. ಅದು ಜ್ಞಾಪಕಕ್ಕೆ ಬಾರದು, ಯಾರೂ ಸ್ಮರಿಸರು, ಅದು ಇಲ್ಲವಲ್ಲಾ ಎಂದು ದುಃಖಿಸರು, ಹೊಸದಾಗಿ ಕಲ್ಪಿಸಿಕೊಳ್ಳರು” ಇದು ಯೆಹೋವನ ನುಡಿ.


“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ” ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ.


ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ಚಾಚಿದ ಬಲಗೈಯನ್ನು ಏಕೆ ಹಿಂದೆಗೆದಿದ್ದೀ? ಅದನ್ನು ಎದೆಯ ಮೇಲಿನಿಂದ ತೆಗೆದು ಅವರನ್ನು ಸಂಹರಿಸಿಬಿಡು.


ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟಿದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯ ಹೊಗೆ ಏರುವುದೇಕೆ?


ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿನ ಅವನು ಪ್ರವಾದಿಯಾದ ನಾತಾನನನ್ನು ಬರಲು ಹೇಳಿ, “ನೋಡು, ನಾನು ದೇವದಾರುಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಯೆಹೋವನ ಒಡಂಬಡಿಕೆ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ” ಎಂದು ಹೇಳಿದನು.


ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು. ಯೆಹೋವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ ನಾನು ಆತನನ್ನೂ, ಆತನ ಆಲಯವನ್ನೂ ನೋಡುವ ಹಾಗೆ ಆತನೇ ನನ್ನನ್ನು ಪುನಃ ಬರಮಾಡುವನು.


ಅನಂತರ ಸೌಲನು ಅಹೀಯನಿಗೆ, “ಏಫೋದನ್ನು ತೆಗೆದುಕೊಂಡು ಬಾ” ಎಂದು ಆಜ್ಞಾಪಿಸಿದನು. ಆ ಕಾಲದಲ್ಲಿ ಇವನು ಇಸ್ರಾಯೇಲರೊಳಗೆ ಏಫೋದನ್ನು ಧರಿಸುತ್ತಿದ್ದನಷ್ಟೆ.


ಯೆಹೋಶುವನು “ಅಯ್ಯೋ, ಕರ್ತನೇ, ಯೆಹೋವನೇ, ನೀನು ಈ ಜನರನ್ನು ಯೊರ್ದನ್ ಹೊಳೆ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೊಪ್ಪಿಸಿ ನಾಶ ಮಾಡಬೇಕೆಂದಿರುವಿಯಾ? ನಾವು ಇಷ್ಟೇ ಸಾಕೆಂದು ಯೊರ್ದನ್ ನದಿಯ ಆಚೆ ಕಡೆಯಲ್ಲೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು.


ನೀವು ಅವರಿಗೆ ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿ ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತು ಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲಕ್ಕೂ ಸಾಕ್ಷಿಗಳಾಗಿರುವವು” ಅಂದನು.


“ನೀವು ಈ ಧರ್ಮಶಾಸ್ತ್ರ ಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಆಜ್ಞಾಶಾಸನಗಳ ಮಂಜೂಷದ ಬಳಿಯಲ್ಲಿ ಇಡಿರಿ. ಇಸ್ರಾಯೇಲರೇ, ಅಲ್ಲಿ ಇದು ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುವುದಾಗಿರಲಿ.


‘ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣವೇನಿದ್ದೀತು?’ ಎಂಬುದಾಗಿ ವಿಚಾರಿಸುವರು.


ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಕುಲವೊಂದಕ್ಕೆ ಸಾವಿರ ಭಟರನ್ನು, ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನನ್ನು, ದೇವರ ಸಾಮಾನುಗಳನ್ನೂ, ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು.


ಯೆಹೋವನ ಮಂಜೂಷ ಪೆಟ್ಟಿಗೆಯು ಹೊರಡುವಾಗ ಮೋಶೆ, “ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಶತ್ರುಗಳು ಬೆನ್ನು ತೋರಿಸಿ ಓಡಿಹೋಗಲಿ” ಎಂದು ಹೇಳುವನು.


ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡುವುದಕ್ಕಾಗಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿನಗಳು ಅವರ ಮುಂದಾಗಿ ಹೋಗುತ್ತಿತ್ತು.


ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ. ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಯೆಹೋವನ ಮಂಜೂಷದ ಮುಂದೆ ನಡೆಯಲಿ” ಎಂದನು.


ಕರ್ತನೇ, ಇಸ್ರಾಯೇಲ್ಯರು ಶತ್ರುಗಳಿಗೆ ಬೆನ್ನು ತೋರಿಸಬೇಕಾಯಿತಲ್ಲಾ.


ಅನಂತರ ಆಕೆಯು ಮೂರು ವರ್ಷದ ಒಂದು ಹೋರಿಯನ್ನೂ, ಒಂದು ಏಫಾ ಹಿಟ್ಟನ್ನೂ, ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರನೊಂದಿಗೆ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು. ಮಗನು ಇನ್ನೂ ಚಿಕ್ಕವನಾಗಿದ್ದನು.


ಇವರು ಇಸ್ರಾಯೇಲರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಲು ಇಸ್ರಾಯೇಲರು ಸೋತರು; ಫಿಲಿಷ್ಟಿಯರು ರಣರಂಗದಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ಇಸ್ರಾಯೇಲರನ್ನು ಸಂಹರಿಸಿದರು.


ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತಹ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.


ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ; ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು