Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 5:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇವರ ಹಸ್ತವು ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ, “ಇಸ್ರಾಯೇಲಿನ ದೇವರ ಮಂಜೂಷವನ್ನು ಹಾಗೆಯೇ ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದೇವರ ಹಸ್ತ ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ರಾಜರೆಲ್ಲರನ್ನು ಕೂಡಿಸಿ, “ಇಸ್ರಯೇಲ್ ದೇವರ ಮಂಜೂಷದಿಂದ ನಮಗೂ ನಮ್ಮ ಜನರಿಗೂ ಮರಣವುಂಟಾಗದ ಹಾಗೆ ಅದನ್ನು ಅದರ ಸ್ಥಳಕ್ಕೆ ಕಳುಹಿಸಿಬಿಡಿ,” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೇವರ ಹಸ್ತವು ಅವರಿಗೂ ಬಾಧಕವಾಗಿದ್ದದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ - ಇಸ್ರಾಯೇಲ್‍ದೇವರ ಮಂಜೂಷದಿಂದ ನಮಗೂ ನಮ್ಮ ಜನರಿಗೂ ಮರಣವುಂಟಾಗದ ಹಾಗೆ ಅದನ್ನು ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಎಕ್ರೋನಿನ ಜನರು ಫಿಲಿಷ್ಟಿಯರ ಅಧಿಪತಿಗಳನ್ನೆಲ್ಲಾ ಒಟ್ಟಿಗೆ ಸೇರಿಸಿ, “ಇಸ್ರೇಲರ ದೇವರ ಪವಿತ್ರಪೆಟ್ಟಿಗೆಯು ನಮ್ಮನ್ನೂ ನಮ್ಮ ಜನರನ್ನೂ ಕೊಲ್ಲುವುದಕ್ಕೆ ಮೊದಲೇ ಅದನ್ನು ಅದರ ಸ್ವಸ್ಥಳಕ್ಕೆ ಕಳುಹಿಸಿ” ಎಂದು ಹೇಳಿದರು. ಎಕ್ರೋನಿನ ಜನರು ಬಹಳ ಹೆದರಿಕೊಂಡಿದ್ದರು. ದೇವರು ಅಲ್ಲಿಯ ಜನರ ಜೀವನವನ್ನು ಬಹು ಕಠಿಣಗೊಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಆ ಇಡೀ ಪಟ್ಟಣಕ್ಕೆ ಮರಣಾಂತಿಕ ವಿನಾಶ ಉಂಟಾಗಿ, ದೇವರ ಕೈ ಅಲ್ಲಿ ಮಹಾಬಾಧಕವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟುಗೂಡಿಸಿ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ, ನಮ್ಮ ಜನರನ್ನೂ ಕೊಂದು ಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರುಗಿ ಹೋಗುವಂತೆ ಕಳುಹಿಸಿಬಿಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 5:11
7 ತಿಳಿವುಗಳ ಹೋಲಿಕೆ  

ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ, ಅದರ ಗ್ರಾಮಗಳಲ್ಲಿಯೂ ಗಡ್ಡೆ ರೋಗವನ್ನು ಬರಮಾಡಿ ಅವರನ್ನು ನಾಶಮಾಡಿದನು.


ಆದ್ದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿರಿ, ನಮ್ಮನ್ನೂ, ನಮಗೆ ಸೇರಿದವರನ್ನೂ ಕೊಲ್ಲುವುದಕ್ಕೋಸ್ಕರ ಇಸ್ರಾಯೇಲಿನ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ” ಎಂದು ಕೂಗಿಕೊಂಡರು.


ನೀವು ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಗಡ್ಡೆ ಮತ್ತು ಇಲಿ ಇವುಗಳ ಸ್ವರೂಪಗಳನ್ನು ಚಿನ್ನದಿಂದ ಮಾಡಿಸಿ, ಇಸ್ರಾಯೇಲಿನ ದೇವರಿಗೆ ಅದನ್ನು ಅರ್ಪಿಸಿ ಮಹಿಮೆಯನ್ನು ಸಲ್ಲಿಸಿದರೆ, ಆತನ ಶಿಕ್ಷಾಹಸ್ತವು ನಿಮ್ಮನ್ನೂ, ನಿಮ್ಮ ದೇವತೆಗಳನ್ನೂ, ಪ್ರಾಂತ್ಯಗಳನ್ನೂ ಬಿಟ್ಟುಹೋದೀತು.


ಆಗ ಫರೋಹನ ಪರಿವಾರದವರು ಅವನಿಗೆ, “ಈ ಮನುಷ್ಯನು ಇನ್ನು ಎಷ್ಟು ದಿನ ನಮಗೆ ಉರುಲಾಗಿರಬೇಕು. ಆ ಜನರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸುವುದಕ್ಕೆ ಅಪ್ಪಣೆಕೊಡು. ಐಗುಪ್ತ ದೇಶವು ಹಾಳಾಯಿತೆಂದು ಇನ್ನು ನಿನ್ನ ಮನಸ್ಸಿಗೆ ಬರಲಿಲ್ಲವೋ?” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು