Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು, “ನೀವು ಇಸ್ರಾಯೇಲಿನ ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು. ಪ್ರಾಯಶ್ಚಿತ್ತದ್ರವ್ಯದೊಡನೆ ಕಳುಹಿಸಿದರೆ ಮಾತ್ರ ಗುಣಹೊಂದುವಿರಿ. ಆತನ ಶಿಕ್ಷಾಹಸ್ತವು ನಿಮ್ಮನ್ನು ಬಾಧಿಸುತ್ತಿರುವುದಕ್ಕೆ ಕಾರಣವು ಗೊತ್ತಾಗುವುದು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮರುತ್ತರವಾಗಿ ಅವರು, “ಇಸ್ರಯೇಲ್ ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು; ನಿಮ್ಮ ಪಾಪಕ್ಕಾಗಿ ಪ್ರಾಯಶ್ಚಿತ್ತ ದ್ರವ್ಯದೊಡನೆ ಕಳುಹಿಸಬೇಕು. ಆಗ ಮಾತ್ರ ನೀವು ಗುಣಹೊಂದುವಿರಿ; ಅಲ್ಲದೆ ಅವರ ದೇವರ ಶಿಕ್ಷಾಹಸ್ತ ನಿಮ್ಮನ್ನು ಬಾಧಿಸುತ್ತಿದ್ದುದಕ್ಕೆ ಕಾರಣ ಗೊತ್ತಾಗುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀವು ಇಸ್ರಾಯೇಲ್‍ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು; ಪ್ರಾಯಶ್ಚಿತ್ತದ್ರವ್ಯದೊಡನೆ ಕಳುಹಿಸಿದರೆ ಮಾತ್ರ ಗುಣಹೊಂದುವಿರಿ; ಆತನ ಶಿಕ್ಷಾಹಸ್ತವು ನಿಮ್ಮನ್ನು ಬಾಧಿಸುತ್ತಿದ್ದದ್ದಕ್ಕೆ ಕಾರಣವು ಗೊತ್ತಾಗುವದು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅರ್ಚಕರು ಮತ್ತು ಮಾಂತ್ರಿಕರು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ಹಿಂದಕ್ಕೆ ಕಳುಹಿಸುವುದಾದರೆ, ಬರಿದಾಗಿ ಕಳುಹಿಸಬೇಡಿ. ನೀವು ಕಾಣಿಕೆಗಳನ್ನು ಕಳುಹಿಸಲೇಬೇಕು. ಆಗ ಇಸ್ರೇಲರ ದೇವರು ನಿಮ್ಮ ಪಾಪಗಳನ್ನು ಪರಿಹರಿಸುತ್ತಾನೆ. ಆಗ ನೀವೆಲ್ಲಾ ಗುಣಹೊಂದುವಿರಿ; ಶುದ್ಧರಾಗುವಿರಿ. ದೇವರು ನಿಮ್ಮನ್ನು ದಂಡಿಸುವುದನ್ನು ನಿಲ್ಲಿಸಬೇಕಾದರೆ ನೀವು ಈ ಕಾರ್ಯಗಳನ್ನು ಮಾಡಬೇಕು. ಆಗ ದೇವರು ನಿಮ್ಮನ್ನು ಬಾಧಿಸುವುದಿಲ್ಲ” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ, ಅದರ ಸಂಗಡ ನಿಶ್ಚಯವಾಗಿ ದೋಷಪರಿಹಾರ ಕಾಣಿಕೆಯನ್ನು ಕಳುಹಿಸಿರಿ, ಆಗ ನೀವು ಸ್ವಸ್ಥರಾಗುವಿರಿ. ಅವರ ಕೈ ನಿಮ್ಮನ್ನು ಬಿಟ್ಟುಹೋಗದೆ ಇರುವ ಕಾರಣ ನಿಮಗೆ ತಿಳಿಯುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:3
15 ತಿಳಿವುಗಳ ಹೋಲಿಕೆ  

ಅ ಹಸುಗಳು ತಾವಾಗಿ ಸ್ವದೇಶದ ದಾರಿ ಹಿಡಿದು ಬೇತ್ ಷೆಮೆಷಿನ ಕಡೆಗೆ ಹೋದರೆ ಈ ದೊಡ್ಡ ಕೇಡನ್ನು ಬರಮಾಡಿದವನು ಯೆಹೋವನೇ ಎಂದೂ, ಆ ಮಾರ್ಗವನ್ನು ಹಿಡಿಯದಿದ್ದರೆ ಆತನ ಹಸ್ತವು ನಮ್ಮನ್ನು ಬಾಧಿಸಲ್ಲಿಲ್ಲ ಇದು ಆಕಸ್ಮಿಕವಾಗಿ ಬಂದಿದೆ ಎಂದು, ತಿಳಿದುಕೊಳ್ಳಿರಿ” ಅಂದರು.


ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.


ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ತಿಂಗಳಲ್ಲಿಯೇ ಐಗುಪ್ತ ದೇಶದಿಂದ ಹೊರಟು ಬಂದ ನೆನಪಿಗಾಗಿ ಇದನ್ನು ಆಚರಿಸಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಬರಿಗೈಯಲ್ಲಿ ನನ್ನ ಸನ್ನಿಧಿಗೆ ಯಾರು ಬರಬಾರದು.


ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ಬದಲು ಕೊಟ್ಟು ಬಿಡಿಸಿಕೊಳ್ಳಲೇ ಬೇಕು. ಒಬ್ಬರೂ ಬರಿಗೈಯಲ್ಲಿ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.


ನಾನು ದೇವರ ಮುಂದೆ, “ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಎನ್ನುವೆನು.


ದೇವರ ಹಸ್ತವು ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ, “ಇಸ್ರಾಯೇಲಿನ ದೇವರ ಮಂಜೂಷವನ್ನು ಹಾಗೆಯೇ ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ” ಅಂದರು.


ಮಂಜೂಷವು ಅಲ್ಲಿ ಹೋದ ಮೇಲೆ ಯೆಹೋವನ ಹಸ್ತವು ಆ ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲವಾಯಿತು. ಯೆಹೋವನು ಊರಿನ ಚಿಕ್ಕವರಲ್ಲಿಯೂ, ದೊಡ್ಡವರಲ್ಲಿಯೂ ಗಡ್ಡೆಗಳನ್ನು ಬರಮಾಡಿದನು.


ಅಷ್ಡೋದಿನ ಜನರು ಅದನ್ನು ನೋಡಿ, “ಇಸ್ರಾಯೇಲಿನ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಏಕೆಂದರೆ ಆತನ ಹಸ್ತವು ನಮಗೂ, ನಮ್ಮ ದೇವರಾದ ದಾಗೋನನಿಗೂ ಬಾಧಕವಾಗಿದೆ” ಎಂದು ಹೇಳಿ


ಅವನು ಪ್ರಾಯಶ್ಚಿತ್ತಕ್ಕಾಗಿ ನಿನಗೆ ಸರಿಯೆಂದು ತೋರುವ ಪೂರ್ಣಾಂಗವಾದ ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವನಿಗೆಂದು ಯಾಜಕನಿಗೆ ಒಪ್ಪಿಸಬೇಕು.


ಅವನು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಅಥವಾ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.


ಆ ಬಂಡಿಯ ಮೇಲೆ ಯೆಹೋವನ ಮಂಜೂಷವನ್ನೂ, ನೀವು ಪ್ರಾಯಶ್ಚಿತ್ತಾರ್ಥವಾಗಿ ಕೊಡುವ ಬಂಗಾರದ ವಸ್ತುಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಟ್ಟು ಕಳುಹಿಸಿಬಿಡಿರಿ.


ಆದರೆ ಫರೋಹನು ಕಪ್ಪೆಗಳ ಕಾಟವು ತೀರಿತೆಂದು ತಿಳಿದುಕೊಂಡಾಗ, ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಯೆಹೋವನು ಹೇಳಿದಂತೆಯೇ ಅವನು, ಮೋಶೆ ಮತ್ತು ಆರೋನನ ಮಾತನ್ನು ಕೇಳದೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು