Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 7:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ಇಸ್ರಾಯೇಲರ ನ್ಯಾಯಗಳನ್ನು ತೀರಿಸುವುದಕ್ಕೋಸ್ಕರ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ಮಿಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ ರಾಮಕ್ಕೆ ತಿರುಗಿ ಬರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವನು ಇಸ್ರಯೇಲರ ನ್ಯಾಯಗಳನ್ನು ತೀರಿಸುವುದಕ್ಕಾಗಿ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ಮಿಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ ರಾಮಾಕ್ಕೆ ತಿರುಗಿ ಬರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು ಇಸ್ರಾಯೇಲ್ಯರ ನ್ಯಾಯಗಳನ್ನು ತೀರಿಸುವದಕ್ಕೋಸ್ಕರ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ವಿುಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ ರಾಮಕ್ಕೆ ತಿರಿಗಿ ಬರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇಸ್ರೇಲಿನಲ್ಲಿ ನ್ಯಾಯಪರಿಪಾಲನೆಗಾಗಿ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್ ಮತ್ತು ಮಿಚ್ಪೆ ಎಂಬ ಪಟ್ಟಣಗಳಿಗೆ ಹೋದನು. ಹೀಗೆ ಅವನು ಈ ಸ್ಥಳಗಳಲ್ಲೆಲ್ಲಾ ಇಸ್ರೇಲರಿಗೆ ನ್ಯಾಯತೀರಿಸುತ್ತಾ ಅವರನ್ನು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನು ಪ್ರತಿವರ್ಷ ಹೊರಟು ಬೇತೇಲನ್ನೂ, ಗಿಲ್ಗಾಲನ್ನೂ, ಮಿಚ್ಪೆಯನ್ನೂ ಸುತ್ತಿಕೊಂಡು ಹೋಗಿ ಆ ಸ್ಥಳಗಳಲ್ಲೆಲ್ಲಾ ಇಸ್ರಾಯೇಲರಿಗೆ ನ್ಯಾಯತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 7:16
15 ತಿಳಿವುಗಳ ಹೋಲಿಕೆ  

ದೇವರು ನುಡಿದದ್ದು, “ನಿಯಮಿತ ಕಾಲವು ಬಂದಾಗ, ನಾನೇ ನೀತಿಯಿಂದ ತೀರ್ಪುಕೊಡುವೆನು.


ಇವನಿಗೆ ನಲ್ವತ್ತು ಮಂದಿ ಮಕ್ಕಳೂ, ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿಮಾಡುವುದಕ್ಕೋಸ್ಕರ ಎಪ್ಪತ್ತು ಕತ್ತೆಗಳಿದ್ದವು. ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲರನ್ನು ಎಂಟು ವರ್ಷಗಳ ಕಾಲ ಪಾಲಿಸಿದ ನಂತರ ಮರಣಹೊಂದಿದನು;


ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ, ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನ ವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ.


“ಬಿಳೀ ಕತ್ತೆಗಳ ಮೇಲೆ ಸವಾರಿಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತುಕೊಳ್ಳುವವರೇ, ಕಾಲ್ನಡಿಗೆಯಲ್ಲಿ ಪ್ರಯಾಣಿಸುವವರೇ, ಗಾನಮಾಡಿರಿ.


ಇದಲ್ಲದೆ ಅವನು ಆ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ “ಲೂಜ್” ಎಂದು ಹೆಸರಿತ್ತು.


ಹೀಗೆ ಯಾಕೋಬನೂ ಅವನ ಸಂಗಡ ಇದ್ದ ಜನರೆಲ್ಲರೂ ಕಾನಾನ್ ದೇಶದಲ್ಲಿರುವ ಬೇತೇಲ್ ಎಂಬ ಲೂಜಿಗೆ ಬಂದರು.


ಯೆಹೋವನು ಯೆಹೋಶುವನಿಗೆ, “ನಾನು ಐಗುಪ್ತ್ಯರ ನಿಂದೆಯನ್ನು ಈ ಹೊತ್ತು ನಿಮ್ಮಿಂದ ನಿವಾರಿಸಿ ಬಿಟ್ಟಿದ್ದೇನೆ” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲ್ ಎಂಬ ಹೆಸರಿರುತ್ತದೆ.


ಇಸ್ರಾಯೇಲ್ಯರು ಗಿಲ್ಗಾಲಿನಲ್ಲಿ ತಂಗಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಯೆರಿಕೋವಿನ ಬೈಲಿನಲ್ಲಿ ಪಸ್ಕಹಬ್ಬವನ್ನು ಆಚರಿಸಿದರು.


ಸಮುವೇಲನು ತಿರುಗಿ ಅವರಿಗೆ, “ಇಸ್ರಾಯೇಲ್ಯರೆಲ್ಲರೂ ಮಿಚ್ಪೆಯಲ್ಲಿ ಕೂಡಿಬರಲಿ; ನಾನು ನಿಮಗೋಸ್ಕರ ಯೆಹೋವನನ್ನು ಪ್ರಾರ್ಥಿಸುವೆನು” ಅಂದನು.


ಸಮುವೇಲನು ಜನರಿಗೆ, “ಬನ್ನಿರಿ; ಗಿಲ್ಗಾಲಿಗೆ ಹೋಗಿ ಸೌಲನ ಅರಸುತನವನ್ನು ಸ್ಥಿರಪಡಿಸೋಣ” ಅನ್ನಲು


ಬೇತೇಲನ್ನು ಆಶ್ರಯಿಸಬೇಡಿರಿ; ಗಿಲ್ಗಾಲನ್ನು ಸೇರಬೇಡಿರಿ; ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಗಿಲ್ಗಾಲು ನಿಶ್ಚಯವಾಗಿ ಸೆರೆಗೆ ಹೋಗುವುದು. ಬೇತೇಲು ಬಯಲಾಗುವುದು.


ಮಿಚ್ಪೆ, ಕೆಫೀರಾ, ಮೋಚಾ,


ಸಮುವೇಲನು ಇಸ್ರಾಯೇಲ್ಯರನ್ನು ಮಿಚ್ಪೆಗೆ ಕರೆಯಿಸಿ ಯೆಹೋವನ ಸನ್ನಿಧಿಯಲ್ಲಿ ಸೇರಿಸಿಕೊಂಡನು.


ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು