Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 7:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮಂಜೂಷವು ಕಿರ್ಯಾತ್ಯಾರೀಮಿಗೆ ಬಂದು ಬಹಳ ದಿನಗಳು ಅಂದರೆ, ಇಪ್ಪತ್ತು ವರ್ಷಗಳು ಕಳೆದು ಹೋದವು. ಈ ಕಾಲದಲ್ಲಿ ಎಲ್ಲಾ ಇಸ್ರಾಯೇಲ್ಯರು ದುಃಖಿಸುತ್ತಾ ಯೆಹೋವನ ಕಡೆಗೆ ತಿರುಗಿಕೊಳ್ಳಲು ಹಂಬಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮಂಜೂಷವು ಕಿರ್ಯತ್ಯಾರೀಮಿಗೆ ಬಂದು ಬಹಳ ದಿವಸಗಳು ಅಂದರೆ, ಇಪ್ಪತ್ತು ವರ್ಷಗಳು ಕಳೆದುಹೋದವು. ಈ ಕಾಲದಲ್ಲಿ ಎಲ್ಲ ಇಸ್ರಯೇಲರು ಸರ್ವೇಶ್ವರನಿಗಾಗಿ ಹಂಬಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮಂಜೂಷವು ಕಿರ್ಯತ್ಯಾರೀವಿುಗೆ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರುಷಗಳು ಕಳೆದುಹೋದವು; ಈ ಕಾಲದಲ್ಲಿ ಎಲ್ಲಾ ಇಸ್ರಾಯೇಲ್ಯರು ಯೆಹೋವನನ್ನೇ ಹಂಬಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ಪೆಟ್ಟಿಗೆಯು ಕಿರ್ಯತ್ಯಾರೀಮಿನವರಲ್ಲಿ ಬಹುಕಾಲದವರೆಗೆ ಅಂದರೆ ಇಪ್ಪತ್ತು ವರ್ಷಗಳವರೆಗೆ ಇತ್ತು. ಇಸ್ರೇಲರು ಯೆಹೋವನ ಮಾರ್ಗವನ್ನು ಮತ್ತೆ ಅನುಸರಿಸಲು ಆರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮಂಜೂಷವು ಕಿರ್ಯತ್ ಯಾರೀಮಿನಲ್ಲಿ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರ್ಷಗಳಾದವು. ಆಗ, ಇಸ್ರಾಯೇಲ್ ಮನೆತನದವರೆಲ್ಲರು ಯೆಹೋವ ದೇವರಿಗೋಸ್ಕರ ಹಂಬಲಿಸಿ ಗೋಳಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 7:2
13 ತಿಳಿವುಗಳ ಹೋಲಿಕೆ  

ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು.


ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.


ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲರೆಲ್ಲರೂ ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು.


ಹೇಗೆಂದರೆ ಇಸ್ರಾಯೇಲ್ಯರು ಮೂರನೆಯ ದಿನದಲ್ಲಿ ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.


ಆಗ ಕಿರ್ಯತ್ಯಾರೀಮಿನವರು ಬಂದು ಯೆಹೋವನ ಮಂಜೂಷವನ್ನು ತೆಗೆದುಕೊಂಡು ಹೋಗಿ, ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿಟ್ಟು, ಅವನ ಮಗನಾದ ಎಲ್ಲಾಜಾರನನ್ನು ಅದರ ಸೇವೆಗೋಸ್ಕರ ಪ್ರತಿಷ್ಠಿಸಿದರು.


ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರುಗಿಕೊಂಡಿರುವುದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ. ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು” ಅಂದನು.


ಅವರು ನಮ್ಮ ಬಳಿಗೆ ಕೂಡಿ ಬಂದ ಮೇಲೆ ನಾವು ಸೌಲನ ಕಾಲದಲ್ಲಿ ಅಲಕ್ಷ್ಯಮಾಡಿದ್ದ ನಮ್ಮ ದೇವರ ಮಂಜೂಷವನ್ನು ತೆಗೆದುಕೊಂಡು ಬರೋಣ” ಎಂದು ಹೇಳಿದನು.


ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.


ಆಗ ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತರುವುದಕ್ಕೋಸ್ಕರ ಐಗುಪ್ತದ ಶೀಹೋರ್ ಹಳ್ಳದಿಂದ ಹಮಾತಿನ ದಾರಿಯ ವರೆಗೂ ವಾಸಿಸುತ್ತಿದ್ದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು