Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 7:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸಮುವೇಲನು ತಿರುಗಿ ಅವರಿಗೆ, “ಇಸ್ರಾಯೇಲ್ಯರೆಲ್ಲರೂ ಮಿಚ್ಪೆಯಲ್ಲಿ ಕೂಡಿಬರಲಿ; ನಾನು ನಿಮಗೋಸ್ಕರ ಯೆಹೋವನನ್ನು ಪ್ರಾರ್ಥಿಸುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸಮುವೇಲನು ಪುನಃ ಅವರಿಗೆ, “ಇಸ್ರಯೇಲರೆಲ್ಲರೂ ಮಿಚ್ಪೆಯಲ್ಲಿ ಕೂಡಿಬರಲಿ; ನಾನು ನಿಮಗೋಸ್ಕರ ಸರ್ವೇಶ್ವರನನ್ನು ಪ್ರಾರ್ಥಿಸುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸಮುವೇಲನು ತಿರಿಗಿ ಅವರಿಗೆ - ಇಸ್ರಾಯೇಲ್ಯರೆಲ್ಲರೂ ವಿುಚ್ಪೆಯಲ್ಲಿ ಕೂಡಿ ಬರಲಿ; ನಾನು ನಿಮಗೋಸ್ಕರ ಯೆಹೋವನನ್ನು ಪ್ರಾರ್ಥಿಸುವೆನು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸಮುವೇಲನು ಅವರಿಗೆ, “ಇಸ್ರೇಲರೆಲ್ಲರೂ ಮಿಚ್ಪೆಯಲ್ಲಿ ಒಟ್ಟುಗೂಡಬೇಕು. ನಾನು ನಿಮಗಾಗಿ ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸಮುಯೇಲನು, “ನಾನು ನಿಮಗೋಸ್ಕರವಾಗಿ ಯೆಹೋವ ದೇವರನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲರನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 7:5
18 ತಿಳಿವುಗಳ ಹೋಲಿಕೆ  

ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ, ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲರೆಲ್ಲರೂ ಏಕಮನಸ್ಸಿನಿಂದ ಹೊರಟು ಮಿಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ಸೇರಿದರು.


ಜನರನ್ನು ಒಟ್ಟುಗೂಡಿಸಿರಿ, ಪವಿತ್ರ ಸಭೆಯನ್ನು ಏರ್ಪಡಿಸಿರಿ. ಹಿರಿಯರನ್ನು ಕೂಡಿಸಿರಿ, ಮಕ್ಕಳನ್ನು ಸೇರಿಸಿರಿ, ಮೊಲೆಕೂಸುಗಳನ್ನು ಸೇರಿಸಿರಿ. ಮದುಮಗನು ತನ್ನ ಕೊಠಡಿಯಿಂದ ಹೊರಟುಬರಲಿ, ವಧುವು ತನ್ನ ಕಲ್ಯಾಣಗೃಹದಿಂದ ಹೊರಟುಬರಲಿ.


ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರಾಯೇಲರು ಉಪವಾಸವಾಗಿದ್ದು ಗೋಣೀತಟ್ಟನ್ನು ಕಟ್ಟಿಕೊಂಡು ತಮ್ಮ ಮೇಲೆ ಮಣ್ಣುಹಾಕಿಕೊಂಡು ನೆರೆದು ಬಂದರು.


ತಪ್ಪಿಸಿಕೊಂಡು ಉಳಿದಿದ್ದ ಯೆಹೂದ ಸೇನಾಧಿಪತಿಗಳು ಗೆದಲ್ಯನು ಬಾಬೆಲಿನ ಅರಸನಿಂದ ಅಧಿಪತಿಯಾಗಿ ನೇಮಿಸಲ್ಪಟ್ಟಿದ್ದಾನೆಂಬ ವರ್ತಮಾನವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು. ಅವರು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲನು, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನಾದ, ತನ್ಹುಮೆತನ ಮಗನಾದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು ಇವರೇ.


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ಸಮುವೇಲನು ಇಸ್ರಾಯೇಲ್ಯರನ್ನು ಮಿಚ್ಪೆಗೆ ಕರೆಯಿಸಿ ಯೆಹೋವನ ಸನ್ನಿಧಿಯಲ್ಲಿ ಸೇರಿಸಿಕೊಂಡನು.


ಅವನು ಇಸ್ರಾಯೇಲರ ನ್ಯಾಯಗಳನ್ನು ತೀರಿಸುವುದಕ್ಕೋಸ್ಕರ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ಮಿಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ ರಾಮಕ್ಕೆ ತಿರುಗಿ ಬರುತ್ತಿದ್ದನು.


ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, “ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದ್ದಾನೆ” ಎಂದು ಹೇಳಿ ಅದಕ್ಕೆ ಎಬೆನೆಜೆರ್ ಎಂದು ಹೆಸರಿಟ್ಟನು.


ದಿಲಾನ್, ಮಿಚ್ಪೆ, ಯೊಕ್ತೇಲ್,


ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ಅವನಿಗೆ ಒಪ್ಪಿಸಿಬಿಡು. ಅವನು ಪ್ರವಾದಿ, ನಿನಗೋಸ್ಕರ ಅವನು ನನಗೆ ವಿಜ್ಞಾಪಿಸುವನು ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸದಿದ್ದರೆ ನೀನೂ ನಿನ್ನವರೆಲ್ಲರೂ ಮರಣಹೊಂದುವಿರಿ ಇದು ಖಂಡಿತ ಎಂದು ತಿಳಿದುಕೋ” ಎಂದು ಕನಸಿನಲ್ಲಿ ಹೇಳಿದನು.


ಅದಲ್ಲದೆ ಅವನು, “ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವನೇ ನಮ್ಮಿಬ್ಬರನ್ನೂ ನೋಡಿಕೊಳ್ಳುತ್ತಾ ಇರುವನು” ಎಂದು ಹೇಳಿದ್ದರಿಂದ ಅದಕ್ಕೆ ಮಿಚ್ಪಾ ಎಂದು ಹೆಸರಾಯಿತು


ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಯಾದಿನಲ್ಲಿ ಇಳಿದುಕೊಳ್ಳಲು ಇಸ್ರಾಯೇಲರು ಸೇರಿ ಮಿಚ್ಪೆಯಲ್ಲಿ ಪಾಳೆಯಮಾಡಿಕೊಂಡರು.


ಹಾಗೆಯೇ ಇಸ್ರಾಯೇಲ್ಯರು ಬಾಳ್ ಅಷ್ಟೋರೆತ್ ದೇವತೆಗಳನ್ನು ತೆಗೆದುಹಾಕಿ ಯೆಹೋವನೊಬ್ಬನನ್ನೇ ಆರಾಧಿಸತೊಡಗಿದರು.


ನ್ಯಾಯಸ್ಥಾಪನೆಗೋಸ್ಕರ ನಮಗೊಬ್ಬ ಅರಸನನ್ನು ನೇಮಿಸಿಕೊಡು ಎಂಬ ಅವರ ಮಾತಿಗೆ ಸಮುವೇಲನು ದುಃಖಪಟ್ಟು ಯೆಹೋವನನ್ನು ಪ್ರಾರ್ಥಿಸಿದನು.


ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ, ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ತಪ್ಪು ಎಂಬುದನ್ನು ತೋರಿಸಿಕೊಡುವನು” ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಟ್ಟನು.


ಆಗ ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಮಧ್ಯದಲ್ಲಿ ಅವನ ಸಂಗಡ ವಾಸಿಸಿದನು.


ಮಿಚ್ಪೆ, ಕೆಫೀರಾ, ಮೋಚಾ,


ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು