Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 7:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಸಮುವೇಲನು ಹಾಲುಕುಡಿಯುವ ಒಂದು ಕುರಿಮರಿಯನ್ನು ತಂದು ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿಸಿ, ಇಸ್ರಯೇಲರ ಪರವಾಗಿ ಪ್ರಾರ್ಥನೆಮಾಡಿದನು. ಸರ್ವೇಶ್ವರ ಸದುತ್ತರವನ್ನು ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು. ಹೇಗಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸಮುವೇಲನು ಕುರಿಮರಿಯೊಂದನ್ನು ತಂದು ಯೆಹೋವನಿಗೆ ಸರ್ವಾಂಗಹೋಮವನ್ನಾಗಿ ಅರ್ಪಿಸಿದನು. ಸಮುವೇಲನು ಇಸ್ರೇಲರಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಸಮುವೇಲನ ಪ್ರಾರ್ಥನೆಗೆ ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಸಮುಯೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು, ಯೆಹೋವ ದೇವರಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು, ಇಸ್ರಾಯೇಲರಿಗೋಸ್ಕರ ಯೆಹೋವ ದೇವರಿಗೆ ಮೊರೆಯಿಟ್ಟನು. ಯೆಹೋವ ದೇವರು ಅವನಿಗೆ ಉತ್ತರವನ್ನು ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 7:9
16 ತಿಳಿವುಗಳ ಹೋಲಿಕೆ  

ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!


ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ, ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ, ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಅಲ್ಲಿ ಅವನ ಸ್ವಂತ ಮನೆಯಿದ್ದುದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ವಿವಾದಗಳನ್ನು ತೀರಿಸುತ್ತಿದ್ದನು.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.


ಅದಕ್ಕೆ ಸಮುವೇಲನು, “ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ” ಎಂದನು. ಅದಕ್ಕೆ ಯೆಹೋವನು, “ನೀನು ಒಂದು ಕರುವನ್ನು ತೆಗೆದುಕೊಂಡು ಹೋಗಿ ಯೆಹೋವನಿಗೋಸ್ಕರ ಯಜ್ಞಮಾಡುವುದಕ್ಕೆ ಬಂದಿದ್ದೇನೆಂದು ಹೇಳಿ ಇಷಯನನ್ನು ಅದಕ್ಕಾಗಿ ಕರೆ.


ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿನಗಳಾದ ನಂತರ ನಾನು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವುದಕ್ಕೋಸ್ಕರ ಅಲ್ಲಿಗೆ ಬಂದು ನೀನು ಮಾಡಬೇಕಾದದ್ದನ್ನು ನಿನಗೆ ತಿಳಿಸುವೆನು; ಅಲ್ಲಿಯ ವರೆಗೆ ಕಾದುಕೊಂಡಿರು” ಎಂದು ಹೇಳಿದನು.


ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ಅವನು ಈಗಲೇ ಇಲ್ಲಿಗೆ ಬಂದಿರುವನು; ಬೇಗನೆ ಹೋಗಿರಿ.


ಊರಿನ ಜನರು ಹೊತ್ತಾರೆಯಲ್ಲೆದ್ದು ಬಾಳನ ಯಜ್ಞವೇದಿಯು ಕೆಡವಲ್ಪಟ್ಟಿರುವುದನ್ನೂ, ಅದರ ಸಮೀಪದಲ್ಲಿದ್ದ ವಿಗ್ರಹಸ್ತಂಭವು ಕಡಿಯಲ್ಪಟ್ಟಿರುವುದನ್ನೂ, ಹೊಸದಾಗಿ ಕಟ್ಟಿದ ಯಜ್ಞವೇದಿಯ ಮೇಲೆ ಎರಡನೆಯ ಹೋರಿಯು ಯಜ್ಞವಾದದ್ದನ್ನೂ ಕಂಡು,


ಈ ಗುಡ್ದದ ಶಿಖರದಲ್ಲಿ ಯೆಹೋವನಿಗೋಸ್ಕರ ನೇಮಕವಾದ ರೀತಿಯಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸು. ನೀನು ಕಡಿದು ಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ, ಆ ಎರಡನೆಯ ಹೋರಿಯನ್ನೂ ಸರ್ವಾಂಗಹೋಮವಾಗಿ ಸಮರ್ಪಿಸು” ಎಂದು ಹೇಳಿದನು.


“ಕರುವಾಗಲಿ, ಕುರಿಮರಿಯಾಗಲಿ ಅಥವಾ ಆಡುಮರಿಯಾಗಲಿ ಹುಟ್ಟಿದಾಗ ಅದು ಏಳು ದಿನಗಳ ವರೆಗೆ ತಾಯಿಯ ಬಳಿಯಲ್ಲಿ ಇರಬೇಕು. ಎಂಟನೆಯ ದಿನದಿಂದ ಅದನ್ನು ಯೆಹೋವನಿಗೆ ಹೋಮವಾಗಿ ಸಮರ್ಪಿಸಿದರೆ ಅದು ಅಂಗೀಕಾರವಾಗುವುದು.


ನಾನು ಆತನನ್ನು ಬೇಡಿಕೊಳ್ಳುತ್ತಾ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.


ನನ್ನ ಹೃದಯದ ಹಾಗೂ ಮನಸ್ಸಿನ ಆಲೋಚನೆಗಳನ್ನು ನೆರವೇರಿಸುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತ ಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.’


ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ, ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ತಪ್ಪು ಎಂಬುದನ್ನು ತೋರಿಸಿಕೊಡುವನು” ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು