Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು, ನ್ಯಾಯವಿರುದ್ಧವಾದ ತೀರ್ಪು ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚ ತೆಗೆದುಕೊಂಡು ನ್ಯಾಯವಿರುದ್ಧವಾದ ತೀರ್ಪು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇವರ ನ್ಯಾಯಾಸನವು ಬೇರ್ಷೆಬದಲ್ಲಿತ್ತು. ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು ನ್ಯಾಯವಿರುದ್ಧವಾದ ತೀರ್ಪುಮಾಡುತ್ತಿದ್ದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಸಮುವೇಲನ ಮಕ್ಕಳು ಅವನಂತೆ ನಡೆದುಕೊಳ್ಳಲಿಲ್ಲ. ಅವರು ಲಂಚವನ್ನು ಪಡೆದು ನ್ಯಾಯಾಲಯದಲ್ಲಿ ಅನ್ಯಾಯದ ತೀರ್ಪುಗಳು ಮಾಡುತ್ತಿದ್ದರು ಮತ್ತು ಜನರನ್ನು ವಂಚಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಅವರು ಸಮುಯೇಲನ ಮಾರ್ಗದಲ್ಲಿ ನಡೆಯದೆ, ಅಪ್ರಾಮಾಣಿಕತೆಯಿಂದ ಹಣ ಸಂಪಾದಿಸಿ, ಲಂಚವನ್ನು ತೆಗೆದುಕೊಂಡು, ನ್ಯಾಯವನ್ನು ತಪ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:3
18 ತಿಳಿವುಗಳ ಹೋಲಿಕೆ  

ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.


ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.


ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ, ಭಕ್ತರೂ, ನಂಬಿಗಸ್ತರೂ, ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.


ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.


ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.


ವ್ಯಾಜ್ಯವಾಗಲಿ, ಬಿನ್ನಹವಾಗಲಿ ಉಳ್ಳವರು ಬಂದು ನ್ಯಾಯವನ್ನು ಪಡೆದುಕೊಳ್ಳುವ ಹಾಗೆ ನನ್ನನ್ನೇ ದೇಶದ ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು” ಎಂದು ಹೇಳುವನು.


ಅವನು ಜ್ಞಾನಿಯೋ ಅಥವಾ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವುದರಲ್ಲಿ ಜ್ಞಾನವನ್ನೂ, ಪ್ರಯಾಸವನ್ನೂ ವೆಚ್ಚಮಾಡಿದ್ದೇನೋ ಅದರ ಮೇಲೆ ದೊರೆತನಮಾಡುವೆನು. ಇದೂ ವ್ಯರ್ಥವೇ.


ಅವರ ಕೈಗಳು ಬಲಾತ್ಕಾರ ನಡೆಸುತ್ತವೆ; ಅವರ ಬಲಗೈ ಲಂಚದಿಂದ ತುಂಬಿದೆ.


ನಿಮ್ಮಲ್ಲಿರುವ ಬಡವರ ನ್ಯಾಯಕೋರಿ ನಿಮ್ಮ ಬಳಿಗೆ ಬಂದಾಗ ನೀವು ಅನ್ಯಾಯವಾಗಿ ತೀರ್ಮಾನಮಾಡಬಾರದು.


ನನ್ನ ಹೃದಯದ ಹಾಗೂ ಮನಸ್ಸಿನ ಆಲೋಚನೆಗಳನ್ನು ನೆರವೇರಿಸುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತ ಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.’


ಇನ್ನು ಮುಂದೆ ಇವನೇ ನಿಮ್ಮ ಅರಸನಾಗಿರುವನು. ಚಿಕ್ಕಂದಿನಿಂದ ನಿಮ್ಮ ನಾಯಕನಾಗಿದ್ದ ನಾನು ಈಗ ತಲೆನರೆತ ಮುದುಕನಾಗಿದ್ದೇನೆ; ನನ್ನ ಮಕ್ಕಳು ನಿಮ್ಮೊಂದಿಗಿದ್ದಾರೆ.


ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು