Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರಿಬ್ಬರೂ ಗುಡ್ಡವನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇದುವುದಕ್ಕೋಸ್ಕರ ಊರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು, “ದರ್ಶಿಯು ಊರಲ್ಲಿದ್ದಾನೋ” ಎಂದು ಕೇಳಿದರು. ಅವರು, “ಇದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರಿಬ್ಬರೂ ಗುಡ್ಡ ಹತ್ತಿ ದೇವಪುರುಷನಿದ್ದ ಪಟ್ಟಣವನ್ನು ಸಮೀಪಿಸಿದರು. ನೀರು ಸೇದುವುದಕ್ಕಾಗಿ ಹೊರಗೆ ಬಂದಿದ್ದ ಮಹಿಳೆಯರನ್ನು ಕಂಡು, “ದಾರ್ಶನಿಕರು ಊರಲ್ಲಿ ಇದ್ದಾರೋ?” ಎಂದು ಕೇಳಲು, ಅವರು “ಹೌದು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರಿಬ್ಬರೂ ದಿನ್ನೆಯನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇದುವದಕ್ಕೋಸ್ಕರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು - ದರ್ಶಿಯು ಊರಲ್ಲಿದ್ದಾನೋ ಎಂದು ಕೇಳಲು ಅವರು - ಇದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸೌಲನು ಮತ್ತು ಆ ಸೇವಕನು ಬೆಟ್ಟದ ಮೇಲೆ ನಡೆಯುತ್ತಾ ಆ ಪಟ್ಟಣಕ್ಕೆ ಹೋದರು. ಆ ದಾರಿಯಲ್ಲಿ ಅವರು ಕೆಲವು ಸ್ತ್ರೀಯರನ್ನು ಸಂಧಿಸಿದರು. ಆ ಸ್ತ್ರೀಯರು ನೀರನ್ನು ತರಲು ಹೋಗುತ್ತಿದ್ದರು. ಸೌಲನು ಮತ್ತು ಆ ಸೇವಕನು, “ದರ್ಶಿಯು ಇಲ್ಲಿರುವನೇ?” ಎಂದು ಆ ಯುವತಿಯರನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ದಿಣ್ಣೆಯನ್ನು ಹತ್ತಿ ಪಟ್ಟಣದೊಳಗೆ ಹೋಗುವಾಗ, ನೀರು ಸೇದಲು ಬರುವ ಹುಡುಗಿಯರನ್ನು ಕಂಡು, “ದರ್ಶಿಯು ಇಲ್ಲಿ ಇದ್ದಾನೋ?” ಎಂದು ಅವರನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:11
9 ತಿಳಿವುಗಳ ಹೋಲಿಕೆ  

ಸಾಯಂಕಾಲದಲ್ಲಿ ಸ್ತ್ರೀಯರು ನೀರು ತರುವುದಕ್ಕೆ ಹೋಗುವಾಗ ಅವನು ಊರಿನ ಹೊರಗಡೆ ಬಾವಿಯ ಹತ್ತಿರ ಒಂಟೆಗಳನ್ನು ಮಲಗಿಸಿ.


ಮಿದ್ಯಾನರ ಯಾಜಕನಿಗೆ ಏಳು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಬಂದು ತಮ್ಮ ತಂದೆಯ ಕುರಿ ಮಂದೆಗಳಿಗೆ ನೀರು ಕುಡಿಸುವುದಕ್ಕಾಗಿ, ನೀರನ್ನು ಸೇದಿ ತೊಟ್ಟಿಗಳಲ್ಲಿ ತುಂಬಿಸುತ್ತಿದ್ದರು.


ಸೇದುವ ಬಾವಿಗಳ ಬಳಿಯಲ್ಲಿ ಬಿಲ್ಲುಗಾರರ ಧ್ವನಿಗಿಂತ ಗಟ್ಟಿಯಾಗಿ ಯೆಹೋವನ ನೀತಿಸಾಧನೆಯ ವರ್ಣನೆಯನ್ನು ಕೇಳಿರಿ. ಆತನು ತನ್ನ ಪ್ರಜೆಗಳಾಗಿರುವ ಇಸ್ರಾಯೇಲ್ ಗ್ರಾಮಸ್ಥರ ನ್ಯಾಯವನ್ನು ಸ್ಥಾಪಿಸಿದ್ದಾನಲ್ಲಾ. ಆ ಕಾಲದಲ್ಲಿ ಯೆಹೋವನ ಜನರು ಊರುಬಾಗಿಲುಗಳಿಗೆ ಇಳಿದು ಬಂದರು.


ಅವನು ಹೀಗೆ ಅಂದುಕೊಳ್ಳುತ್ತಿರುವಾಗಲೇ ಅಬ್ರಹಾಮನ ತಮ್ಮನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು.


ಮಂದೆಗಳೆಲ್ಲವು ಬಂದ ನಂತರ ಅವರು ಬಾವಿಯ ಮೇಲೆ ಮುಚ್ಚಿರುವ ಕಲ್ಲನ್ನು ತೆಗೆದು; ಅನಂತರ ಕುರಿಗಳಿಗೆ ನೀರು ಕುಡಿಸುತ್ತೇವೆ” ಎಂದರು.


ಅವನು ಅವರೊಂದಿಗೆ ಮಾತನಾಡುತ್ತಿರುವಾಗಲೇ ರಾಹೇಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು; ಆಕೆಯೇ ಅವುಗಳನ್ನು ಮೇಯಿಸುತ್ತಿದ್ದಳು.


ಆಗ ಸೌಲನು ಆಳಿಗೆ, “ನೀನು ಹೇಳುವುದು ಒಳ್ಳೆಯದು; ಹೋಗೋಣ ನಡಿ” ಅಂದನು.


ದುಷ್ಟನೇ, ಶಿಷ್ಟನ ಮನೆಗೆ ಹೊಂಚುಹಾಕಬೇಡ, ಅವನ ನಿವಾಸವನ್ನು ಸೂರೆಮಾಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು