Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ಅವನು ಈಗಲೇ ಇಲ್ಲಿಗೆ ಬಂದಿರುವನು; ಬೇಗನೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಈ ದಿನ ನಮ್ಮ ಊರಿನವರು ಗುಡ್ಡದ ಮೇಲೆ ಬಲಿಯನ್ನರ್ಪಿಸುವುದರಿಂದ ಅವರು ಈಗಲೇ ಇಲ್ಲಿಗೆ ಬಂದರು; ಬೇಗನೆ ಹೋಗಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನರ್ಪಿಸುವದರಿಂದ ಅವನು ಈಗಲೇ ಇಲ್ಲಿಗೆ ಬಂದನು; ಬೇಗನೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಯುವತಿಯರು, “ಹೌದು ದರ್ಶಿಯು ಇಲ್ಲಿದ್ದಾನೆ. ಅವನು ದಾರಿಯಲ್ಲಿ ನಿಮಗಿಂತ ಸ್ವಲ್ಪ ಮುಂದೆ ಹೋಗುತ್ತಿದ್ದಾನೆ. ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುವುದರಿಂದ ಅವನು ಇಲ್ಲಿಗೆ ಬಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು ಇವರಿಗೆ ಉತ್ತರವಾಗಿ, “ಅವನು ಇದ್ದಾನೆ, ನಿಮ್ಮ ಮುಂದೆ ಇದ್ದಾನೆ, ಈಗ ಬೇಗ ಹೋಗಿರಿ, ಏಕೆಂದರೆ ಈ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವುದರಿಂದ ಅವನು ಈ ಹೊತ್ತು ಪಟ್ಟಣಕ್ಕೆ ಬಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:12
11 ತಿಳಿವುಗಳ ಹೋಲಿಕೆ  

ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಊಟಮಾಡಲು ಕರೆಯಿಸಿದನು. ಅವರು ಊಟ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು.


ಅದಕ್ಕೆ ಸಮುವೇಲನು, “ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ” ಎಂದನು. ಅದಕ್ಕೆ ಯೆಹೋವನು, “ನೀನು ಒಂದು ಕರುವನ್ನು ತೆಗೆದುಕೊಂಡು ಹೋಗಿ ಯೆಹೋವನಿಗೋಸ್ಕರ ಯಜ್ಞಮಾಡುವುದಕ್ಕೆ ಬಂದಿದ್ದೇನೆಂದು ಹೇಳಿ ಇಷಯನನ್ನು ಅದಕ್ಕಾಗಿ ಕರೆ.


ಅಲ್ಲಿಂದ ಫಿಲಿಷ್ಟಿಯರ ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು.


ಯಾಜಕನಾದ ಚಾದೋಕನನ್ನೂ, ಅವನ ಸಹೋದರರನ್ನೂ ಗಿಬ್ಯೋನಿನ ಪೂಜಾಸ್ಥಳಗಳಲ್ಲಿದ್ದ ಯೆಹೋವನ ಗುಡಾರದ ಬಳಿಯಲ್ಲಿ ಇರಿಸಿದನು.


ಅಲ್ಲಿ ಅವನ ಸ್ವಂತ ಮನೆಯಿದ್ದುದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ವಿವಾದಗಳನ್ನು ತೀರಿಸುತ್ತಿದ್ದನು.


ನನ್ನ ಹೃದಯದ ಹಾಗೂ ಮನಸ್ಸಿನ ಆಲೋಚನೆಗಳನ್ನು ನೆರವೇರಿಸುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತ ಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.’


ನಿನ್ನ ತಂದೆಯು ನನ್ನನ್ನು ಕುರಿತು ವಿಚಾರ ಮಾಡಿದರೆ, ನೀನು, ‘ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಿ ಬರುವುದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಅವನ ಗೋತ್ರದವರು ಅಲ್ಲಿ ವಾರ್ಷಿಕ ಯಜ್ಞಮಾಡುತ್ತಾರೆ’ ಎಂದು ಹೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು