Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕಡೆಗೆ ಅವರು ಚೂಫ್ ದೇಶಕ್ಕೆ ಬಂದಾಗ ಸೌಲನು ತನ್ನ ಆಳಿಗೆ, “ಹಿಂದಿರುಗಿ ಹೋಗೋಣ ನಡಿ; ನಮ್ಮ ತಂದೆಯು ಈಗ ಕತ್ತೆಗಳ ಚಿಂತೆ ಬಿಟ್ಟು ನಮ್ಮ ಚಿಂತೆಯಲ್ಲಿರಬಹುದು” ಅಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕಡೆಗೆ ಅವರು ಚೂಫ್ ನಾಡಿಗೆ ಬಂದರು. ಅಲ್ಲಿ ಅವನು ತನ್ನ ಆಳಿಗೆ, “ಹಿಂದಿರುಗಿ ಹೋಗೋಣ ನಡೆ; ನಮ್ಮ ತಂದೆ ಈ ಕತ್ತೆಗಳ ಚಿಂತೆಯನ್ನೇ ಬಿಟ್ಟು ನಮ್ಮ ಚಿಂತೆಯಲ್ಲಿ ಇರಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕಡೆಗೆ ಅವರು ಚೂಫ್‍ದೇಶಕ್ಕೆ ಬಂದಾಗ ಅವನು ತನ್ನ ಆಳಿಗೆ - ಹಿಂದಿರುಗಿ ಹೋಗೋಣ ನಡಿ; ನಮ್ಮ ತಂದೆಯು ಈಗ ಕತ್ತೆಗಳ ಚಿಂತೆ ಬಿಟ್ಟು ನಮ್ಮ ಚಿಂತೆಯಲ್ಲಿದ್ದಾನು ಅನ್ನಲು ಆ ಆಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕೊನೆಗೆ, ಸೌಲನು ಮತ್ತು ಅವನ ಸೇವಕನು ಚೂಫ್ ಎಂಬ ಹೆಸರಿನ ಪಟ್ಟಣಕ್ಕೆ ಬಂದರು. ಸೌಲನು ಸೇವಕನಿಗೆ, “ನಾವು ಮರಳಿ ಹೋಗೋಣ. ನಮ್ಮ ತಂದೆಯು ಕತ್ತೆಗಳ ಬಗ್ಗೆ ಯೋಚಿಸುವುದನ್ನು ಬಿಟ್ಟು ನಮ್ಮ ಬಗ್ಗೆ ಚಿಂತಿಸಲಾರಂಭಿಸುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಚೂಫ್ ಎಂಬ ದೇಶಕ್ಕೆ ಬಂದಾಗ, ಸೌಲನು ತನ್ನ ಸಂಗಡ ಇದ್ದ ಸೇವಕನಿಗೆ, “ನನ್ನ ತಂದೆಯು ಕತ್ತೆಗಳ ಮೇಲೆ ಇರುವ ಚಿಂತೆಯನ್ನು ಬಿಟ್ಟು, ನಮಗೋಸ್ಕರ ಚಿಂತೆ ಪಡದ ಹಾಗೆ ನಾವು ಹಿಂದಕ್ಕೆ ಹೋಗೋಣ ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:5
7 ತಿಳಿವುಗಳ ಹೋಲಿಕೆ  

ಈ ಹೊತ್ತು ನೀನು ನನ್ನನ್ನು ಬಿಟ್ಟುಹೋದ ನಂತರ ಬೆನ್ಯಾಮೀನ್ಯರ ಮೇರೆಯೊಳಗಿರುವ ರಾಹೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ಮನುಷ್ಯರನ್ನು ಕಾಣುವಿ. ಅವರು ನಿನಗೆ, ‘ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆಯು ಕತ್ತೆಗಳ ಚಿಂತೆಬಿಟ್ಟು ನನ್ನ ಮಗನು ಎಲ್ಲಿ ಹೋದನು ಎಂಬುದಾಗಿ ನಿನಗೋಸ್ಕರ ಹಂಬಲಿಸುತ್ತಿರುತ್ತಾನೆ’ ಎಂದು ಹೇಳುವರು.


ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ರಾಮಾತಯಿಮ್ ಚೋಫೀಮ್ ಊರಿನಲ್ಲಿ ಎಲ್ಕಾನನೆಂಬ ಒಬ್ಬ ಮನುಷ್ಯನಿದ್ದನು. ಇವನು ಯೆರೋಹಾಮನ ಮಗನೂ ಎಲೀಹುವಿನ ಮೊಮ್ಮಗನೂ ತೋಹುವಿನ ಮರಿಮಗನೂ ಆಗಿದ್ದನು. ತೋಹು ಎಂಬವನು ಎಫ್ರಾಯೀಮ್ಯನಾದ ಚೂಫನ ಮಗನು.


ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ.


ಇದಲ್ಲದೆ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬುದಾಗಿ ನಿಮಗೆ ಹೇಳುತ್ತೇನೆ.


ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ;


“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.


ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು