Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಎಲೀಯನು ಪಂಚದಶಾಧಿಪತಿಗೆ, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದಕ್ಕೆ ಎಲೀಯನು, “ನಾನು ದೈವಪುರುಷನಾಗಿ ಇರುವುದು ನಿಜವಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತುಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ,” ಎಂದನು. ಕೂಡಲೆ ಆಕಾಶದಿಂದ ಬೆಂಕಿಬಿದ್ದು ಅವನನ್ನೂ ಅವನ ಐವತ್ತುಮಂದಿ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದಕ್ಕೆ ಎಲೀಯನು - ನಾನು ದೇವರ ಮನುಷ್ಯನಾಗಿರುವದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ ಅಂದನು. ಕೂಡಲೆ ಆಕಾಶದಿಂದ ಬೆಂಕಿಬಿದ್ದು ಅವನನ್ನೂ ಅವನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಎಲೀಯನು ಐವತ್ತು ಮಂದಿಯ ಸೇನಾಧಿಪತಿಗೆ, “ನಾನು ಒಬ್ಬ ದೇವಮನುಷ್ಯನಾಗಿರುವದಾದರೆ ಪರಲೋಕದಿಂದ ಬೆಂಕಿಯು ಕೆಳಗಿಳಿದು ಬಂದು ನಿನ್ನನ್ನೂ ನಿನ್ನ ಐವತ್ತು ಸೈನಿಕರನ್ನೂ ನಾಶಗೊಳಿಸಲಿ!” ಎಂದು ಉತ್ತರಿಸಿದನು. ಆಗ ಬೆಂಕಿಯು ಪರಲೋಕದಿಂದ ಬಂದು ಆ ಸೇನಾಧಿಪತಿಯನ್ನು ಮತ್ತು ಅವನ ಐವತ್ತು ಮಂದಿ ಸೈನಿಕರನ್ನು ನಾಶಗೊಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದಕ್ಕೆ ಎಲೀಯನು ಪ್ರಧಾನನಿಗೆ ಉತ್ತರವಾಗಿ, “ನಾನು ದೇವರ ಮನುಷ್ಯನಾಗಿದ್ದರೆ, ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ,” ಎಂದನು. ಆಗ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 1:10
22 ತಿಳಿವುಗಳ ಹೋಲಿಕೆ  

ಆತನ ಶಿಷ್ಯರಾದ ಯಾಕೋಬ, ಯೋಹಾನರು ಇದನ್ನು ಕಂಡು, “ಕರ್ತನೇ, ಆಕಾಶದಿಂದ ಬೆಂಕಿಬಿದ್ದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞಾಪಿಸುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು,


ಅದಕ್ಕೆ ಅವನು, “ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ” ಎಂದು ಹೇಳಿದನು.


ಏಕೆಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.


ಹೀಗಾಗಿ ರಾಜಾಜ್ಞೆಯು ಖಂಡಿತವಾಗಿದ್ದುದರಿಂದಲೂ ಬೆಂಕಿಯ ಕಾವು ಅತಿ ತೀಕ್ಷ್ಣವಾಗಿದ್ದುದರಿಂದಲೂ ಅಗ್ನಿಜ್ವಾಲೆಯು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಎತ್ತಿ ಹಾಕಿದವರನ್ನೇ ದಹಿಸಿಬಿಟ್ಟಿತು.


ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿಯು ಹೊರಟು ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಕೇಡನ್ನು ಉಂಟುಮಾಡಬಯಸುವವರಿಗೆ ಆ ರೀತಿಯಾಗಿ ಹತರಾಗಬೇಕು.


ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; ಅಗ್ನಿಜ್ವಾಲೆಯು ದುಷ್ಟರನ್ನು ದಹಿಸಿಬಿಟ್ಟಿತು.


ಅವನು ಮಾತನಾಡುತ್ತಿರುವಾಗಲೇ ಮತ್ತೊಬ್ಬನು ಬಂದು, “ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿಗಳನ್ನೂ, ಆಳುಗಳನ್ನೂ ದಹಿಸಿ ನುಂಗಿಬಿಟ್ಟಿದೆ. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.


ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದ್ದರಿಂದ, ಕಾವಲುಗಾರರನ್ನು ವಿಚಾರಣೆಮಾಡಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಹೆರೋದನು ಯೂದಾಯದಿಂದ ಕೈಸರೈಗೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು.


ಅವರು ಆತನಿಗೆ, “ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು” ಎಂದು ಹೇಳಿದರು.


ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.


“ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು” ಎಂದು ಹೇಳಿದನು.


ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.


ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತವಾಗಿ ಬರುವುದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ” ಎಂದು ಹೇಳಿ “ಎಲ್ಲಾ ಜನರೇ, ಇದನ್ನು ಕೇಳಿರಿ” ಎಂದು ಕೂಗಿದನು.


ನಂತರ ಯೆಹೋವನ ಬಳಿಯಿಂದ ಬೆಂಕಿಹೊರಟು, ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ದಹಿಸಬಿಟ್ಟಿತು.


ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.


ತರುವಾಯ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನೂ, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಹೋಗಿ ಎಲೀಯನಿಗೆ “ದೇವರ ಮನುಷ್ಯನೇ ಬೇಗನೆ ಇಳಿದು ಬಾ, ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.


ಆಗ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ದಹಿಸಿಬಿಟ್ಟಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು