Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 1:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಎಲೀಯನು, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ, ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದಕ್ಕೆ ಎಲೀಯನು, “ನಾನು ದೈವಪುರುಷ ಹೌದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತುಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ,” ಎಂದನು. ಕೂಡಲೆ ದೇವರು ಆಕಾಶದಿಂದ ಕಳುಹಿಸಿದ ಬೆಂಕಿ ಬಂದು ಅವನನ್ನೂ ಅವನ ಐವತ್ತುಮಂದಿ ಸಿಪಾಯಿಗಳನ್ನೂ ಸುಟ್ಟುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಎಲೀಯನು ಅವನಿಗೆ - ನಾನು ದೇವರ ಮನುಷ್ಯನಾಗಿರುವದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ ಎಂದನು. ಕೂಡಲೆ ದೇವರು ಆಕಾಶದಿಂದ ಕಳುಹಿಸಿದ ಬೆಂಕಿಯು ಬಂದು ಅವನನ್ನೂ ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಸುಟ್ಟುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಎಲೀಯನು ಸೇನಾಧಿಪತಿಗೆ ಮತ್ತು ಅವನ ಐವತ್ತು ಮಂದಿ ಜನರಿಗೆ, “ನಾನು ದೇವಮನುಷ್ಯನಾಗಿದ್ದರೆ ಪರಲೋಕದಿಂದ ಬೆಂಕಿಯು ಕೆಳಗಿಳಿದು ಬಂದು ನಿನ್ನನ್ನೂ ನಿನ್ನ ಐವತ್ತು ಜನರನ್ನೂ ನಾಶಗೊಳಿಸಲಿ!” ಎಂದು ಹೇಳಿದನು. ಆಗ ಪರಲೋಕದಿಂದ ದೇವರ ಬೆಂಕಿಯು ಇಳಿದು ಬಂದು ಸೇನಾಧಿಪತಿಯನ್ನೂ ಅವನ ಐವತ್ತು ಜನರನ್ನೂ ನಾಶಗೊಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಎಲೀಯನು ಅವರಿಗೆ ಉತ್ತರವಾಗಿ, “ನಾನು ದೇವರ ಮನುಷ್ಯನಾಗಿದ್ದರೆ, ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ,” ಎಂದನು. ಆಗ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 1:12
6 ತಿಳಿವುಗಳ ಹೋಲಿಕೆ  

ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ, ಕಟ್ಟಿಗೆ, ಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.


ತರುವಾಯ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನೂ, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಹೋಗಿ ಎಲೀಯನಿಗೆ “ದೇವರ ಮನುಷ್ಯನೇ ಬೇಗನೆ ಇಳಿದು ಬಾ, ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.


ಆಗ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಬೇಡಿಕೊಂಡು ಅವನಿಗೆ, “ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.


ಆಗ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ದಹಿಸಿಬಿಟ್ಟಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.


ಅವನು ಮಾತನಾಡುತ್ತಿರುವಾಗಲೇ ಮತ್ತೊಬ್ಬನು ಬಂದು, “ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿಗಳನ್ನೂ, ಆಳುಗಳನ್ನೂ ದಹಿಸಿ ನುಂಗಿಬಿಟ್ಟಿದೆ. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು