Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 1:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಬೇಡಿಕೊಂಡು ಅವನಿಗೆ, “ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅರಸನು ಮತ್ತೊಬ್ಬ ಪಚಾಶದಧಿಪತಿಯನ್ನು ಅವನ ಐವತ್ತುಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು, ಎಲೀಯನ ಮುಂದೆ ಮೊಣಕಾಲೂರಿ, “ದೈವಪುರುಷರೇ, ನನ್ನ ಮತ್ತು ನನ್ನ ಸೇವಕರಾದ ಈ ಐವತ್ತುಮಂದಿಯ ಪ್ರಾಣ ನಿಮ್ಮ ದೃಷ್ಟಿಯಲ್ಲಿ ಮೌಲ್ಯವುಳ್ಳದ್ದಾಗಿರಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅರಸನು ಮತ್ತೊಬ್ಬ ಪಂಚದಶಾಧಿಪತಿಯನ್ನು ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಅವನನ್ನು - ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಹಜ್ಯನು ಮೂರನೆಯ ಸೇನಾಧಿಪತಿಯನ್ನು ಐವತ್ತು ಜನರೊಂದಿಗೆ ಕಳುಹಿಸಿದನು. ಐವತ್ತು ಮಂದಿಯ ಮೂರನೆಯ ಸೇನಾಧಿಪತಿಯು ಎಲೀಯನ ಬಳಿಗೆ ಬಂದನು. ಸೇನಾಧಿಪತಿಯು ತನ್ನ ಮೊಣಕಾಲುಗಳ ಮೇಲೆ ಬಿದ್ದು ನಮಸ್ಕರಿಸಿದನು. ಸೇನಾಧಿಪತಿಯು ಎಲೀಯನನ್ನು ಬೇಡಿಕೊಳ್ಳುತ್ತಾ ಅವನಿಗೆ, “ದೇವ ಮನುಷ್ಯನೇ, ನನ್ನ ಮತ್ತು ಈ ಐವತ್ತು ಜನರ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತಿರುಗಿ ಅರಸನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವನನ್ನೂ, ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯವನು ಬಂದು ಎಲೀಯನ ಮುಂದೆ ತನ್ನ ಮೊಣಕಾಲೂರಿಕೊಂಡು ಅವನಿಗೆ, “ದೇವರ ಮನುಷ್ಯನೇ, ನೀನು ದಯಮಾಡು, ನನ್ನ ಪ್ರಾಣವೂ, ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಮೌಲ್ಯವುಳ್ಳದ್ದಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 1:13
17 ತಿಳಿವುಗಳ ಹೋಲಿಕೆ  

ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.


ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.


ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.


ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ.


ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ, ಮೂರ್ಖತನವು ಅವನಿಂದ ತೊಲಗದು.


ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ, ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು.


ಕುಯುಕ್ತಿ, ಬಲಾತ್ಕಾರಗಳಿಗೆ ತಪ್ಪಿಸಿ ಅವರ ಜೀವವನ್ನು ಕಾಯುವನು; ಅವರ ಜೀವವು ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.


ಅರಸನು ಆ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ಪ್ರಸನನ್ನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು” ಎಂದು ಕೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡಿದ್ದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.


ಆಗ ಸೌಲನು ಅವನಿಗೆ, “ನಾನು ಪಾಪಮಾಡಿದೆನು, ದಾವೀದನೇ ನನ್ನ ಮಗನೇ ಹಿಂದಿರುಗಿ ಬಾ. ಈ ಹೊತ್ತು ನನ್ನ ಜೀವವು ನಿನ್ನ ದೃಷ್ಟಿಯಲ್ಲಿ ಬಹು ಬೆಲೆಯುಳ್ಳದೆಂದು ಎಣಿಸಲ್ಪಟ್ಟಿತು. ಆದ್ದರಿಂದ ನಾನು ಇನ್ನು ಮುಂದೆ ನಿನಗೆ ಕೇಡುಮಾಡುವುದಿಲ್ಲ. ಈ ವರೆಗೆ ನಾನು ಮಾಡಿದ್ದು ಹುಚ್ಚುತನವೂ ದೊಡ್ಡ ತಪ್ಪೂ ಆಗಿದೆ” ಎಂದು ಹೇಳಿದನು


ಆಗ ನಿನ್ನ ಪರಿವಾರದವರೆಲ್ಲರೂ, ನನ್ನ ಬಳಿಗೆ ಬಂದು ಅಡ್ಡಬಿದ್ದು, ‘ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟು ಹೋಗಬೇಕು’ ಎಂದು ಬೇಡುವರು. ಆ ಮೇಲೆ ನಾನು ಹೊರಟುಹೋಗುವೆನು” ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕೋಪಾವೇಶವುಳ್ಳವನಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.


ಆಗ ಎಲೀಯನು, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ, ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.


ಆಕಾಶದಿಂದ ಬೆಂಕಿಬಿದ್ದು ಮೊದಲು ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ, ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ, ನನ್ನ ಪ್ರಾಣವಾದರೂ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ” ಎಂದು ಬೇಡಿಕೊಂಡನು.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು