Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 1:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಕಿಟಿಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬುದನ್ನು ವಿಚಾರಿಸಿರಿ” ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಹಜ್ಯನು ಸಮಾರಿಯದಲ್ಲಿದ್ದ ತನ್ನ ಮೇಲುಪ್ಪರಿಗೆಯ ಕಿಟಕಿಯೊಂದರಿಂದ ಬಿದ್ದು ಅಸ್ವಸ್ಥನಾಗಿದ್ದನು. ಅವನು ತನ್ನ ಸೇವಕರನ್ನು ಕರೆದು, “ನೀವು ಎಕ್ರೋನಿನ ದೇವರಾದ ‘ಬಾಳ್ಜೆಬೂಬ’ನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ಗುಣವಾಗುವೆನೋ ಇಲ್ಲವೋ, ಎಂದು ವಿಚಾರಿಸಿ ಬನ್ನಿ,” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಜಾಳಾಂಧರ ಕಿಟಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ - ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬದನ್ನು ವಿಚಾರಿಸಿರಿ ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಒಂದು ದಿನ, ಅಹಜ್ಯನು ಸಮಾರ್ಯದ ತನ್ನ ಮನೆಯ ಮಾಳಿಗೆಯ ಮೇಲಿದ್ದನು. ಅಹಜ್ಯನು ಮನೆಯ ಮೇಲಿನ ಮರದ ಕಂಬಗಳ ಮೂಲಕ ಕೆಳಕ್ಕೆ ಬಿದ್ದನು. ಅವನಿಗೆ ಬಹಳ ಗಾಯಗಳಾದವು. ಅಹಜ್ಯನು ಸಂದೇಶಕರನ್ನು ಕರೆದು ಅವರಿಗೆ, “ಎಕ್ರೋನಿನ ದೇವರಾದ ಬಾಳ್ಜೆಬೂಬನ ಅರ್ಚಕರ ಬಳಿಗೆ ಹೋಗಿ, ನನ್ನ ಗಾಯಗಳು ಗುಣವಾಗುತ್ತವೆಯೇ ಎಂಬುದನ್ನು ಅವರಿಂದ ತಿಳಿದುಕೊಳ್ಳಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಹಜ್ಯನು ಸಮಾರ್ಯದಲ್ಲಿದ್ದ ತನ್ನ ಮೇಲುಪ್ಪರಿಗೆಯ ಕಿಟಕಿಯೊಂದರಿಂದ ಬಿದ್ದು ಅಸ್ವಸ್ಥನಾಗಿದ್ದನು. ಅವನು ತನ್ನ ಸೇವಕರನ್ನು ಕರೆದು, “ಎಕ್ರೋನಿನ ದೇವರಾದ ‘ಬಾಳ್ ಜೆಬೂಬನ’ ಸನ್ನಿಧಿಗೆ ಹೋಗಿ, ನಾನು ಈ ಅಸ್ವಸ್ಥತೆಯಿಂದ ಗುಣವಾಗುವೆನೋ ಇಲ್ಲವೋ? ಎಂದು ವಿಚಾರಿಸಿ ಬನ್ನಿ,” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 1:2
25 ತಿಳಿವುಗಳ ಹೋಲಿಕೆ  

ನಂತರ ಎಲೀಯನು ಅರಸನಿಗೆ, “ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರ ಮಾಡುವುದಕ್ಕೆ ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇಬೇಕು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.


ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ” ಹೇಳುತ್ತಿದ್ದರು.


ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?


ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದರು, ಏಕೆಂದರೆ ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು.


ಆದರೆ ಅವರಲ್ಲಿ ಕೆಲವರು, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ” ಅಂದರು.


ನನ್ನ ತಂದೆತಾತಂದಿರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?


ಅದಕ್ಕೆ ಅವರು, “ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ, ‘ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ’ ಯೆಹೋವನ ಹೆಸರಿನಲ್ಲಿ ಅವನಿಗೆ, ‘ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಕಳುಹಿಸುವುದೇನು? ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಹೇಳಿರಿ ಎಂದು ಆಜ್ಞಾಪಿಸಿದನು” ಎಂದು ಉತ್ತರ ಕೊಟ್ಟರು.


ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಹೋಗುವುದೇನು ಇಸ್ರಾಯೇಲರಲ್ಲಿ ದೇವರಿಲ್ಲವೋ?


ಇದಲ್ಲದೆ ಆತನು ನಿನಗೆ, “ಸೊಲೊಮೋನನೂ ಅವರ ಮನೆಯವರೂ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ‘ಕೆಮೋಷ್’ ಮತ್ತು ಅಮ್ಮೋನಿಯರ ‘ಮಿಲ್ಕೋಮ್’ ಇವುಗಳನ್ನು ಆರಾಧಿಸಿದ್ದೂ ಮತ್ತು ಅವರ ತಂದೆಯಾದ ದಾವೀದನು ನನ್ನ ನೇಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡೆಯದೆ ಹೋದದ್ದೇ ಇದಕ್ಕೆ ಕಾರಣ.


ಯೂತಿಖನೆಂಬ ಒಬ್ಬ ಯೌವನಸ್ಥನು ಕಿಟಿಕಿಯ ಹೊಸ್ತಿಲಿನಲ್ಲಿ ಕುಳಿತುಕೊಂಡು ಗಾಢನಿದ್ರೆಯಿಂದ ತೂಕಡಿಸುತ್ತಿದ್ದನು. ಪೌಲನು ಇನ್ನೂ ಬೋಧನೆ ಮಾಡುತ್ತಾ ಇದ್ದಾಗ ಆ ಯೌವನಸ್ಥನು ಗಾಢವಾದ ನಿದ್ರೆಯಿಂದ ತೂಕಡಿಸಿ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬಿದ್ದುಬಿಟ್ಟನು; ಅವನನ್ನು ಎಬ್ಬಿಸಲು ಹೋದಾಗ ಅವನು ಸತ್ತುಹೋಗಿದ್ದನು.


ನನ್ನ ಪ್ರಿಯನು ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇದ್ದಾನೆ. ಆಹಾ, ಇಗೋ ನಮ್ಮ ಗೋಡೆಯ ಆಚೆ ನಿಂತು, ಕಿಟಕಿಗಳ ಮೂಲಕ ನೋಡುತ್ತಾನೆ, ಜಾಲಾಂದ್ರಗಳ ಮೂಲಕ ಇಣಿಕುಹಾಕುತ್ತಾನೆ!


ಆತನು ಅನ್ಯಾಯಗಾರರಿಗೆ ವಿಪತ್ತನ್ನೂ, ಕೆಡುಕರಿಗೆ ಉಪದ್ರವವನ್ನೂ ಕೊಡುತ್ತಾನಲ್ಲವೆ?


ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿಯಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ಹಿಂತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ಕರೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು.


ನೀನು ಹತ್ತು ರೊಟ್ಟಿಗಳನ್ನೂ, ಒಂದಷ್ಟು ಸಿಹಿಪದಾರ್ಥವನ್ನೂ ಮತ್ತು ಒಂದು ಕುಪ್ಪೆ ಜೇನುತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಹುಡುಗನಿಗೆ ಏನಾಗುವುದೆಂದು ಅವನು ತಿಳಿಸುವನು” ಎಂದು ಹೇಳಿದನು.


ಆದ್ದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿರಿ, ನಮ್ಮನ್ನೂ, ನಮಗೆ ಸೇರಿದವರನ್ನೂ ಕೊಲ್ಲುವುದಕ್ಕೋಸ್ಕರ ಇಸ್ರಾಯೇಲಿನ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ” ಎಂದು ಕೂಗಿಕೊಂಡರು.


ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವಾಧೀನಪಡಿಸಿಕೊಳ್ಳುವುದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವನು ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವಾಧೀನಪಡಿಸಿಕೊಳ್ಳುವುದು ನ್ಯಾಯವಾಗಿದೆ.


“ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು; ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ಕೂಗಿದಳು. ‘ಅವನ ರಥವು ಬರುವುದಕ್ಕೆ ಏಕೆ ಇಷ್ಟುಹೊತ್ತಾಯಿತು! ಅವನ ಕುದುರೆಗಳ ಗೊರಸುಗಳಿಗೆ ಇಷ್ಟು ಸಾವಕಾಶವೇಕೆ’ ಅಂದಳು.


ಯಾಕೋಬಿನ ಮನೆತನದವರು ಪೂರ್ವದೇಶಗಳಲ್ಲಿ ಮಂತ್ರತಂತ್ರಗಳಲ್ಲಿ ಮಗ್ನರೂ, ಫಿಲಿಷ್ಟಿಯರ ಹಾಗೆ ಕಣಿ ಹೇಳುವವರೂ, ಅನ್ಯದೇಶಗಳವರ ಸಂಗಡ ಒಪ್ಪಂದ ಮಾಡುವವರೂ ಆಗಿರುವುದರಿಂದ ಯೆಹೋವನೇ ಈ ನಿನ್ನ ಜನರನ್ನು ಕೈಬಿಟ್ಟಿದ್ದೀ.


ಮುಂದೆ ಉತ್ತರದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡದ ಮೇಲೆ ಯಬ್ನೇಲಿಗೆ ಹೋಗಿ ಸಮುದ್ರದಲ್ಲಿ ಮುಗಿಯುತ್ತದೆ.


ಅಹಾಬನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಅಹಜ್ಯ ಎಂಬುವನು ಅರಸನಾದನು.


ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವನಮೂರ್ತಿಗಳು, ಅಶೇರ ವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು. ಆಕಾಶಸೈನ್ಯ, ಬಾಳ್ ದೇವತೆ ಇವುಗಳನ್ನು ಪೂಜಿಸಿದರು.


ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು