Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ, ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ, “ನಿನ್ನ ವಿಷಯದಲ್ಲಿ, ನನ್ನ ಹೃದಯವು ಯಥಾರ್ಥವಾಗಿರುವಂತೆ ನಿನ್ನ ಹೃದಯವು ಯಥಾರ್ಥವಾಗಿರುವುದೋ?” ಎಂದು ಕೇಳಿದನು. ಅವನು, “ಹೌದು” ಎಂದು ಉತ್ತರ ಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಯನ್ನು ಕೊಡು” ಎನ್ನಲು ಅವನು ತನ್ನ ಕೈಯನ್ನು ಕೊಟ್ಟನು. ಯೇಹುವು ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿದನು. “ನಿನ್ನ ವಿಷಯದಲ್ಲಿ ನನ್ನ ಮನಸ್ಸು ಯಥಾರ್ಥವಾಗಿರುವಂತೆ ನಿನ್ನ ಮನಸ್ಸು ಯಥಾರ್ಥವಾಗಿ ಇರುತ್ತದೋ?’ ಎಂದು ಕೇಳಿದನು. ಅವನು, “ಹೌದು,” ಎಂದು ಉತ್ತರಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಕೊಡು,” ಎನ್ನಲು ಅವನು ಕೈಕೊಟ್ಟನು. ಯೇಹುವು ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ಅಲ್ಲಿಂದ ಮುಂದೆ ಹೋಗುತ್ತಿರುವಾಗ ತನ್ನನ್ನು ಎದುರುಗೊಳ್ಳುವದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ - ನಿನ್ನ ವಿಷಯದಲ್ಲಿ ನನ್ನ ಮನಸ್ಸು ಯಥಾರ್ಥವಾಗಿರುವಂತೆ ನಿನ್ನ ಮನಸ್ಸೂ ಯಥಾರ್ಥವಾಗಿರುತ್ತದೋ ಎಂದು ಕೇಳಿದನು. ಅವನು - ಹೌದು ಎಂದು ಉತ್ತರಕೊಟ್ಟನು. ಆಗ ಯೇಹುವು - ಹಾಗಾದರೆ ನಿನ್ನ ಕೈಕೊಡು ಅನ್ನಲು ಅವನು ಕೈಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೇಹುವು ಅಲ್ಲಿಂದ ಹೋದ ಮೇಲೆ, ರೇಕಾಬನ ಮಗನಾದ ಯೆಹೋನಾದಾಬನನ್ನು ಸಂಧಿಸಿದನು. ಯೆಹೋನಾದಾಬನು ಯೇಹುವನ್ನು ಸಂಧಿಸಲು ಬರುತ್ತಿದ್ದನು. ಯೇಹು ಯೆಹೋನಾದಾಬನನ್ನು ಅಭಿನಂದಿಸಿ ಅವನಿಗೆ, “ನಾನು ನಿನಗೆ ನಂಬಿಗಸ್ತನಾಗಿರುವಂತೆ ನೀನು ನನಗೆ ನಂಬಿಗಸ್ಥನಾದ ಸ್ನೇಹಿತನಾಗಿರುವಿಯಾ?” ಎಂದು ಕೇಳಿದನು. ಯೆಹೋನಾದಾಬನು, “ಹೌದು, ನಾನು ನಿನಗೆ ನಂಬಿಗಸ್ಥನಾದ ಸ್ನೇಹಿತನು” ಎಂದು ಉತ್ತರಿಸಿದನು. ಯೇಹು, “ನೀನು ನಂಬಿಗಸ್ಥನಾದರೆ, ನಿನ್ನ ಕೈಯನ್ನು ಕೊಡು” ಎಂದನು. ನಂತರ ಯೇಹು ಹೊರಬಂದು, ಯೆಹೋನಾದಾಬನನ್ನು ರಥದೊಳಕ್ಕೆ ಎಳೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೇಹುವು ಅಲ್ಲಿಂದ ಹೋಗಿ, ತನ್ನನ್ನು ಎದುರುಗೊಳ್ಳಲು ಬಂದ ರೇಕಾಬನ ಮಗ ಯೆಹೋನಾದಾಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ, “ನನ್ನ ಹೃದಯವು ನಿನ್ನ ಹೃದಯದ ಸಂಗಡ ಇರುವ ಹಾಗೆ ನಿನ್ನ ಹೃದಯವು ಯಥಾರ್ಥವಾಗಿ ಇದೆಯೋ?” ಎಂದನು. ಯೆಹೋನಾದಾಬನು, “ಇದೆ,” ಎಂದನು. “ಹಾಗಾದರೆ ನಿನ್ನ ಕೈ ಕೊಡು,” ಎಂದನು. ಇವನು ತನ್ನ ಕೈ ಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಹತ್ತಿಸಿಕೊಂಡು ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:15
20 ತಿಳಿವುಗಳ ಹೋಲಿಕೆ  

ಏಕೆಂದರೆ ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಡಂಬಡಿಕೆಯನ್ನು ಮೀರಿದನಲ್ಲವೇ? ಕೈಯ ಮೇಲೆ ಕೈಯಿಟ್ಟು ಆಣೆಮಾಡಿದರೆ ಪ್ರಯೋಜನವೇನು? ಇದನ್ನೆಲ್ಲಾ ಮಾಡಿದ್ದರಿಂದ ಇವನು ಪಾರಾಗನು.”


ಇವರು ತಮ್ಮ ಹೆಂಡತಿಯರನ್ನು ಕಳುಹಿಸಿಬಿಡುವುದಾಗಿ ಕೈ ಮುಟ್ಟಿ ಪ್ರಮಾಣಮಾಡಿ ತಾವು ಅಪರಾಧಿಗಳೆಂದು ಒಪ್ಪಿಕೊಂಡು ಪ್ರಾಯಶ್ಚಿತ್ತವಾಗಿ ಒಂದು ಟಗರನ್ನು ಸಮರ್ಪಿಸಿದರು.


ಯಾಬೇಚಿನಲ್ಲಿ ವಾಸಿಸುವ ಬರವಣಿಗೆಯಲ್ಲಿ ಮತ್ತು ದಾಖಲೆಗಳನ್ನು ಬರೆಯುವುದರಲ್ಲೂ ಮತ್ತು ಪ್ರತಿಗಳನ್ನು ಮಾಡುವುದರಲ್ಲೂ ಪ್ರವೀಣರಾದ ತಿರ್ರಾತ್ಯರು, ಶಿಮ್ಗಾತ್ಯರು ಮತ್ತು ಸೂಕಾತ್ಯರು, ಇವರು ರೇಕಾಬನ ಮನೆಯವರ ಮೂಲ ಪುರುಷನಾಗಿರುವ ಹಮತನಿಂದ ಹುಟ್ಟಿದ ಕೇನ್ಯರು.


ಸಹೋದರರೇ, ನಾನು ನಿಮ್ಮಂತೆ ಆದಹಾಗೆ ನೀವು ನನ್ನಂತೆ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಅನ್ಯಾಯ ಮಾಡಲಿಲ್ಲ.


ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ಅದಕ್ಕೆ ಅವನು, “ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದೀತು?” ಎಂದು ಹೇಳಿ, ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕುಳಿತುಕೋ ಎಂಬುದಾಗಿ ಫಿಲಿಪ್ಪನನ್ನು ಕೇಳಿಕೊಂಡನು.


ಯೇಹುವು ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ, “ನೀವು ಯಾರು?” ಎಂದು ಕೇಳಿದನು. ಅದಕ್ಕೆ ಅವರು, “ನಾವು ಅಹಜ್ಯನ ಸಹೋದರರು. ರಾಜಪುತ್ರರನ್ನೂ, ರಾಜಮಾತೆಯ ಮಕ್ಕಳನ್ನೂ ವಂದಿಸುವುದಕ್ಕೋಸ್ಕರ ಇಲ್ಲಿಗೆ ಬಂದಿದ್ದೇವೆ” ಎಂದು ಉತ್ತರ ಕೊಟ್ಟರು.


ಯೋರಾಮನು ರಥವನ್ನು ಸಿದ್ಧಮಾಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಸಿದ್ಧಮಾಡಿದರು. ಆಗ ಇಸ್ರಾಯೇಲರ ಅರಸನಾದ ಯೋರಾಮನು ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮ ತಮ್ಮ ರಥಗಳಲ್ಲಿ ಕುಳಿತುಕೊಂಡು ಯೇಹುವನ್ನು ಎದುರುಗೊಳ್ಳುವುಕ್ಕಾಗಿ ಹೊರಟು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.


ಪುನಃ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.


ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರೆದುಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು, ಯಾಕೋಬನು ಫರೋಹನನ್ನು ಆಶೀರ್ವದಿಸಿದನು.


ಮುಂಜಾನೆ ಲಾಬಾನನು ಎದ್ದು ತನ್ನ ಹೆಣ್ಣು ಮಕ್ಕಳಿಗೂ, ಮೊಮ್ಮಕ್ಕಳಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿ ತನ್ನ ಮನೆಗೆ ಹಿಂತಿರುಗಿ ಹೋದನು.


ಆಗ ಯೇಹುವು ತನ್ನ ಸೇವಕರಿಗೆ, “ಅವರನ್ನು ಜೀವಸಹಿತ ಹಿಡಿಯಿರಿ” ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ಕೊಂದು, ಉಣ್ಣೆ ಕತ್ತರಿಸುವ ಮನೆಯ ಬಾವಿಯಲ್ಲಿ ಹಾಕಿಬಿಟ್ಟರು. ಅವರು ನಲ್ವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ತಪ್ಪಿಸಿಕೊಳ್ಳಲು ಬಿಡಲಿಲ್ಲ.


“ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಯೆಹೋವನ ಆಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು” ಎಂಬುದೇ.


ಅವರು ಈ ಮಾತು ಶುಭವಚನವೆಂದು ನೆನಸಿ ಕೂಡಲೆ ಅವನ ಮಾತನ್ನೇ ಹಿಡಿದು, “ಬೆನ್ಹದದನು ನಿನ್ನ ಸಹೋದರನೇ ಹೌದು” ಅಂದರು. ಅವನು ಅವರಿಗೆ, “ಹೋಗಿ ಬೆನ್ಹದದನನ್ನು ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸಲು ಅವನು ಬಂದಾಗ ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.


ತಿಪ್ಪೆಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಬೇತ್ ಹಕ್ಕೆರೆಮಿನ ಅರ್ಧ ಪಟ್ಟಣಗಳ ಒಡೆಯನೂ, ರೇಕಾಬನ ಮಗನೂ ಆದ ಮಲ್ಕೀಯ. ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿದನು.


ದುಷ್ಟರಿಗೆ ವಿರುದ್ಧವಾಗಿ ನನಗೋಸ್ಕರ ಏಳುವವರು ಯಾರು? ಕೆಡುಕರಿಗೆ ವಿರುದ್ಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು