Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವರು ಅಲ್ಲಿನ ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಬಾಳ್ ದೇವತೆಯ ದೇವಸ್ಥಾನಕ್ಕೆ ಸೇರಿದ ಕೇರಿಯನ್ನು ಪ್ರವೇಶಿಸಿ ಅಲ್ಲಿನ ವಿಗ್ರಹಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಲ್ಲಿನ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅವರು ಬಾಳನ ಆಲಯದಲ್ಲಿದ್ದ ಸ್ಮಾರಕಸ್ತಂಭಗಳನ್ನು ಹೊರತಂದು, ಆಲಯವನ್ನು ಸುಟ್ಟುಹಾಕಿದರು. ನಂತರ ಅವರು ಬಾಳನ ಸ್ಮಾರಕಸ್ತಂಭಗಳನ್ನು ಚೂರುಚೂರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಬಾಳನ ದೇವಸ್ಥಾನದಿಂದ ವಿಗ್ರಹಗಳನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:26
15 ತಿಳಿವುಗಳ ಹೋಲಿಕೆ  

ತಮ್ಮ ಪೂರ್ವಿಕರಂತೆಯೇ ಅವರೂ ತಮಗೋಸ್ಕರ ಪೂಜಾ ಸ್ಥಳಗಳನ್ನು ನಿರ್ಮಿಸಿಕೊಂಡರು. ಪ್ರತಿಯೊಂದು ದಿಣ್ಣೆಗಳ ಮೇಲೆ ಹಾಗೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಕಲ್ಲಿನ ಕಂಬಗಳನ್ನೂ ಮತ್ತು ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.


ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ. ಮನುಷ್ಯರು ಕೆತ್ತಿದ ಕಲ್ಲು ಮತ್ತು ಮರಗಳ ಬೊಂಬೆಗಳಷ್ಟೇ. ಆದುದರಿಂದ ಅವುಗಳನ್ನು ಹಾಳುಮಾಡುವುದು ಅವರಿಗೆ ಸಾಧ್ಯವಾಯಿತು.


ಇವನು ತನ್ನ ತಂದೆತಾಯಿಗಳಷ್ಟು ದುಷ್ಟನಾಗಿರಲಿಲ್ಲ. ಆದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆ ಬಾಳನಿಗೋಸ್ಕರ ನಿಲ್ಲಿಸಿದ ಕಲ್ಲಿನ ಸ್ತಂಭ, ಸ್ಮಾರಕಗಳನ್ನು ತೆಗೆದುಹಾಕಿದನು.


ಫಿಲಿಷ್ಟಿಯರು ಅಲ್ಲಿ ಬಿಟ್ಟು ಹೋಗಿದ್ದ ವಿಗ್ರಹಗಳನ್ನು ದಾವೀದನೂ ಅವನ ಜನರೂ ತೆಗೆದುಕೊಂಡು ಬಂದರು.


ಬಾಳ್ ದೇವರಿಗೋಸ್ಕರ ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿ, ಅದರಲ್ಲಿ ಯಜ್ಞವೇದಿಯನ್ನು ಮಾಡಿಸಿದನು.


ಯೆಹೂದ್ಯರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಎದುರಿನಲ್ಲಿಯೇ ಕೊಂದು, ದೇವಸ್ಥಾನವನ್ನೂ ಅದರಲ್ಲಿದ್ದ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ಯೆಹೋವನ ದೇವಾಲಯಕ್ಕೆ ಕಾವಲಿಟ್ಟನು.


ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ, ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ.


ಆದುದರಿಂದ ನೀವು ಹೀಗೆ ಮಾಡಬೇಕು, ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಪವಿತ್ರವಾದ ಕಲ್ಲಿನ ಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು, ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಅವನ ತಾಯಿಯಾದ ಮಾಕಳೂ ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ, ಆ ಮೂರ್ತಿಯನ್ನು ಕಡಿದು, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟು ಹಾಕಿದನು.


ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರು‍ಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್” ಎಂಬ ಹೆಸರಿತ್ತು.


ತರುವಾಯ ಅರಸನು ಮಹಾಯಾಜಕನಾದ ಹಿಲ್ಕೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತೇಲಿಗೆ ಕಳುಹಿಸಿದನು.


ಯೆಹೋವನ ಆಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು.


ಇದಲ್ಲದೆ, ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ, ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿ ಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.


ಫಿಲಿಷ್ಟಿಯರು ಅಲ್ಲಿ ಬಿಟ್ಟುಹೋಗಿದ್ದ ದೇವರುಗಳನ್ನು ಸುಟ್ಟುಬಿಡುವಂತೆ ದಾವೀದನು ಅಪ್ಪಣೆ ಕೊಟ್ಟನು.


ಯಜ್ಞವೇದಿಗಳನ್ನು ಕೆಡವಿಸಿ ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಒಡೆದು ಪುಡಿಪುಡಿ ಮಾಡಿಸಿ ಇಸ್ರಾಯೇಲ್ ದೇಶದಲ್ಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಹಾಕಿಸಿ ಯೆರೂಸಲೇಮಿಗೆ ಹಿಂದಿರುಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು