Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಲ್ಲದೆ ಯೆಹೋಯಾದಾವನು ಶತಾಧಿಪತಿಗಳನ್ನು, ಕಾರಿಯರು ಎನ್ನಿಸಿಕೊಳ್ಳುವ ಸೈನ್ಯಗಳ ಕಾವಲುದಂಡನ್ನು, ಸಾಧಾರಣ ಜನರನ್ನು ಅವರೊಡನೆ ಅರಸನಾದ ಯೆಹೋವಾಷನನ್ನು ಯೆಹೋವನ ಆಲಯದಲ್ಲಿ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಬಳಿಕ ಶತಾಧಿಪತಿಗಳು, ‘ಕಾರಿ’ ಎನಿಸಿಕೊಳ್ಳುವ ಸೈನ್ಯ, ಕಾವಲುದಂಡು ಹಾಗು ಜನಸಾಮಾನ್ಯರು ಇವರೊಡನೆ ಅರಸನನ್ನು ಸರ್ವೇಶ್ವರನ ಆಲಯದಿಂದ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ, ಅರಮನೆಗೆ ಕರೆದುಕೊಂಡು ಹೋಗಿ, ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋಯಾದಾವನು ದೇವಾಲಯಕ್ಕೆ ಕಾವಲಿಟ್ಟು ಶತಾಧಿಪತಿಗಳು, ಕಾರಿ ಎನಿಸಿಕೊಳ್ಳುವ ಸೈನ್ಯ, ಕಾವಲುದಂಡು, ಸಾಧಾರಣ ಜನರು ಇವರೊಡನೆ ಅರಸನನ್ನು ಯೆಹೋವನ ಆಲಯದಿಂದ ಕಾವಲುದಂಡಿನವರ ಬಾಗಲಿನ ಮಾರ್ಗವಾಗಿ ಅರಮನೆಗೆ ಕರಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು. ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯಾಜಕನು ಜನರನ್ನೆಲ್ಲ ಕರೆದುಕೊಂಡು ಹೋದನು. ಅವರು ಸಿಪಾಯಿಗಳ ದ್ವಾರದ ಮೂಲಕ ಅರಮನೆಗೆ ಹೋದರು. ರಾಜನ ವಿಶೇಷ ಅಂಗರಕ್ಷಕರು ಮತ್ತು ಸೇನಾಧಿಪತಿಗಳು ರಾಜನ ಜೊತೆಯಲ್ಲಿ ಹೋದರು. ಅವರನ್ನು ಇತರ ಜನರೆಲ್ಲರೂ ಹಿಂಬಾಲಿಸಿದರು. ಅವರು ರಾಜನ ಅರಮನೆಯ ಬಾಗಿಲಿಗೆ ಹೋದರು. ನಂತರ ರಾಜನಾದ ಯೆಹೋವಾಷನು ಸಿಂಹಾಸನದ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನು ಶತಾಧಿಪತಿಗಳನ್ನೂ, “ಕಾರಿ” ಎಂಬ ಸಿಪಾಯಿಗಳ ಅಧಿಕಾರಿಗಳನ್ನೂ, ಕಾವಲುಗಾರರನ್ನೂ, ದೇಶದ ಜನರೆಲ್ಲರನ್ನೂ ಕರೆದುಕೊಂಡು ಹೋಗಿ, ಅರಸನನ್ನು ಯೆಹೋವ ದೇವರ ಆಲಯದಿಂದ ಕಾವಲುಗಾರರ ಬಾಗಿಲ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಬಂದು, ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:19
13 ತಿಳಿವುಗಳ ಹೋಲಿಕೆ  

“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;


ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಯೆಹೋವನು, “ಇವನನ್ನು ಮಕ್ಕಳಿಲ್ಲದವನು, ವ್ಯರ್ಥಜನ್ಮದವನು ಎಂದು ಪಟ್ಟಿಯಲ್ಲಿ ಬರೆಯಿರಿ; ಇವನ ಸಂತಾನದಲ್ಲಿ ಇನ್ನು ಮೇಲೆ ಯಾರೂ ದಾವೀದನ ಸಿಂಹಾಸನದಲ್ಲಿ ಕುಳಿತು ಯೆಹೂದವನ್ನು ಆಳಿ ಬಾಳನು” ಎಂದು ಹೇಳುತ್ತಾನೆ.


“ನೀವು ಈ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಂಡರೆ ದಾವೀದನ ಸಿಂಹಾಸನಾರೂಢರಾದ ಅರಸರು ರಥಾಶ್ವಗಳನ್ನೇರಿದವರಾಗಿ ತಮ್ಮ ಸೇವಕರೊಡನೆಯೂ, ಪ್ರಜೆಗಳೊಡನೆಯೂ ಈ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು.


ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ, ಪ್ರಭುಗಳೂ ರಥಾಶ್ವಗಳನ್ನು ಏರಿದವರಾಗಿ ಈ ಪಟ್ಟಣದ ಬಾಗಿಲುಗಳನ್ನು ಪ್ರವೇಶಿಸುವರು. ಇವರು, ಇವರ ಪ್ರಧಾನರು, ಯೆಹೂದದ ಜನರು, ಯೆರೂಸಲೇಮಿನ ನಿವಾಸಿಗಳು, ಎಲ್ಲರೂ ಇಲ್ಲಿ ಸೇರುವರು. ಈ ಪಟ್ಟಣವು ನಿತ್ಯವೂ ನೆಲೆಯಾಗಿರುವುದು.


ಯಾವ ವಿಷಯದಲ್ಲಾದರೂ ಅಶುದ್ಧನಾದವನು ಯೆಹೋವನ ಆಲಯವನ್ನು ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು.


ಇನ್ನೊಂದು ಭಾಗದವರು ಅರಸನ ಅರಮನೆಯನ್ನೂ, ಮತ್ತೊಂದು ಭಾಗದವರು ಯೆಸೋದ್ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲೇ ಇರಬೇಕು.


ಅಂದಿನಿಂದ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲು ಅರಸನಾಗಿ ಯೆಹೋವನ ಸಿಂಹಾಸನದಲ್ಲಿ ಕುಳಿತುಕೊಂಡು ವೃದ್ಧಿಯಾಗುತ್ತಾ ಬಂದನು. ಅರಸನಾದ ಸೊಲೊಮೋನನಿಗೆ ಇಸ್ರಾಯೇಲರೆಲ್ಲರೂ ವಿಧೇಯರಾಗಿ ನಡೆಯುವವರಾದರು.


ನೀನು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ, ‘ನನ್ನ ಒಡೆಯನಾದ ಅರಸನು ತನ್ನ ತರುವಾಯ ನನ್ನ ಮಗನಾದ ಸೊಲೊಮೋನನೇ ಆಳಬೇಕು. ಅವನೇ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂದು ತಮ್ಮ ದಾಸಿಯಾದ ನನಗೆ ಪ್ರಮಾಣ ಮಾಡಿ ಹೇಳಿದ್ದನಲ್ಲಾ. ಹೀಗಿದ್ದ ಮೇಲೆ ಅದೋನೀಯನು ಆಳುವುದೇಕೆ’ ಎಂದು ಕೇಳು.


ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.


ಆಮೇಲೆ ಅವನು ಶತಾಧಿಪತಿಗಳು, ಶ್ರೀಮಂತರು, ಜನನಾಯಕರು ಹಾಗೂ ಸಾಧಾರಣ ಜನರು ಇವರೊಡನೆ ಅರಸನನ್ನು ಯೆಹೋವನ ಆಲಯದಿಂದ ಮೇಲಣ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.


ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು