Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದರೆ ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಅತಲ್ಯಳಿಂದ ಹತರಾಗಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯರೊಡನೆ ಅವನನ್ನು ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆದರೆ ಅರಸ ಯೆಹೋರಾಮನ ಮಗಳೂ ಅಹಜ್ಯನ ತಂಗಿಯೂ ಆದ ಯೆಹೋಷೆಬ ಎಂಬಾಕೆ, ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗ ಯೆಹೋವಾಷನನ್ನು, ಹತವಾಗುವುದಕ್ಕಿದ್ದ ರಾಜಪುತ್ರರ ಮಧ್ಯೆಯಿಂದ, ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಬಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಹತವಾಗುವದಕ್ಕಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋಷೆಬಳು ರಾಜನಾದ ಯೋರಾಮನ ಮಗಳಾಗಿದ್ದಳು ಮತ್ತು ಅಹಜ್ಯನ ಸೋದರಿಯಾಗಿದ್ದಳು. ಯೆಹೋವಾಷನು ರಾಜನ ಮಕ್ಕಳಲ್ಲಿ ಒಬ್ಬನಾಗಿದ್ದನು. ಅತಲ್ಯಳು ಇತರ ಮಕ್ಕಳನ್ನು ಕೊಲ್ಲುವಾಗ ಯೆಹೋಷೆಬಳು ಯೆಹೋವಾಷನನ್ನು ತೆಗೆದುಕೊಂಡು ಹೋದಳು. ಅವಳು ಯೆಹೋವಾಷನನ್ನು ಮತ್ತು ಅವನ ದಾದಿಯನ್ನು ತನ್ನ ಮಲಗುವ ಕೊಠಡಿಯಲ್ಲಿ ಅಡಗಿಸಿದಳು. ಯೆಹೋವಾಷನನ್ನು ಅವನ ದಾದಿಯು ಮತ್ತು ಯೆಹೋಷೆಬಳು ಅತಲ್ಯಳಿಂದ ತಪ್ಪಿಸಿ ಅಡಗಿಸಿಟ್ಟರು. ಈ ರೀತಿ ಯೆಹೋವಾಷನನ್ನು ಕೊಲ್ಲಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಆದ ಯೆಹೋಷೆಬಳು ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನು ಹತನಾಗದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯಳಿಗೆ ಕಾಣದ ಹಾಗೆ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:2
24 ತಿಳಿವುಗಳ ಹೋಲಿಕೆ  

ಆಗ ಅವನು ನನಗೆ, “ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೋಣೆಯು ದೇವಾಲಯದ ಮೇಲ್ವಿಚಾರಣೆಯನ್ನು ನಡೆಸುವ ಯಾಜಕರಿಗೆ ನೇಮಕವಾಗಿದೆ.


“ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಯೆಹೋವನ ಆಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು” ಎಂಬುದೇ.


ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೆನು. ನಾನು ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.”


ಆಗ ನನ್ನ ದಾಸನಾದ ದಾವೀದನಿಗೂ, ನನ್ನ ಸೇವಕರಾಗಿರುವ ಲೇವಿಯರಾದ ಯಾಜಕರಿಗೂ ನಾನು ಮಾಡಿದ ನಿಬಂಧನೆಯು ನಿಂತು ಹೋಗಿ ದಾವೀದನ ಸಿಂಹಾಸನಾಸೀನನಾಗಿ ಆಳತಕ್ಕ ಅವನ ಸಂತಾನದವನೊಬ್ಬನೂ ಉಳಿಯದೆ ಹೋದಾನು.


ಯೆಹೋವನು ಇಂತೆನ್ನುತ್ತಾನೆ, “ದಾವೀದನ ವಂಶವು ನಿಂತು ಹೋಗದೆ ಆ ಸಂತಾನದವರು ಇಸ್ರಾಯೇಲರ ಸಿಂಹಾಸನದಲ್ಲಿ ತಪ್ಪದೆ ಆಸೀನರಾಗುತ್ತಾ ಬರುವರು.


ನನಗೋಸ್ಕರವಾಗಿಯೂ, ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ಹೇಳುತ್ತಾನೆ ಎಂಬುದೇ.


ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.


ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆಯು, ಹತರಾಗುತ್ತಿದ್ದ ರಾಜಪುತ್ರರ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷನನ್ನು, ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ಸಹೋದರಿಯೂ, ಯಾಜಕನಾದ ಯೆಹೋಯಾದನ ಹೆಂಡತಿಯೂ, ಆಗಿದ್ದ ಯೆಹೋಷಬತಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು.


ಯೆಹೋವಾಷನು ಅರಸನಾದಾಗ ಅವನು ಏಳು ವರ್ಷದವನಾಗಿದ್ದನು.


ಆದರೂ, ಯೆಹೋವನು ಯೆಹೂದ ರಾಜ್ಯವನ್ನು ನಾಶಮಾಡಲಿಲ್ಲ. ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ ಎಂಬುದಾಗಿ ತನ್ನ ಸೇವಕನಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ಸ್ಮರಿಸಿ ಅದನ್ನು ಉಳಿಸಿದನು.


ಅಹಾಬನ ಮಗನೂ ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಯೆಹೂದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು.


ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು ಐದೈದು ಮೊಳ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಸೇರಿಸಲ್ಪಟ್ಟಿದ್ದವು.


ಕೆಳಗಿನ ಕೊಠಡಿಗೆ ಹೋಗುವ ಬಾಗಿಲು ಆಲಯದ ಬಲಗಡೆಯಲ್ಲಿತ್ತು. ಅಲ್ಲಿಂದ ಮಧ್ಯದ ಅಂತಸ್ತಿಗೂ ಮತ್ತು ಮೂರನೆಯ ಅಂತಸ್ತಿಗೂ ಹೋಗಲು ಸುರುಳಿಯಾಕಾರದ ಮೆಟ್ಟಲುಗಳಿದ್ದವು.


ನೈಲ್ ನದಿಯಲ್ಲಿ ಕಪ್ಪೆಗಳು ಅಸಂಖ್ಯಾತವಾಗಿ ಹುಟ್ಟುವವು. ಅವು ಹೊರಟು ಬಂದು ನಿನ್ನ ಅರಮನೆಯಲ್ಲಿಯೂ, ಮಲಗುವ ಕೋಣೆಯಲ್ಲಿಯೂ, ಮಂಚದ ಮೇಲೆಯೂ ಬರುವುದಲ್ಲದೆ ನಿನ್ನ ಪರಿವಾರದವರ ಮನೆಗಳಲ್ಲಿಯೂ, ನಿನ್ನ ಪ್ರಜೆಗಳ ಮೇಲೆಯೂ, ಒಲೆಗಳಲ್ಲಿಯೂ, ಹಿಟ್ಟು ನಾದುವ ಪಾತ್ರೆಗಳಲ್ಲಿಯೂ ಬರುವವು.


ಅವರ ನಾಯಕನಾಗಿ ಹೊರಟು, ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು, ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು.


ಹೀಗೆ ಅವನು ಅತಲ್ಯಳಿಂದ ಹತವಾಗದಂತೆ ತಪ್ಪಿಸಿ ಕೊಂಡು ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಯೆಹೋವನ ಆಲಯದಲ್ಲಿದ್ದನು. ಆ ಆರು ವರ್ಷಗಳಲ್ಲಿ ಅತಲ್ಯಳೇ ದೇಶವನ್ನು ಆಳುತ್ತಿದ್ದಳು.


ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ, ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಇವನ ತಾಯಿ.


ಆ ಸಮಯದಲ್ಲಿ ಬಾಲಕನಾದ ಹದದನು ತನ್ನ ತಂದೆಯ ಸೇವಕರಾದ ಕೆಲವು ಜನರು ಎದೋಮ್ಯರ ಜೊತೆಯಲ್ಲಿ ಐಗುಪ್ತಕ್ಕೆ ಓಡಿಹೋಗಬೇಕೆಂದು ಹೊರಟನು.


ಯೆಹೋಷಾಫಾಟನ ಮಗ ಯೆಹೋರಾಮ್; ಯೆಹೋರಾಮನ ಮಗ ಅಹಜ್ಯನು, ಅಹಜ್ಯನ ಮಗ ಯೋವಾಷನು.


ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ ಇವರಿಗೆ ಲೇಖಕನಾದ ಬಾರೂಕನನ್ನೂ ಮತ್ತು ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು