Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಳನೆಯ ವರ್ಷದಲ್ಲಿ, ಯೆಹೋಯಾದಾವನು ಕಾರಿಯರ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಆಪ್ತನಾಗಿದ್ದು ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡ ನಂತರ ರಾಜಕುಮಾರನನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಳನೆಯ ವರ್ಷದಲ್ಲಿ ಯೆಹೋಯಾದಾವನು ‘ಕಾರಿ’ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಸರ್ವೇಶ್ವರನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಪ್ರಮಾಣಪೂರ್ವಕವಾದ ಒಪ್ಪಂದವನ್ನು ಮಾಡಿಕೊಂಡನಂತರ ರಾಜಕುಮಾರನನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಏಳನೆಯ ವರುಷದಲ್ಲಿ ಯೆಹೋಯಾದಾವನು ಕಾರಿ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರಿಸಿದನು. ಅಲ್ಲಿ ಅವನು ಅವರ ಸಂಗಡ ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಏಳನೆ ವರ್ಷದಲ್ಲಿ, ಪ್ರಧಾನ ಯಾಜಕನಾದ ಯೆಹೋಯಾದಾವನು ಕೆರೇತ್ಯರ ಸೇನಾಧಿಪತಿಗಳನ್ನು ಮತ್ತು ಕಾವಲುಗಾರರನ್ನು ಕರೆಸಿಕೊಂಡನು. ಯೆಹೋಯಾದಾವನು ಅವರನ್ನೆಲ್ಲ ಯೆಹೋವನ ಆಲಯದಲ್ಲಿ ಒಟ್ಟಾಗಿ ಸೇರಿಸಿದನು. ನಂತರ ಯೆಹೋಯಾದಾವನು ಅವರೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಯೆಹೋಯಾದಾವನು ಆಲಯದಲ್ಲಿ ಅವರು ವಾಗ್ದಾನ ಮಾಡುವಂತೆ ಬಲತ್ಕಾರಗೊಳಿಸಿದನು. ನಂತರ ಅವನು ಅವರಿಗೆ ರಾಜನ ಮಗನನ್ನು (ಯೆಹೋವಾಷನನ್ನು) ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಳನೆಯ ವರ್ಷದಲ್ಲಿ ಯೆಹೋಯಾದಾವನು ಶತಾಧಿಪತಿಯಾದವರನ್ನೂ, ಕಾರಿ ಎಂಬ ಸಿಪಾಯಿಗಳ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯಿಸಿ, ತನ್ನ ಬಳಿಗೆ ಯೆಹೋವ ದೇವರ ಆಲಯಕ್ಕೆ ಕರೆದುಕೊಂಡು ಬಂದನು. ಅವರ ಸಂಗಡ ಒಡಂಬಡಿಕೆಯನ್ನು ಮಾಡಿ, ಯೆಹೋವ ದೇವರ ಆಲಯದಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು, ಅನಂತರ ಅವನಿಗೆ ಅರಸನ ಮಗನನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:4
24 ತಿಳಿವುಗಳ ಹೋಲಿಕೆ  

ಅಲ್ಲದೆ ಯೆಹೋಯಾದಾವನು ಶತಾಧಿಪತಿಗಳನ್ನು, ಕಾರಿಯರು ಎನ್ನಿಸಿಕೊಳ್ಳುವ ಸೈನ್ಯಗಳ ಕಾವಲುದಂಡನ್ನು, ಸಾಧಾರಣ ಜನರನ್ನು ಅವರೊಡನೆ ಅರಸನಾದ ಯೆಹೋವಾಷನನ್ನು ಯೆಹೋವನ ಆಲಯದಲ್ಲಿ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.


ಯಾಜಕನಾದ ಯೆಹೋಯಾದಾಮನು ಆಜ್ಞಾಪಿಸಿದಂತೆ, ಶತಾಧಿಪತಿಗಳು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಕಾಯುವುದಕ್ಕಾಗಿ ಬರತಕ್ಕ ಸಿಪಾಯಿಗಳನ್ನು ಕರೆದುಕೊಂಡು ರಾಜಪುತ್ರನ ಬಳಿಗೆ ಬಂದರು.


ಅವರು ತಾವು ಪೂರ್ಣ ಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಿಕರ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ ಒಡಂಬಡಿಕೆ ಮಾಡಿದರು.


ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ, ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಅಲ್ಲಿ ಪ್ರಮಾಣ ಮಾಡಿದರು. ಇದಲ್ಲದೆ ರಾಜಪ್ರಜೆಗಳೂ ಒಡಂಬಡಿಕೆಮಾಡಿಕೊಂಡರು.


ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.


ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು.


ಮುಖಂಡರು ತಮ್ಮ ಸಹೋದರರೊಂದಿಗೆ ಸೇರಿಕೊಂಡು, ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಅನುಸರಿಸಿ ನಡೆಯುವುದಾಗಿ ಆಣೆಯಿಟ್ಟು ಪ್ರಮಾಣ ಮಾಡಿದರು. ಹೇಗೆಂದರೆ:


ಈ ಎಲ್ಲಾ ಕಾರಣಗಳನ್ನು ನಾವು ನೆನಪುಮಾಡಿಕೊಂಡು ಲೇಖನ ರೂಪವಾದ ಪ್ರತಿಜ್ಞೆಯನ್ನು ಸ್ಥಿರಮಾಡಿಕೊಂಡಿದ್ದೇವೆ. ಅದಕ್ಕೆ ನಮ್ಮ ಪ್ರಭುಗಳೂ, ಲೇವಿಯರೂ, ಯಾಜಕರೂ ಸಹಿಮಾಡಿ ಮುದ್ರೆ ಹಾಕಿರುವರು.


ಅದಕ್ಕೆ ಅವರು, “ನಾವು ಅವರಿಂದ ತೆಗೆದುಕೊಂಡದ್ದನ್ನು ಹಿಂದಕ್ಕೆ ಕೊಡುತ್ತೇವೆ, ಅವರಿಂದ ಏನೂ ಕೇಳುವುದಿಲ್ಲ, ನೀನು ಹೇಳಿದಂತೆಯೇ ಮಾಡುತ್ತೇವೆ” ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರೆಸಿ ಈ ಮಾತಿನಂತೆ ನಡೆಯುವುದಾಗಿ ಅವರಿಂದ ಪ್ರಮಾಣ ಮಾಡಿಸಿದೆನು.


ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿ ಹೋಗುವಂತೆ ಇಸ್ರಾಯೇಲಿನ ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ಮನಸ್ಸುಳ್ಳವನಾಗಿದ್ದೇನೆ.


ಗೋತ್ರ ಪ್ರಧಾನರು ದೇವಾಲಯ ಸೇವೆಯಲ್ಲಿ ಗಟ್ಟಿಗರೂ ಆಗಿದ್ದ ಇವರೂ, ಇವರ ಸಹೋದರರೂ ಒಟ್ಟು ಸಾವಿರದ ಏಳು ನೂರ ಅರವತ್ತು ಜನರು.


ಅರಸನು ಕಂಬದ ಬಳಿಯಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ, ಆತನ ಆಜ್ಞಾನಿಯಮ, ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಆ ಒಡಂಬಡಿಕೆಯ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಎಲ್ಲಾ ಜನರ ಎದುರು ಪ್ರಮಾಣ ಮಾಡಿದನು.


ನಿನ್ನ ದೇವರಾದ ಯೆಹೋವನಾಣೆ, ನನ್ನ ಒಡೆಯನು ಸೇವಕರನ್ನು ಕಳುಹಿಸಿ ನಿನ್ನನ್ನು ಹುಡುಕದ ಜನಾಂಗವೂ ರಾಜ್ಯವೂ ಒಂದೂ ಇರುವುದಿಲ್ಲ. ಆ ಜನಾಂಗ ರಾಜ್ಯಗಳವರು ‘ಎಲೀಯನು ನಮ್ಮಲ್ಲಿರುವುದಿಲ್ಲ’ ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು.


ಅವರಿಬ್ಬರೂ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು. ದಾವೀದನು ಹೋರೆಷದಲ್ಲಿಯೇ ಇದ್ದನು.


ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಸ್ನೇಹದ ಒಪ್ಪಂದ ಮಾಡಿಕೊಂಡನು.


ಹೀಗೆ ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲರೊಡನೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೆಲವು ನಿಬಂಧನೆಗಳನ್ನು ವಿಧಿಸಿದನು.


ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು. ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು” ಎಂದು ಅವರಿಂದ ಪ್ರಮಾಣಮಾಡಿಸಿದನು.


ಯೋವಾಬನು ಇಸ್ರಾಯೇಲರ ಮುಖ್ಯ ಸೇನಾಧಿಪತಿ. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಅಧಿಪತಿ.


ಹೀಗೆ ಅವನು ಅತಲ್ಯಳಿಂದ ಹತವಾಗದಂತೆ ತಪ್ಪಿಸಿ ಕೊಂಡು ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಯೆಹೋವನ ಆಲಯದಲ್ಲಿದ್ದನು. ಆ ಆರು ವರ್ಷಗಳಲ್ಲಿ ಅತಲ್ಯಳೇ ದೇಶವನ್ನು ಆಳುತ್ತಿದ್ದಳು.


ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ರಾಜನ ಮುಖ್ಯಸಲಹೆಗಾರರಾಗಿದ್ದರು.


ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು.


ಆದುದರಿಂದ ಅರಸನಾದ ಯೆಹೋವಾಷನು ಯೆಹೋಯಾದಾವ, ಮೊದಲಾದ ಯಾಜಕರನ್ನು ಕರೆದು ಅವರಿಗೆ, “ನೀವು ಈ ವರೆಗೂ ದೇವಾಲಯವನ್ನೇಕೆ ದುರಸ್ತಿ ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರಿಂದ ಹಣವನ್ನು ವಸೂಲಿಮಾಡಿಕೊಳ್ಳದೆ ನಿಮ್ಮಲಿರುವ ಹಣದಿಂದ ದೇವಾಲಯದ ದುರಸ್ತಿಗಾಗಿ ಕಾರ್ಯವನ್ನು ಮಾಡಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು