Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆ ಹಾಕಿ, ಅದನ್ನು ಸ್ವಾಧೀನಪಡಿಸಿಕೊಂಡನು. ಅಲ್ಲಿಂದ ಅವನು ಯೆರೂಸಲೇಮಿಗೆ ವಿರೋಧವಾಗಿ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇದೇ ಕಾಲದಲ್ಲಿ ಸಿರಿಯಾದವರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆಹಾಕಿ ಅದನ್ನು ಸ್ವಾಧೀನಪಡಿಸಿಕೊಂಡು ಅಲ್ಲಿಂದ ಜೆರುಸಲೇಮಿಗೆ ದಾಳಿಯಿಡಲು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆಹಾಕಿ ಅದನ್ನು ಸ್ವಾಧೀನಪಡಿಸಿಕೊಂಡು ಅಲ್ಲಿಂದ ಯೆರೂಸಲೇವಿುಗೆ ವಿರೋಧವಾಗಿ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಹಜಾಯೇಲನು ಅರಾಮ್ಯರ ರಾಜನಾಗಿದ್ದನು. ಹಜಾಯೇಲನು ಗತ್ ಊರನ್ನೂ ಸೋಲಿಸಿದನು. ಆಗ ಅವನು ಜೆರುಸಲೇಮಿನ ವಿರುದ್ಧ ಯುದ್ಧಕ್ಕೆ ಹೋಗಲು ಯೋಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈ ಸಮಯದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್ ಊರಿನ ಮೇಲೆ ಯುದ್ಧಮಾಡಿ, ಅದನ್ನು ವಶಪಡಿಸಿಕೊಂಡನು. ನಂತರ ಹಜಾಯೇಲನು ಯೆರೂಸಲೇಮಿನ ಮೇಲೆ ದಾಳಿಮಾಡಲು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:17
20 ತಿಳಿವುಗಳ ಹೋಲಿಕೆ  

ಆದರೆ ಯೇಸು ಯೆರೂಸಲೇಮಿಗೆ ಹೋಗುವವನಾದ್ದರಿಂದ, ಆ ಸಮಾರ್ಯದವರು ಆತನನ್ನು ಸೇರಿಸಿಕೊಳ್ಳಲಿಲ್ಲ.


ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿನಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡನು.


ಯೆಹೂದ್ಯರಲ್ಲಿ ಉಳಿದವರೇ, ಯೆಹೋವನ ವಾಕ್ಯವನ್ನು ಈಗ ಕೇಳಿರಿ, ‘ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀವು ಐಗುಪ್ತಕ್ಕೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವುದಾದರೆ,


ದಾವೀದನು ಫಿಲಿಷ್ಟಿಯರನ್ನು ಮುತ್ತಿಗೆಹಾಕಿ, ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಮತ್ತು ಅದರ ಗ್ರಾಮಗಳನ್ನೂ ತೆಗೆದುಕೊಂಡನು.


ಅಯ್ಯಾಲೋನ್ ಊರಿನ ಕುಟುಂಬಗಳಲ್ಲಿ ಪ್ರಮುಖರೂ, ಗತ್ ಊರಿನವರನ್ನು ಓಡಿಸಿ ಬಿಟ್ಟವರು ಬೆರೀಯ ಮತ್ತು ಶಮ.


ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು. ಅವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.


ಅವನು ತನ್ನ ಆರುನೂರು ಜನರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.


ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿ ಮತ್ತು ಬಂಗಾರವನ್ನು ತೆಗೆದುಕೊಂಡು, ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನೂ, ಹೆಜ್ಯೋನನ ಮೊಮ್ಮಗನೂ, ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು.


ಯೆಹೋವನು ಆ ಕಾಲದಲ್ಲಿ ಇಸ್ರಾಯೇಲರನ್ನು ಕುಗ್ಗಿಸತೊಡಗಿದನು. ಹಜಾಯೇಲನು ಬಂದು ಇಸ್ರಾಯೇಲರನ್ನು ಇಸ್ರಾಯೇಲರ ಮೇರೆಗಳಲ್ಲಿ ಸೋಲಿಸಿದನು.


ಯೊರ್ದನ್ ನದಿಯ ಪೂರ್ವದಿಕ್ಕಿಗೂ, ಅರ್ನೋನ್ ತಗ್ಗಿನ ಅರೋಯೇರ್ ಪಟ್ಟಣದ ಉತ್ತರದಿಕ್ಕಿಗೂ ಇರುವ ಗಿಲ್ಯಾದ್, ಬಾಷಾನ್ ಪ್ರಾಂತ್ಯಗಳಲ್ಲಿ ವಾಸವಾಗಿದ್ದ ಗಾದ್, ರೂಬೇನ್ ಮತ್ತು ಮನಸ್ಸೆ ಕುಲಗಳವರನ್ನೂ, ಬೇರೆ ಎಲ್ಲಾ ಪ್ರಾಂತ್ಯಗಳಲ್ಲಿರುವ ಇಸ್ರಾಯೇಲರನ್ನೂ ಬಾಧಿಸಿದನು.


ಆದುದರಿಂದ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದನು. ಅವರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಅವರ ಅಧೀನದಲ್ಲಿದ್ದರು.


ಇದಲ್ಲದೆ, ಆಹಾಜನು ಯೆಹೋವನ ಆಲಯದಲ್ಲಿಯೂ, ಅರಮನೆಯ ಭಂಡಾರದಲ್ಲಿಯೂ ಇದ್ದ, ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.


ದಕ್ಷಿಣ ದಿಕ್ಕಿನ ರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು, ಅವನ ಸಂಗಡ ಒಪ್ಪಂದ ಮಾಡಿಕೊಳ್ಳುವನು. ಅವನ ರಾಜ್ಯದ ಹಾನಿಗಾಗಿ ಅವನಿಗೆ ಹೆಣ್ಣು ಮಗಳನ್ನು ಕೊಡುವನು. ಆದರೆ ಆ ಉಪಾಯವೂ ನಿಲ್ಲದು, ತನಗೆ ಅನುಕೂಲವಾಗುವುದಿಲ್ಲ.


ಹಿಂಸೆ, ಬಾಧೆಯನ್ನು ಗುರಿಯಾಗಿಟ್ಟುಕೊಂಡೆ ಮುನ್ನುಗ್ಗಿ ಬರುವರು. ಜನರನ್ನು ಮರಳಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪು ಕೂಡಿಸುವರು.


ಪ್ರಾಯಶ್ಚಿತ್ತಯಜ್ಞದ ಹೋಮಶೇಷದ ವಿಷಯದಲ್ಲಿಯೂ ಮತ್ತು ದೋಷಪರಿಹಾರಕ ಯಜ್ಞದ ಹೋಮಶೇಷದ ವಿಷಯದಲ್ಲಿಯೂ ಒಂದೇ ನಿಯಮಯುಂಟು; ಹೇಗೆಂದರೆ ಆ ಹೋಮಶೇಷವು ದೋಷಪರಿಹಾರವನ್ನು ಮಾಡಿಸುವ ಯಾಜಕನಿಗೆ ಸಲ್ಲತಕ್ಕದ್ದು.


ಒಲೆಯಲ್ಲಾಗಲಿ, ಕಬ್ಬಿಣದ ಹಂಚಿನಲ್ಲಾಗಲಿ ಅಥವಾ ಬಾಂಡ್ಲಿಯಲ್ಲಾಗಲಿ ಬೇಯಿಸಿದ ನೈವೇದ್ಯಪದಾರ್ಥವೆಲ್ಲಾ ಸಮರ್ಪಿಸುವ ಯಾಜಕನಿಗೆ ಆಗಬೇಕು.


ಬೆಂಕಿಯಲ್ಲಿ ಹೋಮಮಾಡದೆ ಉಳಿದಿರುವ ಮಹಾ ಪರಿಶುದ್ಧ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದುದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು