Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲವಾದುದರಿಂದ ಜನರು ಅವುಗಳ ಮೇಲೆಯೇ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ. ಆದುದರಿಂದ ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲವಾದದರಿಂದ ಜನರು ಅವುಗಳ ಮೇಲೆಯೇ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಅವನು ಉನ್ನತ ಪೂಜಾಸ್ಥಳಗಳನ್ನು ನಾಶಗೊಳಿಸಲಿಲ್ಲ. ಜನರು ಇನ್ನೂ ಆ ಸ್ಥಳಗಳಲ್ಲಿ ಯಜ್ಞಗಳನ್ನು ಅರ್ಪಿಸುತ್ತಾರೆ ಮತ್ತು ಧೂಪಗಳನ್ನು ಸುಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:3
13 ತಿಳಿವುಗಳ ಹೋಲಿಕೆ  

ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ, ಆದ್ದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.


ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರು‍ಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್” ಎಂಬ ಹೆಸರಿತ್ತು.


ಆದರೆ ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ. ಆದುದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಸಮರ್ಪಿಸುತ್ತಿದ್ದರು. ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿದವನು ಇವನೇ.


ಅವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ, ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಹಾಕುತ್ತಾ ಇದ್ದರು.


ಅವನು ದೇಶದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಪ್ರಾಮಾಣಿಕವಾದ ಮನಸ್ಸಿನಿಂದ ಸತ್ಯಮಾರ್ಗದಲ್ಲಿ ಯೆಹೋವನಿಗೆ ನಡೆದುಕೊಂಡನು.


ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತು “ನಾನು ಸೇವೆ ಮಾಡುವುದಿಲ್ಲ” ಎಂದು ಅಂದುಕೊಳ್ಳುತ್ತಿದ್ದಿ, ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಜಾರಳಂತೆ ನಡೆದುಕೊಂಡಿದ್ದಿ.


ಯಾಜಕರು ಮತ್ತು ಲೇವಿಯರು ಯೆಹೋವನ ಧರ್ಮಶಾಸ್ತ್ರದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.


ಯಾಜಕನಾದ ಯೆಹೋಯಾದಾವನು ಯೆಹೋವಾಷನಿಗೆ ಬೋಧಕನಾಗಿದ್ದ ಕಾಲದಲ್ಲಿ ಅವನು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು.


ಆದರೆ, ಇವನ ಕಾಲದಲ್ಲಿಯೂ ಪೂಜಾಸ್ಥಳಗಳು ತೆಗೆಯಲ್ಪಡಲಿಲ್ಲವಾದುದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.


ಅವನು ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.


ಅಜರ್ಯನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.


ಇವನು ಎಲ್ಲಾ ವಿಷಯಗಳಲ್ಲಿಯೂ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.


ಅರಸನಾದ ಯೋಷೀಯನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಜನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು