Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವಾಷನು ಯಾಜಕರಿಗೆ, “ನೀವು ಯೆಹೋವನ ಆಲಯಕ್ಕೆ ಸೇರಿದ ಎಲ್ಲಾ ಪರಿಶುದ್ಧ ದ್ರವ್ಯವನ್ನು ಅಂದರೆ ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನೂ ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಛೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯೆಹೋವಾಷನು ಯಾಜಕರಿಗೆ, “ಸರ್ವೇಶ್ವರನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧ ದ್ರವ್ಯವನ್ನು, ಅಂದರೆ ಜನಗಣತಿಯಲ್ಲಿ ಎಣಿಕೆಯಾದ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಟಿತನಾದ ವ್ಯಕ್ತಿ ತನ್ನ ಪ್ರಾಣವನನ್ನು ಬಿಡಿಸಿಕೊಳ್ಳುವುದಕ್ಕಾಗಿ ತೆರುವ ಹಣ, ಜನರು ಸರ್ವೇಶ್ವರನ ಆಲಯಕ್ಕೆ ಸ್ವೇಚ್ಛೆಯಿಂದ ತಂದು ಒಪ್ಪಿಸುವ ಹಣ, ಇವುಗಳನ್ನು ತೆಗೆದುಕೊಂಡು ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿ ಇರುತ್ತದೆ ಎಂದು ನೋಡಿ ಅದನ್ನು ಸರಿಮಾಡುವುದಕ್ಕಾಗಿ ವಿನಿಯೋಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವಾಷನು ಯಾಜಕರಿಗೆ - ನೀವು ಯೆಹೋವನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧದ್ರವ್ಯವನ್ನು ಅಂದರೆ ಖಾನೇಷುಮಾರಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಫೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4-5 ಯೆಹೋವಾಷನು ಯಾಜಕರಿಗೆ, “ದೇವಾಲಯದಲ್ಲಿ ಬಹಳ ಹಣವಿದೆ. ಜನರು ಅನೇಕ ವಸ್ತುಗಳನ್ನು ಆಲಯಕ್ಕೆ ಕೊಟ್ಟಿದ್ದಾರೆ. ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಜನರು ಆಲಯದ ತೆರಿಗೆಯನ್ನು ಕೊಟ್ಟಿದ್ದಾರೆ. ಜನರು ತಮ್ಮ ಸ್ವ ಇಚ್ಛೆಯಿಂದ ಹಣವನ್ನು ಕೊಟ್ಟಿದ್ದಾರೆ. ಯಾಜಕರಾದ ನೀವು ಆ ಹಣವನ್ನು ತೆಗೆದುಕೊಂಡು, ಯೆಹೋವನ ಆಲಯವನ್ನು ಸರಿಪಡಿಸಿ. ಪ್ರತಿಯೊಬ್ಬ ಯಾಜಕನೂ ತಾನು ಜನರ ಸೇವೆಯಿಂದ ಪಡೆದ ಹಣವನ್ನು ಉಪಯೋಗಿಸಲೇಬೇಕು. ಅವನು ಆ ಹಣವನ್ನು ದೇವಾಲಯದ ಶಿಥಿಲತೆಯನ್ನು ಸರಿಪಡಿಸಲು ಉಪಯೋಗಿಸಲೇಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೋವಾಷನು ಯಾಜಕರಿಗೆ, “ಯೆಹೋವ ದೇವರ ಆಲಯಕ್ಕೆ ಪವಿತ್ರ ಅರ್ಪಣೆಗಳಾಗಿ ತರಲಾದ ಜನಗಣತಿಯಲ್ಲಿ ಸಂಗ್ರಹಿಸಿದ ಹಣ, ವೈಯಕ್ತಿಕ ಪ್ರತಿಜ್ಞೆಗಳಿಂದ ಪಡೆದ ಹಣ ಮತ್ತು ದೇವಾಲಯಕ್ಕೆ ಸ್ವಯಂಪ್ರೇರಣೆಯಿಂದ ತಂದ ಹಣವನ್ನು ಸಂಗ್ರಹಿಸಿರಿ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:4
33 ತಿಳಿವುಗಳ ಹೋಲಿಕೆ  

“ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ, ಅವನಿಗೆ ದ್ವಾರಪಾಲಕರು ಯೆಹೋವನ ಆಲಯಕ್ಕೆ ಬರುವ ಜನರಿಂದ ಕೂಡಿಸಿದ ಹಣವನ್ನು ಲೆಕ್ಕಿಸಬೇಕು,


ನೀವು ನಿಮ್ಮ ನಿಮ್ಮೊಳಗೆ ಯೆಹೋವನಿಗಾಗಿ ಕಾಣಿಕೆಯನ್ನು ತೆಗೆದುಕೊಡಬೇಕು; ಒಳ್ಳೆಯ ಮನಸ್ಸಿರುವವರೆಲ್ಲರೂ ಕಾಣಿಕೆಯನ್ನು ತಂದುಕೊಡಬೇಕು. ಯೆಹೋವನಿಗೆ ತರಬೇಕಾದ ಆ ಕಾಣಿಕೆಯು ಎಂಥದಾಗಿರಬೇಕೆಂದರೆ; ಚಿನ್ನ, ಬೆಳ್ಳಿ, ತಾಮ್ರ ಎಂಬ ಲೋಹಗಳು,


ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಕಾರ್ಯಗಳಿಗಾಗಿ ಆತನಿಗೆ ಕಾಣಿಕೆಗಳನ್ನು ತಂದುಕೊಡುವುದಕ್ಕೆ ಹೃದಯದಿಂದ ಪ್ರೇರೇಪಿತರಾಗಿ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ತಂದುಕೊಟ್ಟರು.


ಸಿದ್ಧಚಿತ್ತರಾದ ಗಂಡಸರೂ, ಹೆಂಗಸರೂ ಬಂದು ಯೆಹೋವನಿಗೆ ಚಿನ್ನದ ಕಾಣಿಕೆಗಳನ್ನು ಅಂದರೆ ಕಡಗ, ಮೂಗುತಿ, ಮುದ್ರೆಯುಂಗರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.


ಹೇಗೆಂದರೆ ಅವರೆಲ್ಲರು ತಮಗೆ ಸಾಕಾಗಿ ಮಿಕ್ಕದ್ದರಲ್ಲಿ ಕಾಣಿಕೆ ಕೊಟ್ಟರು. ಈಕೆಯೋ ತನ್ನ ಬಡತನದಲ್ಲಿಯೂ ತನ್ನ ಜೀವನಕ್ಕಿದ್ದುದ್ದೆಲ್ಲವನ್ನೂ ಕೊಟ್ಟುಬಿಟ್ಟಳು” ಅಂದನು.


ಬಾಬೆಲ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರ, ಇಸ್ರಾಯೇಲ್ ಸಾಧಾರಣಜನರೂ, ಯಾಜಕರೂ, ಯೆರೂಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವ ಇಚ್ಛೆಯಿಂದ ಕೊಡುವ ಕಾಣಿಕೆ ಇವುಗಳನ್ನು ಅಲ್ಲಿಗೆ ಒಪ್ಪಿಸಬೇಕು; ಹೀಗೆಂದು ನಾನೂ ಮತ್ತು ನನ್ನ ಏಳು ಜನ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತೇವೆ.


ಅವರು ತಮ್ಮ ಸಾಮರ್ಥ್ಯಕ್ಕನುಸಾರವಾಗಿ ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು ಅರುವತ್ತೊಂದು ಸಾವಿರ ಬಂಗಾರದ ಪವನುಗಳು, ಎರಡು ಲಕ್ಷದ ಐವತ್ತು ಸಾವಿರ ತೊಲಾ ಬೆಳ್ಳಿ ಮತ್ತು ನೂರು ಯಾಜಕವಸ್ತ್ರಗಳು.


ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟಿದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.


ಯೋಷೀಯನು ಯಾಜಕರನ್ನು ಅವರವರ ಕೆಲಸಕ್ಕೆ ನೇಮಿಸಿ, ಯೆಹೋವನ ಆಲಯದ ಸೇವೆಗಾಗಿ ಅವರನ್ನು ಪ್ರೋತ್ಸಾಹಿಸಿದನು.


ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನೂ, ತಮ್ಮ ಆದಾಯದ ದಶಮಾಂಶವನ್ನೂ ಹಾಗು ದೇವರ ನೈವೇದ್ಯಕ್ಕಾಗಿ ಮುಡುಪಾಗಿ ಇಟ್ಟಿದ್ದನ್ನು ನಂಬಿಕೆಯಿಂದ ತಂದು ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಗೆ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು. ಅವನ ತಮ್ಮನಾದ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು.


ತನ್ನ ತಂದೆಯೂ ತಾನೂ ದೇವರಿಗೆ ಪ್ರತಿಷ್ಠಿಸಿದ್ದ ಬೆಳ್ಳಿಬಂಗಾರವನ್ನೂ, ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು.


ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


ಯೆಹೂದದ ಅರಸನಾದ ಯೆಹೋವಾಷನು ಇದನ್ನು ಕೇಳಿ ತಾನೂ ತನ್ನ ಪೂರ್ವಿಕರಾದ ಯೆಹೋಷಾಫಾಟನೂ, ಯೆಹೋರಾಮನೂ, ಅಹಜ್ಯನೂ, ಯೆಹೂದ ರಾಜರೂ ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳು, ಯೆಹೋವನ ಆಲಯದ ಪ್ರತಿಷ್ಠೆಗಾಗಿ ಅರಮನೆಯ ಭಂಡಾರಗಳಲ್ಲಿದ್ದ ಬಂಗಾರ ಇವುಗಳನ್ನು ತೆಗೆದುಕೊಂಡು ಅರಾಮ್ಯರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟು ಹೋದನು.


ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು ವರ್ಷಗಳಲ್ಲಿ ಕಟ್ಟಿಸಿ ಮುಗಿಸಿದನು.


ಯಾವನಾದರೂ ತಾನು ಕೊಡಬೇಕಾದ ಹತ್ತನೆಯ ಒಂದು ಪಾಲಿನಲ್ಲಿ ಏನಾದರೂ ಬಿಡಿಸಿಕೊಳ್ಳಬೇಕೆಂದಿದ್ದರೆ ಅಷ್ಟರೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.


ಅವರು ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಇಸ್ರಾಯೇಲ್ಯರು ತಂದಿದ್ದ ಕಾಣಿಕೆಗಳನ್ನೆಲ್ಲಾ ಮೋಶೆಯಿಂದ ಪಡೆದುಕೊಂಡರು. ಇಸ್ರಾಯೇಲರು ಪ್ರತಿದಿನ ಹೊತ್ತಾರೆಯಲ್ಲಿ ಮೋಶೆಯ ಬಳಿಗೆ ಬಂದು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.


ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಮತ್ತು ಅಮಾಲೇಕ್ಯರು ಎಂಬೀ ಸುತ್ತಲಿನ ಜನಾಂಗಗಳಿಂದ ವಶಪಡಿಸಿಕೊಂಡ ಬೆಳ್ಳಿ ಬಂಗಾರವನ್ನು ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.


ದೇವಾಲಯಕ್ಕೆ ಎಲ್ಲೆಲ್ಲಿ ದುರಸ್ತಿಯಾಗಬೇಕೆಂಬುದನ್ನು ನೋಡಿ ಅದನ್ನು ಸರಿಮಾಡುವುದಕ್ಕೋಸ್ಕರ ಉಪಯೋಗಿಸಿರಿ, ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣವನ್ನು ತೆಗೆದುಕೊಳ್ಳಬೇಕು” ಎಂದು ಆಜ್ಞಾಪಿಸಿದನು.


ಆ ವರೆಗೂ ಯೆಹೋವನ ನಾಮಕ್ಕೋಸ್ಕರ ಆಲಯವಿರಲಿಲ್ಲವಾದುದರಿಂದ ಜನರು ಪೂಜಾಸ್ಥಳಗಳಲ್ಲಿ ಯಜ್ಞವನ್ನು ಆರ್ಪಿಸುತ್ತಿದ್ದರು.


ಸೊಲೊಮೋನನು ಯೆಹೋವನನ್ನು ಪ್ರೀತಿಸಿ, ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವನ್ನರ್ಪಿಸುತ್ತಿದ್ದನು. ಅಲ್ಲಿಯೇ ಧೂಪಹಾಕುತ್ತಿದ್ದನು.


ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ, ಆದ್ದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.


ಆದರೆ, ಇವನ ಕಾಲದಲ್ಲಿಯೂ ಪೂಜಾಸ್ಥಳಗಳು ತೆಗೆಯಲ್ಪಡಲಿಲ್ಲವಾದುದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.


ಪೂಜಾಸ್ಥಳಗಳಲ್ಲಿಯೂ, ದಿನ್ನೆಗಳ ಮೇಲೆಯೂ, ಎಲ್ಲಾ ಹಸಿರು ಮರಗಳ ಕೆಳಗಡೆಯೂ ಯಜ್ಞಧೂಪಗಳನ್ನು ಸಮರ್ಪಿಸಿದನು.


ಅಲ್ಲಿ ಅವರು ಯೆಹೋವನು ತಮ್ಮ ಎದುರಿನಿಂದ ಹೊರಡಿಸಿ ಜಡಿಸಿದ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿಯೂ ಧೂಪವನ್ನು ಹಾಕಿ, ತಮ್ಮ ದುಷ್ಕೃತ್ಯಗಳಿಂದ ಆತನನ್ನು ರೇಗಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು