Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೋವಾಷನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲರ ರಾಜಸ್ಮಶಾನದಲ್ಲಿ ಸಮಾಧಿಮಾಡಿದರು. ಇವನ ತರುವಾಯ ಯಾರೊಬ್ಬಾಮನು ಸಿಂಹಾಸನವನ್ನೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇವನು ನಿಧನನಾಗಿ ಪಿತೃಗಳ ಬಳಿ ಸೇರಲು ಇವನ ಶವವನ್ನು ಸಮಾರಿಯದೊಳಗೆ ಇಸ್ರಯೇಲ್ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು. ಇವನ ತರುವಾಯ ಯಾರೊಬ್ಬಾಮನು ಸಿಂಹಾಸನವನ್ನೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇವನು ಪಿತೃಗಳ ಬಳಿಗೆ ಸೇರಲು ಇವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲ್ ರಾಜಶ್ಮಶಾನದಲ್ಲಿ ಸಮಾಧಿಮಾಡಿದರು. ಇವನ ತರುವಾಯ ಯಾರೊಬ್ಬಾಮನು ಸಿಂಹಾಸನವನ್ನೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೋವಾಷನು ತೀರಿಕೊಂಡಾಗ ಅವನ ಪೂರ್ವಿಕರ ಬಳಿಯಲ್ಲಿ ಅವನನ್ನು ಸಮಾಧಿಮಾಡಿದರು. ಅನಂತರ ಯಾರೊಬ್ಬಾಮನು ಯೋವಾಷಾನ ಸಿಂಹಾಸನದ ಮೇಲೆ ಕುಳಿತುಕೊಂಡು ನೂತನ ರಾಜನಾದನು. ಯೋವಾಷನನ್ನು ಸಮಾರ್ಯದಲ್ಲಿ ಇಸ್ರೇಲಿನ ರಾಜರುಗಳ ಜೊತೆ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೋವಾಷನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು, ಇವನ ಶವವನ್ನು ಸಮಾರ್ಯದಲ್ಲಿ ಇಸ್ರಾಯೇಲಿನ ಅರಸರ ಸ್ಮಶಾನದಲ್ಲಿ ಸಮಾಧಿಮಾಡಿದರು. ಯಾರೊಬ್ಬಾಮನು ಅವನ ಸಿಂಹಾಸನ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:13
12 ತಿಳಿವುಗಳ ಹೋಲಿಕೆ  

ಅವನು ಯಾರೊಬ್ಬಾಮನಿಗೆ, “ನೀನು ಇವುಗಳಲ್ಲಿ ಹತ್ತು ತುಂಡುಗಳನ್ನು ತೆಗೆದುಕೋ. ಇಸ್ರಾಯೇಲ್ ದೇವರಾದ ಯೆಹೋವನು ರಾಜ್ಯವನ್ನು ಸೊಲೊಮೋನನಿಂದ ಕಿತ್ತುಕೊಂಡು,


ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.


ನನ್ನ ಒಡೆಯನೂ, ಅರಸನೂ ಆದ ನೀವೂ ಹಾಗೆ ಮಾಡದೆ ಪೂರ್ವಿಕರ ಬಳಿಗೆ ಸೇರುವುದಾದರೆ ನಾನೂ ಮತ್ತು ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು” ಎಂದು ಹೇಳಿದಳು.


ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಯೋವಾಷನ ಉಳಿದ ಚರಿತ್ರೆಯೂ, ಅವನ ಶೂರ ಕೃತ್ಯಗಳೂ, ಇವನು ಯೆಹೂದ್ಯರ ಅರಸನಾದ ಅಮಚ್ಯನು ಎಂಬವನೊಡನೆ ನಡಿಸಿದ ಯುದ್ಧದ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಆ ಕಾಲದಲ್ಲಿ ಎಲೀಷನು ಮರಣಕರವಾದ ರೋಗಕ್ಕೆ ಗುರಿಯಾದನು. ಇಸ್ರಾಯೇಲರ ಅರಸನಾದ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥರಥಾಶ್ವಬಲಗಳಾಗಿದ್ದವನೇ” ಎಂದು ಕೂಗುತ್ತಾ ಅವನ ಮುಖದ ಮೇಲೆ ಬಿದ್ದು ಬಹಳವಾಗಿ ಅತ್ತನು.


ಯೆಹೋವಾಷನ ಉಳಿದ ಚರಿತ್ರೆಯೂ, ಅವನ ಶೂರ ಕೃತ್ಯಗಳೂ ಮತ್ತು ಯೆಹೂದ ರಾಜನಾದ ಅಮಚ್ಯನೊಡನೆ ನಡಿಸಿದ ಯುದ್ಧದ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.


ಯೆಹೂದದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ತನ್ನ ವಾಕ್ಯವನ್ನು ದಯಪಾಲಿಸಿದನು.


ಯೆಹೋವಾಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋವಾಷನು ಅರಸನಾದನು.


ಯೆಹೂದದ ಅರಸನೂ, ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಲ್ವತ್ತೊಂದು ವರ್ಷ ಆಳಿದನು.


“ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂಬುದಾಗಿ ಯೆಹೋವನು ಯೇಹುವಿಗೆ ಮುಂತಿಳಿಸಿದ ಮಾತು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು