Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಸ್ರಾಯೇಲರ ಅರಸನಾದ ಯೋವಾಷನೂ, ಅಹಜ್ಯನ ಮೊಮ್ಮಗನೂ, ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಇಸ್ರಾಯೇಲರ ಅರಸನಾದ ಯೆಹೋವಾಷನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮ್ ಬಾಗಿಲಿನಿಂದ ಮೂಲೆಯ ಬಾಗಿಲಿನವರೆಗೂ ಇದ್ದ ಯೆರೂಸಲೇಮಿನ ನಾನೂರು ಮೊಳ ಗೋಡೆಯನ್ನು ಕೆಡವಿ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇಸ್ರಯೇಲರ ಅರಸ ಯೋವಾಷನು, ಅಹಜ್ಯನ ಮೊಮ್ಮಗನೂ ಯೆಹೋವಾಷನ ಮಗನೂ ಜುದೇಯದ ಅರಸನೂ ಆದ ಅಮತ್ಯನನ್ನು, ಬೇತ್ಷೆಮೆಷಿನಲ್ಲಿ ಹಿಡಿದು, ಅವನನ್ನು ಜೆರುಸಲೇಮಿಗೆ ಕರೆದುಕೊಂಡುಬಂದು, ಎಫ್ರಯಿಮ್ ಬಾಗಿಲಿಗೂ ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಜೆರುಸಲೇಮಿನ ನಾನೂರು ಮೊಳ ಗೋಡೆಯನ್ನು ಕೆಡವಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಸ್ರಾಯೇಲ್ಯರ ಅರಸನಾದ ಯೋವಾಷನು ಅಹಜ್ಯನ ಮೊಮ್ಮಗನೂ ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇವಿುಗೆ ಕರಕೊಂಡುಬಂದು ಎಫ್ರಾಯೀಮ್ ಬಾಗಲಿಗೂ ಮೂಲೆಯ ಬಾಗಲಿಗೂ ಮಧ್ಯದಲ್ಲಿದ್ದ ಯೆರೂಸಲೇವಿುನ ನಾನೂರು ಮೊಳ ಗೋಡೆಯನ್ನು ಕೆಡವಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇಸ್ರೇಲಿನ ರಾಜನಾದ ಯೋವಾಷನು ಬೇತ್ಷೆಮೆಷಿನಲ್ಲಿ ಯೆಹೂದದ ರಾಜನಾದ ಅಮಚ್ಯನನ್ನು ಸೆರೆಹಿಡಿದನು. ಅಮಚ್ಯನು ಯೆಹೋವಾಷನ ಮಗನೂ ಅಹಜ್ಯನ ಮೊಮ್ಮಗನೂ ಆಗಿದ್ದನು. ಯೋವಾಷನು ಜೆರುಸಲೇಮಿಗೆ ಬಂದು ಎಫ್ರಾಯೀಮ್ ಬಾಗಿಲಿನಿಂದ ಮೂಲೆಯ ಬಾಗಿಲಿನವರೆಗೆ ಆರುನೂರು ಅಡಿ ಉದ್ದದ ಗೋಡೆಯನ್ನು ಒಡೆದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಅಹಜ್ಯನ ಮೊಮ್ಮಗನೂ ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ ಷೆಮೆಷ್ ಬಳಿಯಲ್ಲಿ ವಶಪಡಿಸಿಕೊಂಡನು. ಅನಂತರ ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು, ಎಫ್ರಾಯೀಮಿನ ಬಾಗಿಲು ಮೊದಲುಗೊಂಡು ಮೂಲೆಯ ಬಾಗಿಲವರೆಗೂ, ಆರುನೂರು ಅಡಿ ಉದ್ದದ ಯೆರೂಸಲೇಮಿನ ಗೋಡೆಯನ್ನು ಕೆಡವಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:13
16 ತಿಳಿವುಗಳ ಹೋಲಿಕೆ  

ಈ ಆಜ್ಞಾನುಸಾರವಾಗಿ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು, ತಮ್ಮ ತಮ್ಮ ಅಂಗಳ, ಮಾಳಿಗೆಗಳಲ್ಲಿಯೂ, ದೇವಾಲಯದ ಪ್ರಾಕಾರಗಳಲ್ಲಿಯೂ ನೀರು ಬಾಗಿಲು, ಎಫ್ರಾಯೀಮ್ ಬಾಗಿಲು ಇವುಗಳ ಮುಂದಣ ಬಯಲುಗಳಲ್ಲಿಯೂ ಪರ್ಣಶಾಲೆಗಳನ್ನು ಮಾಡಿಕೊಂಡರು.


ಆಗ ದೇಶವು ಗೆಬದಿಂದ ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವುದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿನಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷಿಯ ಆಲೆಗಳವರೆಗೂ ಎತ್ತರದಲ್ಲಿ ನಿಂತಿರುವುದು.


ಯೆಹೋವನು, “ಇಗೋ, ಮುಂದಿನ ಕಾಲದಲ್ಲಿ ಈ ಪಟ್ಟಣವು ಹನನೇಲನ ಬುರುಜಿನಿಂದ ಮೂಲೆಯ ಬಾಗಿಲಿನವರೆಗೆ ಯೆಹೋವನ ಘನತೆಗಾಗಿ ವಿಸ್ತರಿಸುವುದು.


ಅಲ್ಲಿಂದ ಎಫ್ರಾಯೀಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಗೋಪುರ, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿ ಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು, ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.


ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.


ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು.


ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬಿಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ,


ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.


ಅನಂತರ ಕಸ್ದೀಯರು ಬಾಬೆಲಿನ ಅರಸನನ್ನು ಹಿಡಿದು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.


ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯರ ಸೈನ್ಯದವರು ಯೆರೂಸಲೇಮಿನ ಸುತ್ತುಗೋಡೆಗಳನ್ನು ಕೆಡವಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು