Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇವನ ಸರದಾರನೂ, ರೆಮಲ್ಯನ ಮಗನೂ ಆಗಿದ್ದ ಪೆಕಹನು, ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಇವನನ್ನೂ ಅರ್ಗೋಬ್, ಅರ್ಯೇ ಎಂಬವರನ್ನೂ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇವನ ಸರದಾರನೂ ರೆಮಲ್ಯನ ಮಗನೂ ಆಗಿದ್ದ ಪೆಕಹ್ಯನು ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರುದ್ಧ ಒಳಸಂಚುಮಾಡಿ ಸಮಾರಿಯದಲ್ಲಿರುವ ಅರಮನೆಯ ಗರ್ಭಗೃಹದಲ್ಲೇ ಇವನನ್ನು ಮತ್ತು ಅರ್ಗೋಬ್, ಅರ್ಯೇ ಎಂಬವರನ್ನು ಕೊಂದು ಇವನಿಗೆ ಬದಲಾಗಿ ತಾನೇ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇವನ ಸರದಾರನೂ ರೆಮಲ್ಯನ ಮಗನೂ ಆಗಿದ್ದ ಪೆಕಹನು ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರೋಧವಾಗಿ ಒಳಸಂಚುಮಾಡಿ ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಇವನನ್ನೂ ಅರ್ಗೋಬ್, ಅರ್ಯೇ ಎಂಬವರನ್ನೂ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಪೆಕಹ್ಯನ ಸೇನೆಗೆ ರೆಮಲ್ಯನ ಮಗನಾದ ಪೆಕಹನು ಸೇನಾಧಿಪತಿಯಾಗಿದ್ದನು. ಅವನು ಪೆಕಹ್ಯನನ್ನು ಕೊಂದುಹಾಕಿದನು. ಅವನು ಸಮಾರ್ಯದಲ್ಲಿರುವ ರಾಜನ ಅರಮನೆಯಲ್ಲಿ ಪೆಕಹ್ಯನು ಅರ್ಗೋಬ್ ಮತ್ತು ಅರ್ಯೇ ಎಂಬವರನ್ನು ಸಹ ಕೊಂದುಹಾಕಿದನು. ಪೆಕಹ್ಯನನ್ನು ಪೆಕಹನು ಕೊಂದುಹಾಕಿದಾಗ ಅವನ ಸಂಗಡ ಗಿಲ್ಯಾದಿನ ಐವತ್ತು ಜನರಿದ್ದರು. ಪೆಕಹ್ಯನ ನಂತರ ಪೆಕಹನು ಹೊಸ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಅವನ ಅಧಿಪತಿಯಾದಂಥ ರೆಮಲ್ಯನ ಮಗ ಪೆಕಹನು ಗಿಲ್ಯಾದಿನ ಐವತ್ತು ಮಂದಿಯನ್ನು ತನ್ನ ಸಂಗಡ ಕೂಡಿಸಿಕೊಂಡು ಪೆಕಹ್ಯನ ವಿರುದ್ಧ ಒಳಸಂಚುಮಾಡಿ, ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಪೆಕಹ್ಯನನ್ನು ಮತ್ತು ಅರ್ಗೋಬ್, ಅರ್ಯೇ ಎಂಬವರನ್ನು ಕೊಂದುಹಾಕಿದನು. ಅನಂತರ, ಪೆಕಹ್ಯನಿಗೆ ಬದಲಾಗಿ ಪೆಕಹನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:25
10 ತಿಳಿವುಗಳ ಹೋಲಿಕೆ  

ರೆಮಲ್ಯನ ಮಗನು ಇಸ್ರಾಯೇಲ್ಯರ ಅರಸನು ಆದ ಪೆಕಹ ಎಂಬವನು ಒಂದೇ ದಿನ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರೂ ಯುದ್ಧವೀರರು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದು ಬಿಟ್ಟಿದ್ದೇ ಇದಕ್ಕೆ ಕಾರಣವಾಗಿತ್ತು.


ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೆಯ ವರ್ಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಇಪ್ಪತ್ತು ವರ್ಷ ಆಳಿದನು.


ಯಾಬೇಷನ ಮಗನಾದ ಶಲ್ಲೂಮನು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಪ್ರಜೆಗಳ ಮುಂದೆಯೇ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.


ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ವಿರುದ್ಧವಾಗಿ ಒಳಸಂಚುಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಬರಲು ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರ ಸಹಿತವಾಗಿ ಹೋಗಿ ಅದಕ್ಕೆ ಕಾವಲುದಂಡುಗಳನ್ನು ಇರಿಸಿದನು.


ಸೈನ್ಯಾಧಿಪತಿಗಳೆಲ್ಲಾ ಒಂದು ಕಡೆ ಸೇರಿರುವುದನ್ನು ಕಂಡು ಅವನು ಅವರನ್ನು ಸಮೀಪಿಸಿ, “ನಾಯಕನೇ ನಿನಗೊಂದು ಮಾತು ಹೇಳುವುದಿದೆ” ಎಂದನು. ಯೇಹುವು ಅವನಿಗೆ, “ನಮ್ಮಲ್ಲಿ ಯಾರಿಗೆ?” ಎಂದು ಕೇಳಲು ಅವನು, “ಸೇನಾಧಿಪತಿಯಾದ ನಿನಗೆ” ಎಂದು ಉತ್ತರಕೊಟ್ಟನು.


ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿದನು. ಅರಸನು ತಿರ್ಚದಲ್ಲಿ ತನ್ನ ಅರಮನೆಯ ಮೇಲ್ವಿಚಾರಕನಾದ ಅರ್ಚನೆಂಬುವವನ ಮನೆಯಲ್ಲಿ ಕುಡಿದು ಮತ್ತನಾಗಿರುವಾಗ ಜಿಮ್ರಿಯು ಅಲ್ಲಿಗೆ ಹೋದನು.


ಪಟ್ಟಣವು ಅವರ ವಶವಾದುದನ್ನು ಜಿಮ್ರಿಯು ಕಂಡು ಅರಮನೆಯ ಗರ್ಭಗೃಹಕ್ಕೆ ಹೋಗಿ, ಅರಮನೆಗೆ ಬೆಂಕಿ ಹೊತ್ತಿಸಿ ಸುಟ್ಟುಕೊಂಡು ಸತ್ತನು.


ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಪೆಕಹ್ಯನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.


ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನಾದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲರ ಅರಸನಾದ ಪೆಕಹ ಎಂಬುವವರು ಯೆರೂಸಲೇಮಿನ ಮೇಲೆ ದಂಡೆತ್ತಿ ಬಂದರು. ಆದರೆ ಅದನ್ನು ಜಯಿಸುವುದಕ್ಕೆ ಸಾಧ್ಯವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು