Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅರಸನಾದ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಯಜ್ಞವೇದಿಯನ್ನು ಮಾಡಿಸಿಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅರಸ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಪೂಜಾಪೀಠವನ್ನು ಮಾಡಿಸಿಬಿಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅರಸನಾದ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ವೇದಿಯನ್ನು ಮಾಡಿಸಿಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಯಾಜಕನಾದ ಊರೀಯನು, ದಮಸ್ಕದಿಂದ ರಾಜನಾದ ಅಹಾಜನು ತನಗೆ ಕಳುಹಿಸಿದ ಯಜ್ಞವೇದಿಕೆಯ ಮಾದರಿಯಲ್ಲೇ ಮತ್ತೊಂದು ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು. ಹೀಗೆ ರಾಜನಾದ ಅಹಾಜನು ದಮಸ್ಕದಿಂದ ಹಿಂತಿರುಗುವುದಕ್ಕೆ ಮೊದಲೇ ಊರೀಯನು ಯಜ್ಞವೇದಿಕೆಯೊಂದನ್ನು ನಿರ್ಮಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯಾಜಕನಾದ ಊರೀಯನು ಅದರ ಪ್ರಕಾರ ಒಂದು ಬಲಿಪೀಠವನ್ನು ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬರುವ ಮೊದಲೇ ಕಟ್ಟಿ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:11
17 ತಿಳಿವುಗಳ ಹೋಲಿಕೆ  

ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.


ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ, ಅದು ದೇವರ ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ.


ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.


ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ, ಕುಲ, ಭಾಷೆಗಳವರು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.


ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರ ಮಾಡಿದ್ದಾರೆ; ಮೀಸಲಾದದ್ದಕ್ಕೂ, ಮೀಸಲಿಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧವಾದ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.


ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು. ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.


ನೀನು ಹೀಗೆ ಬರೆದದ್ದಕ್ಕೆ ಯಾಜಕನಾದ ಊರೀಯ, ಯೆಬೆರೆಕ್ಯನ ಮಗನಾದ ಜೆಕರ್ಯ ಈ ನಂಬಿಗಸ್ತರಾದ ಸಾಕ್ಷಿಗಳನ್ನು ಕರೆಯುವೆನು” ಎಂದು ಹೇಳಿದನು.


ಅರಸನಾದ ಆಹಾಜನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸೆರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು. ಅವನು ಅಲ್ಲಿದ್ದ ಯಜ್ಞವೇದಿಯನ್ನು ಕಂಡು, ಅದರ ಒಂದು ಪ್ರತಿಮೆಯನ್ನೂ, ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ, ಯಾಜಕನಾದ ಊರೀಯನಿಗೆ ಕಳುಹಿಸಿದನು.


ಅರಸನು ದಮಸ್ಕದಿಂದ ಹಿಂತಿರುಗಿ ಬಂದ ಮೇಲೆ ಆ ಯಜ್ಞವೇದಿಯನ್ನು ಕಂಡು, ಸಮೀಪಕ್ಕೆ ಹೋಗಿ, ಅದರ ಮೇಲೆ ಬಲಿಗಳನ್ನು ಅರ್ಪಿಸಿದನು.


ಇದಲ್ಲದೆ, ಯೆಹೋವನ ಆಲಯಕ್ಕೂ, ತನ್ನ ವೇದಿಗೂ ಮಧ್ಯದಲ್ಲಿದ್ದು ಆ ವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರ ಯಜ್ಞವೇದಿಯನ್ನೂ ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಯಜ್ಞವೇದಿಯ ಉತ್ತರ ದಿಕ್ಕಿನಲ್ಲಿಡಿಸಿದನು.


ಯಾಜಕನಾದ ಊರೀಯನು ಅರಸನಾದ ಆಹಾಜನು ಹೇಳಿದಂತೆಯೇ ಮಾಡಿದನು.


ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು” ಎಂದು ಯೆಹೋವನು ಯಾವುದನ್ನು ಕುರಿತು ಹೇಳಿದ್ದನೋ, ಆ ಯೆಹೋವನ ಆಲಯದಲ್ಲಿ ಮನಸ್ಸೆಯು ಯಜ್ಞವೇದಿಗಳನ್ನು ಕಟ್ಟಿಸಿದನು.


ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ಯೆಹೋವನ ಆಲಯದಲ್ಲಿ ಇಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಮತ್ತು ಅವನ ಮಗನಾದ ಸೊಲೊಮೋನನಿಗೂ, “ಈ ಆಲಯದಲ್ಲಿಯೂ, ಇಸ್ರಾಯೇಲರ ಸಕಲ ಗೋತ್ರಗಳಲ್ಲಿಯೂ, ನಾನು ಆರಿಸಿಕೊಂಡ ಯೆರೂಸಲೇಮಿನಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು


ಯೆಹೋವನು ಯೆರೂಸಲೇಮಿನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು