Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನ ಆಲಯದ ಪ್ರಾಕಾರದೊಳಗೆ ಸಬ್ಬತ್ ದಿನದ ಆರಾಧನೆಗಾಗಿ ರಾಜರಿಗಾಗಿ ಕಟ್ಟಲ್ಪಟ್ಟಿದ್ದ ಮಂಟಪವನ್ನು ಹಾಗೂ ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದವನು ಅಶ್ಶೂರದ ಅರಸನಾದ ಈ ಆಹಾಜನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರನ ಆಲಯದ ಪ್ರಾಕಾರದೊಳಗೆ ಸಬ್ಬತ್ ದಿನದ ಆರಾಧನೆಗಾಗಿ ರಾಜರಿಗಾಗಿ ಕಟ್ಟಲಾಗಿದ್ದ ಮಂಟಪವನ್ನು ಹಾಗು ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದವನು ಈ ಆಹಾಜನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನ ಆಲಯದ ಪ್ರಾಕಾರದೊಳಗೆ ಸಬ್ಬತ್‍ದಿನದ ಆರಾಧನೆಗಾಗಿ ರಾಜರಿಗೆ ಕಟ್ಟಲ್ಪಟ್ಟಿದ್ದ ಮಂಟಪವನ್ನೂ ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಲನ್ನೂ ಬದಲಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಹಾಜನು ಸಬ್ಬತ್ ದಿನಕ್ಕಾಗಿ ಕಟ್ಟಿದ ಮಂಟಪವನ್ನು ಬದಲಾಯಿಸಿದನು. ಕೆಲಸಗಾರರು ಆಲಯದ ಒಳಗೆ ಇದನ್ನು ನಿರ್ಮಿಸಿದ್ದರು. ಅಹಾಜನು ರಾಜನಿಗಾಗಿ ಇದ್ದ ಹೊರಭಾಗದ ಬಾಗಿಲನ್ನು ಬದಲಾಯಿಸಿದನು. ಅಹಾಜನು ದೇವಾಲಯದಿಂದ ಇವುಗಳನ್ನೆಲ್ಲಾ ಅಶ್ಶೂರದ ರಾಜನ ದೆಸೆಯಿಂದ ಬದಲಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೋವ ದೇವರ ಆಲಯದ ಪ್ರಾಕಾರದ ಒಳಗೆ ಸಬ್ಬತ್ ದಿನದ ಆರಾಧನೆಗಾಗಿ, ರಾಜರಿಗಾಗಿ ಕಟ್ಟಲಾಗಿದ್ದ ಮಂಟಪವನ್ನು ಹಾಗು ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದನು, ಇವುಗಳನ್ನೆಲ್ಲ ಅಸ್ಸೀರಿಯದ ಅರಸನ ನಿಮಿತ್ತವಾಗಿ ಆಹಾಜನೇ ಬದಲಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:18
7 ತಿಳಿವುಗಳ ಹೋಲಿಕೆ  

ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ, ಬಾಗಿಲಿನ ಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞ ಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲಿನ ಹೊಸ್ತಿಲಿನಲ್ಲಿ ಅಡ್ಡಬೀಳಲಿ, ಆ ಮೇಲೆ ಹೊರಟು ಹೋಗಲಿ. ಅ ದಿನ ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.


ಯೆಹೋಯಾದಾವನು ಅವರಿಗೆ, “ಸಬ್ಬತ್ ದಿನದಲ್ಲಿ ಮನೆಗೆ ಹೋಗುವ ಸೈನ್ಯದ ಮೂರರಲ್ಲೊಂದು ಭಾಗವು ರಾಜರ ಅರಮನೆಯನ್ನು ಕಾಯಬೇಕು,


ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಮತ್ತು ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಹೋದಳು.


ಅರಸನಾದ ಆಹಾಜನು ಅಶ್ಶೂರದ ಅರಸನ ನಿಮಿತ್ತವಾಗಿ ಯಜ್ಞವೇದಿಗಳ ಪಟ್ಟಿಗಳನ್ನು ಕತ್ತರಿಸಿದನು, ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು. ಕಡಲೆನಿಸುವ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಣಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು.


ಆಹಾಜನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ್ಯರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.


ಶಲ್ಲೂಮರು ಇಂದಿನವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲನ್ನು ಕಾಯುತ್ತಿರುತ್ತಾರೆ. ಇವರು ಲೇವಿಯರ ಪಾಳೆಯಗಳ ದ್ವಾರಪಾಲಕರು.


ಇಸ್ರಾಯೇಲಿನ ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಊಟ ಮಾಡುವುದಕ್ಕಾಗಿ ಇಲ್ಲಿ ಕುಳಿತುಕೊಳ್ಳಬಹುದು. ಅವನು ಹೆಬ್ಬಾಗಿಲ ಪಡಸಾಲೆಯ ಮಾರ್ಗವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು