Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಏಕೆಂದರೆ ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಆತನ ಒಡಂಬಡಿಕೆಯನ್ನು ಮೀರಿ, ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ವಿಧೇಯರಾಗಿ ನಡೆಯಲಿಲ್ಲ. ದೇವರ ಆಜ್ಞೆಗಳಿಗೆ ಕಿವಿಗೊಡದೇ ಅವುಗಳಂತೆ ನಡೆಯದೇ ಇದ್ದುದರಿಂದಲೇ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇಸ್ರಯೇಲರು ತಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳದೆಹೋದದ್ದೂ ಅವರ ನಿಬಂಧನೆಯನ್ನು ಉಲ್ಲಂಘಿಸಿದ್ದೂ ಅವರ ದಾಸ ಮೋಶೆಯ ಆಜ್ಞೆಗಳಿಗೆ ಅವಿಧೇಯರಾಗಿ ನಡೆದದ್ದೂ ಇದಕ್ಕೆ ಕಾರಣಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆಹೋದದ್ದೂ ಆತನ ನಿಬಂಧನೆಯನ್ನು ಉಲ್ಲಂಘಿಸಿದ್ದೂ ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ಅವಿಧೇಯರಾಗಿ ನಡೆದದ್ದೂ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇಸ್ರೇಲರು ತಮ್ಮ ದೇವರಾದ ಯೆಹೋವನಿಗೆ ಅವಿಧೇಯರಾದದ್ದೂ ಆತನ ಒಡಂಬಡಿಕೆಯನ್ನು ಉಲ್ಲಂಘಿಸಿದ್ದೂ ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ಅವಿಧೇಯರಾದದ್ದೂ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ ಅವರು ತಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ಅವರ ಒಡಂಬಡಿಕೆಯನ್ನೂ, ಯೆಹೋವ ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಸಮಸ್ತವನ್ನೂ ಮೀರಿದರು. ಅವರು ದೇವರ ಆಜ್ಞೆಗಳಿಗೆ ಕಿವಿಗೊಡಲಿಲ್ಲ, ಅವುಗಳಂತೆ ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:12
29 ತಿಳಿವುಗಳ ಹೋಲಿಕೆ  

ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?


ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ.


ಕರ್ತನ ಸೇವಕನು ಜಗಳವಾಡದೆ, ಎಲ್ಲರ ವಿಷಯದಲ್ಲಿ ಸಾಧುವೂ, ಬೋಧಿಸುವುದರಲ್ಲಿ ಪ್ರವೀಣನ್ನೂ, ತಾಳ್ಮೆಯುಳ್ಳವನ್ನೂ


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.


ಇಷ್ಟೆಲ್ಲಾ ನಡೆಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು. ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕ ಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವೆನು.”


ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.


ಭ್ರಷ್ಟಳಾದ ಇಸ್ರಾಯೇಲ್ ನನಗೆ ವಿಮುಖಳಾಗಿ ವ್ಯಭಿಚಾರ ಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ, ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ, ಅಂಜದೆಯೂ ತಾನೂ ಹೋಗಿ ವ್ಯಭಿಚಾರವನ್ನು ನಡೆಸಿದಳು.


ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.


ಮೂರ್ಖರು ಅಪರಾಧ, ದುರಾಚಾರಗಳ ದೆಸೆಯಿಂದ ಬಾಧೆಗೊಳಗಾದರು.


ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಬೇಗನೆ ಮರೆತು, ನಿನ್ನ ಮಾತಿಗೆ ಕಿವಿಗೊಡದೆ ಹಠಹಿಡಿದು, ತಮಗೊಬ್ಬ ನಾಯಕನನ್ನು ನೇಮಿಸಿಕೊಂಡು, ಮೊದಲಿನಂತೆ ದಾಸರಾಗಿರುವುದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ಆದರೆ ನೀನಾದರೋ ಪಾಪಗಳನ್ನು ಕ್ಷಮಿಸುವವನೂ, ಕನಿಕರ ದಯೆಗಳುಳ್ಳವನೂ, ದೀರ್ಘಶಾಂತನೂ, ಕೃಪಾಳುವೂ ಆಗಿರುವ ದೇವರಾಗಿರುವುದರಿಂದ ನೀನು ಅವರ ಕೈಬಿಡಲಿಲ್ಲ.


ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳದೆ, ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈಮುಗಿಯುವುದಾದರೆ


ಯೆಹೋವನ ಸೇವಕನಾದ ಮೋಶೆಯ ಮರಣದ ನಂತರ ಯೆಹೋವನು ಮೋಶೆಯ ಸೇವಕನಾದ ನೂನನ ಮಗನಾದ ಯೆಹೋಶುವನಿಗೆ


ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮರಣ ಹೊಂದಿದನು.


ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.


ಈ ಆಜ್ಞೆಗಳಿಗೆ ಅವಿಧೇಯರಾಗಿ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ ಶಾಪವೂ ನಿಮಗುಂಟಾಗುವವು.


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಹೋದರೆ ನಿಮ್ಮ ಎದುರಾಗಿ ನಾಶವಾಗಿ ಹೋಗುವ ಇತರ ಜನಾಂಗಗಳಂತೆಯೇ ನೀವೂ ಆತನಿಂದ ನಾಶವಾಗಿ ಹೋಗುವಿರಿ.


ನನ್ನ ಸೇವಕನಾದ ಮೋಶೆಯು ಅಂಥವನಲ್ಲ. ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ.


ಇಸ್ರಾಯೇಲರು ತಮಗೆ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಧರ್ಮಶಾಸ್ತ್ರದ ನಿಯಮ ನಿಬಂಧನೆಗಳನ್ನು ಅನುಸರಿಸಿ, ನಡೆಯುವುದಾದರೆ, ನನ್ನ ನಾಮ ಮಹತ್ತು ಈ ದೇವಾಲಯದಲ್ಲಿಯೂ, ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ, ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲ ಇರುವಂತೆ ಮಾಡುವೆನು, ಇಸ್ರಾಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿ ಅಲೆದಾಡದೆ ತಮ್ಮ ಪೂರ್ವಿಕರಿಗೆ ಕೊಡಲಾದ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು” ಎಂದು ಹೇಳಿದನು.


ಅವರು ದೇವರ ನಿಬಂಧನೆಯನ್ನು ಪಾಲಿಸಲಿಲ್ಲ, ಆತನ ಧರ್ಮಶಾಸ್ತ್ರವನ್ನು ಅನುಸರಿಸಲು ಮನಸ್ಸು ಮಾಡಲಿಲ್ಲ.


ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಇಸ್ರಾಯೇಲರು ನ್ಯಾಯವಂತನನ್ನು ಬೆಳ್ಳಿಗೆ, ಒಂದು ಜೊತೆ ಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ಮಾರಿದರು.


ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು.


“‘ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಕೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.”


ನಾವು ಪಾಪಾಪರಾಧಗಳನ್ನು ಮಾಡಿ ಕೆಟ್ಟವರಾಗಿ ನಡೆದು ನಿನಗೆ ತಿರುಗಿಬಿದ್ದು ನಿನ್ನ ಆಜ್ಞಾವಿಧಿಗಳನ್ನು ತೊರೆದು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು