2 ಅರಸುಗಳು 18:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
22 ಒಂದು ವೇಳೆ ನೀವು, ‘ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ’ ಎಂದು ಹೇಳುವುದಾದರೆ ಹಿಜ್ಕೀಯನು, ‘ಯೆರೂಸಲೇಮಿನ ಯಜ್ಞವೇದಿಯ ಮುಂದೆಯೇ ಆರಾಧನೆಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ, ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದ್ದಾನಲ್ಲಾ,
22 “ಬಹುಶಃ, ನೀವು ‘ನಮ್ಮ ದೇವರಾದ ಸರ್ವೇಶ್ವರನನ್ನೇ ನಂಬಿಕೊಂಡಿದ್ದೇವೆ,’ ಎಂದು ಹೇಳಬಹುದು. ಜೆರುಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆಮಾಡಬೇಕು ಎಂದು ಯೆಹೂದ್ಯರಿಗೂ ಮತ್ತು ಜೆರುಸಲೇಮಿನವರಿಗೂ ಹಿಜ್ಕೀಯನು ಆಜ್ಞಾಪಿಸಿ ಆ ಸರ್ವೇಶ್ವರ ಸ್ವಾಮಿಯ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೆ?
22 ಬಹುಶಃ ನೀನು, “ನಾವು ನಮ್ಮ ದೇವರಾದ ಯೆಹೋವನಲ್ಲಿ ಭರವಸೆಯಿಟ್ಟಿದ್ದೇವೆ” ಎಂದು ಹೇಳುವೆ. ಆದರೆ ಹಿಜ್ಕೀಯನು ಯೆಹೋವನ ಉನ್ನತಸ್ಥಳಗಳನ್ನು ಮತ್ತು ಯಜ್ಞವೇದಿಕೆಯನ್ನು ನಾಶಪಡಿಸಿ ಯೆಹೂದಕ್ಕೆ ಮತ್ತು ಜೆರುಸಲೇಮಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಞವೇದಿಕೆಯ ಸನ್ನಿಧಿಯಲ್ಲಿ ಮಾತ್ರ ಆರಾಧಿಸಬೇಕು” ಎಂದು ಹೇಳಿದನೆಂಬುದು ನನಗೆ ತಿಳಿದಿದೆ.
22 ಬಹುಶಃ ನೀವು, “ನಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿದ್ದೇವೆ,” ಎಂದು ಹೇಳಬಹುದು. “ಯೆರೂಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆ ಮಾಡಬೇಕು,” ಎಂದು ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ ಹಿಜ್ಕೀಯನು ಆಜ್ಞಾಪಿಸಿ, ಆ ಯೆಹೋವ ದೇವರ ಪೂಜಾಸ್ಥಳಗಳನ್ನೂ, ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೇ?
ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.
“ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.
ಒಂದು ವೇಳೆ ನೀನು, ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆ’ ಎಂದು ಹೇಳಬಹುದು. ಹಿಜ್ಕೀಯನು, ‘ನೀವು ಯೆರೂಸಲೇಮಿನಲ್ಲಿರುವ ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!
ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲಾ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಕೆಡವಿಸಿ ಬಿಟ್ಟನಲ್ಲವೆ?
ಯೆಶಾಯನು ಅವರಿಗೆ, “ನೀವು ಹಿಂತಿರುಗಿ ಹೋಗಿ ನಿಮ್ಮ ರಾಜನಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ, ನೀನು ಕೇಳಿದ ಮಾತುಗಳ ದೆಸೆಯಿಂದ ಹೆದರಬೇಡ, ಅಶ್ಶೂರದ ಅರಸನ ಸೇವಕರು ಆ ಮಾತುಗಳಿಂದ ನನ್ನನ್ನೇ ದೂಷಿಸಿದ್ದಾರೆ.
ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.
ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.
ನಿಮ್ಮ ಕುಲಗಳಲ್ಲಿ ಯಾವುದೋ ಒಂದು ಕುಲದಲ್ಲಿ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ಸರ್ವಾಂಗಹೋಮಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸಿದ ಎಲ್ಲಾ ಆಚಾರಗಳನ್ನು ನಡೆಸಬೇಕು.