Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಗಾಜ ಪ್ರಾಂತ್ಯದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ, ಕಾವಲುಗಾರರ ಗೋಪುರ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಚಿಕ್ಕಗ್ರಾಮ ಮೊದಲುಗೊಂಡು ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಗಾಜಪ್ರಾಂತ್ಯದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ ಕಾವಲುಗಾರರ ಗೋಪುರವಿದ್ದ ಚಿಕ್ಕ ಹಳ್ಳಿ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ಹಾಳುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಗಾಜಪ್ರಾಂತದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ ಕಾವಲುಗಾರರ ಬುರುಜಿರುವ ಚಿಕ್ಕ ಹಳ್ಳಿ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ಹಾಳುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹಿಜ್ಕೀಯನು ಗಾಜಾ ಪ್ರಾಂತ್ಯದವರೆಗಿದ್ದ ಮತ್ತು ಅದರ ಸುತ್ತಲಿನ ಪ್ರದೇಶದಲ್ಲಿದ್ದ ಫಿಲಿಷ್ಟಿಯರನ್ನು ಸೋಲಿಸಿದನು. ಅವನು ಫಿಲಿಷ್ಟಿಯರ ಚಿಕ್ಕ ಊರಿನಿಂದಿಡಿದು ದೊಡ್ಡ ನಗರಗಳನ್ನೆಲ್ಲಾ ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಕಾವಲು ಗೋಪುರದಿಂದ ಕೋಟೆಯುಳ್ಳ ಪಟ್ಟಣಗಳವರೆಗೂ ಫಿಲಿಷ್ಟಿಯರನ್ನು ಗಾಜಪ್ರಾಂತ್ಯದವರೆಗೆ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:8
9 ತಿಳಿವುಗಳ ಹೋಲಿಕೆ  

ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಏಕೆಂದರೆ ನಾಗರ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಸಂತತಿಯು ಹಾರುವ ಸರ್ಪವೇ.


ಇಸ್ರಾಯೇಲರು ತಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದ ಗುಪ್ತವಾದ ದುಷ್ಟ ಕೃತ್ಯಗಳನ್ನು ನಡಿಸಿದರು. ಕಾವಲುಗಾರರ ಗೋಪುರವುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು.


ಫಿಲಿಷ್ಟಿಯರು ಯೆಹೂದದ ತಗ್ಗಾದ ಪ್ರದೇಶದ ಮತ್ತು ದಕ್ಷಿಣಪ್ರಾಂತ್ಯದ ಪಟ್ಟಣಗಳ ಮೇಲೆ ಬಿದ್ದು ಬೇತ್‌ಷೆಮೆಷ್‌, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿಮ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿದ್ದರು.


ಅವನು ಅದನ್ನು ಅಗೆದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿಯ ಸಸಿಗಳನ್ನು ನೆಟ್ಟು, ಮಧ್ಯದಲ್ಲಿ ಗೋಪುರವನ್ನು ಕಟ್ಟಿ, ದ್ರಾಕ್ಷಿಯ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ಸಿಹಿ ದ್ರಾಕ್ಷಿಯ ಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತು.


ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು.


ಮೇಲೆ ಹೇಳಿದ ಪ್ರಭುಗಳು ಯೆಹೂದ ರಾಜನಾದ ಹಿಜ್ಕೀಯನ ಕಾಲದಲ್ಲಿ ಅಲ್ಲಿಗೆ ಹೋಗಿ ಆ ಹಾಮ್ಯರ ಪಾಳೆಯಗಳನ್ನೂ, ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಗೆದ್ದು, ಎಲ್ಲರನ್ನೂ ನಿರ್ನಾಮಮಾಡಿದರು. ಅವರು ತಮ್ಮ ಆಡುಕುರಿಗಳಿಗೆ ಅಲ್ಲಿ ಮೇವು ಸಿಕ್ಕಿದ್ದರಿಂದ ಅಲ್ಲೇ ವಾಸಿಸಿದರು. ಅಲ್ಲಿನ ಮೂಲನಿವಾಸಿಗಳು ಯಾರೂ ಉಳಿಯಲಿಲ್ಲ.


ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ, ಹಾಗೆಯೇ ಯೆಹೋವನು ರೆಫಾಯರನ್ನು ಅಮ್ಮೋನಿಯರ ನಾಡಿನಿಂದ ಹೊರಗೆ ಹೋಗುವಂತೆ ಮಾಡಿದನು. ಅಮ್ಮೋನಿಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರಲ್ಲಿ ವಾಸಮಾಡ ತೊಡಗಿದರು.


ಮತ್ತು ಅಷ್ಡೋದ್ ಸಂಸ್ಥಾನ ಮತ್ತು ಅದರ ಗ್ರಾಮ ಪಟ್ಟಣಗಳು; ಗಾಜಾ ಸಂಸ್ಥಾನ ಹಾಗೂ ಐಗುಪ್ತ ನದಿಯ ಹತ್ತಿರದಲ್ಲಿ ಮತ್ತು ಮಹಾಸಾಗರದ ತೀರದಲ್ಲಿ ಇರುವ ಅದರ ಎಲ್ಲಾ ಗ್ರಾಮ, ಪಟ್ಟಣಗಳು.


ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ, ಆತನ ದಯೆಯಿಂದ ಆಪತ್ತು ನನ್ನಿಂದ ದೂರವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು