Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ದೇವರು ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಈ ಅಸ್ಸೀರಿಯನ ಕೈಯಿಂದ ಬಿಡಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಮ್ಮ ದೇವರಾದ ಯೆಹೋವನೇ, ಅಶ್ಶೂರದ ರಾಜನಿಂದ ನಮ್ಮನ್ನು ರಕ್ಷಿಸು. ಭೂಲೋಕದ ರಾಜ್ಯಗಳೆಲ್ಲ ನೀನೊಬ್ಬನೇ ದೇವರಾದ ಯೆಹೋವನೆಂದು ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:19
17 ತಿಳಿವುಗಳ ಹೋಲಿಕೆ  

ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.


ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ, ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಪರರಾಜ್ಯದವರೂ, ಲೋಕದ ಎಲ್ಲಾ ಜನರು ನಿನ್ನ ನಾಮಮಹತ್ತನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಸಿದ್ದೇನೆಂದು ತಿಳಿದುಕೊಳ್ಳುವರು.


ಆಗ ದೇವರ ಮನುಷ್ಯನು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಯೆಹೋವನು ಹೀಗೆನ್ನುತ್ತಾನೆ, ಯೆಹೋವನು ತಗ್ಗುಗಳ ದೇವರಲ್ಲ. ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾ ಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು. ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವುದು” ಎಂದು ಹೇಳಿದನು.


ನಾನು ಏನು ತಾನೇ ಹೇಳಲಿ? ಕಾನಾನ್ಯರೂ ಮತ್ತು ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರು ಉಳಿಯದಂತೆ ಮಾಡುವರು. ಆಗ ನಿನ್ನ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿ?” ಎಂದನು.


ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.


ಇದರಿಂದ ಭೂನಿವಾಸಿಗಳೆಲ್ಲರೂ ಯೆಹೋವನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವ ಹಾಗೆಯೂ ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವವರಾಗಿರುವರು” ಎಂದನು.


ಅಲ್ಲಿ ನಿನ್ನ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವು ಪರರಾಜ್ಯಗಳವರಿಗೂ ಗೊತ್ತಾಗುವುದು. ಅವನು ಈ ಆಲಯದ ಮುಂದೆ ನಿಂತು ನಿನ್ನನ್ನು ಪ್ರಾರ್ಥಿಸುವುದಾದರೆ,


ಭೂಲೋಕದ ಜನರೆಲ್ಲರೂ ಯೆಹೋವನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ ಆತನು ಅಗತ್ಯವಿರುವಾಗೆಲ್ಲಾ ತನ್ನ ಸೇವಕನ ಮತ್ತು ಪ್ರಜೆಗಳಾದ ಇಸ್ರಾಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.


“ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಜನಾಂಗಗಳಲ್ಲಿ ಆತನ ಸತ್ಕಾರ್ಯಗಳನ್ನು ಪ್ರಸಿದ್ಧಪಡಿಸಿರಿ.


ಆದುದರಿಂದ ಯೆಹೋವನು ಹೇಳುವುದೇನೆಂದರೆ, ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವುದಕ್ಕಾಗಿ ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಸುವೆನು. ಆಗ ಅದು ರಕ್ತವಾಗುವುದು.


ಅನಂತರ, ನಾಮಾನನು ತನ್ನ ಪರಿವಾರದವರೊಡನೆ, ಹಿಂದಿರುಗಿ ದೇವರ ಮನುಷ್ಯನ ಹತ್ತಿರ ಹೋಗಿ, ಅವನ ಮುಂದೆ ನಿಂತು, “ಇಸ್ರಾಯೇಲ್ ದೇಶದಲ್ಲಿರುವ ದೇವರ ಹೊರತಾಗಿ ಲೋಕದಲ್ಲಿ ಬೇರೆ ದೇವರು ಇರುವುದೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು. ನೀನು ದಯವಿಟ್ಟು ಕಾಣಿಕೆಯನ್ನು ಅಂಗೀಕರಿಸಬೇಕು” ಎಂದು ಹೇಳಿದನು.


ಈ ಭಕ್ತಿ ಕಾರ್ಯಗಳಾದ ನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿ ಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆ ಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು