Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ, ಪಕ್ಕನೆ ಅಗ್ನಿಮಯವಾದ ರಥಗಳು ನಡುವೆ ಬಂದು ಅವರಿಬ್ಬರನ್ನು ಬೇರ್ಪಡಿಸಿದವು. ಎಲೀಯನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಏರಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ಮಾತಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಳಿಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಎಲೀಯ ಮತ್ತು ಎಲೀಷ ಒಟ್ಟಿಗೆ ನಡೆಯುತ್ತಾ ಮಾತನಾಡುತ್ತಿದ್ದರು. ಇದ್ದಕ್ಕಿದ್ದಂತೆ, ಕೆಲವು ಕುದುರೆಗಳು ಮತ್ತು ರಥಗಳು ಬಂದು ಎಲೀಯನನ್ನು ಎಲೀಷನಿಂದ ಬೇರ್ಪಡಿಸಿದವು. ಆ ಕುದುರೆಗಳು ಮತ್ತು ರಥಗಳು ಬೆಂಕಿಯಂತಿದ್ದವು! ನಂತರ ಎಲೀಯನು ಸುಂಟರ ಗಾಳಿಯಲ್ಲಿ ಪರಲೋಕಕ್ಕೆ ಏರಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ನಡೆಯುತ್ತಾ ಬಂದು ಮಾತನಾಡಿಕೊಂಡಿರುವಾಗ, ಬೆಂಕಿಯ ರಥವೂ ಬೆಂಕಿಯ ಕುದುರೆಗಳೂ ಅವರಿಬ್ಬರನ್ನೂ ಬೇರೆಯಾಗಿ ಮಾಡಿದವು. ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:11
13 ತಿಳಿವುಗಳ ಹೋಲಿಕೆ  

“ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ” ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥಾರಥಾಶ್ವಗಳು ಆ ಸೇವಕನಿಗೆ ಕಂಡವು.


ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?


ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ.


ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಕೇಳಿರಿ. ಇಗೋ, ಮೊಳಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೆನೆಂಬುದಕ್ಕೆ ಇವರೇ ಮುಂಗುರುತು.


ಯೆಹೋವನೇ, ನಿನಗೆ ನದಿಗಳ ಮೇಲೆ ರೌದ್ರವೋ? ಹೊಳೆಗಳ ಮೇಲೆ ಸಿಟ್ಟುಗೊಂಡಿದ್ದಿಯಾ? ಸಮುದ್ರದ ಮೇಲೆ ಕೋಪವನ್ನು ಪ್ರದರ್ಶಿಸುತ್ತೀಯೋ? ಇಲ್ಲಾ, ನೀನು ಜಯರಥಗಳಲ್ಲಿ ಆಸೀನನಾಗಿ ಮೋಡಗಳ ಮೇಲೆ ರಕ್ಷಣೆಯನ್ನು ಕಳುಹಿಸಿದಾತನು!


ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾಗಿ ಕಾಣದೆ ಹೋದನು.


ಯೆಹೋವನು ಎಲೀಯನನ್ನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಸೇರಿಸಿಕೊಳ್ಳುವ ಸಮಯ ಬಂದಾಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.


ಅನಂತರ ಅವರಿಗೆ, “ಇಲ್ಲಿ ಮೇಲಕ್ಕೆ ಏರಿ ಬನ್ನಿರಿ!” ಎಂದು ಆಕಾಶದಿಂದ ಮಹಾ ವಾಣಿಯು ತಿಳಿಸಿತು. ಅದನ್ನು ಕೇಳಿ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು