Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಳಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿದೆ” ಎಂದು ತಿಳಿದುಕೊಂಡು ಅವನನ್ನು ಎದುರುಗೊಂಡು, ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದೂರದಲ್ಲಿ ನಿಂತಿದ್ದ ಜೆರಿಕೋವಿನ ಪ್ರವಾದಿಮಂಡಲಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮಶಕ್ತಿ ಎಲೀಷನ ಮೇಲೆ ಬಂದು ನೆಲಸಿದೆ,” ಎಂದು ತಿಳಿದುಕೊಂಡರು. ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಲಿಯವರು ಇದನ್ನು ಕಂಡು ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿತೆಂದು ತಿಳಿದುಕೊಂಡು ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜೆರಿಕೊದಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನನ್ನು ಕಂಡು, “ಎಲೀಯನ ಆತ್ಮವು ಈಗ ಎಲೀಷನ ಮೇಲಿದೆ!” ಎಂದು ಹೇಳಿ ಎಲೀಷನನ್ನು ಭೇಟಿಮಾಡಲು ಬಂದರು. ಅವರು ಎಲೀಷನಿಗೆ ಸಾಷ್ಟಾಂಗನಮಸ್ಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಗುಂಪು ಅವನನ್ನು ಕಂಡಾಗ, “ಎಲೀಯನ ಆತ್ಮವು ಎಲೀಷನ ಮೇಲೆ ನಿಂತಿರುವುದು,” ಎಂದು ಹೇಳಿ, ಎದುರುಗೊಳ್ಳಲು ಬಂದು, ಅವನ ಮುಂದೆ ನೆಲದವರೆಗೂ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:15
21 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.


ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.


ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; “ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ, ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ.


ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.


ಆಕೆಯು ಹತ್ತಿರ ಬಂದು, ಅವನ ಪಾದಗಳಿಗೆ ಬಿದ್ದು ಸಾಷ್ಟಾಂಗನಮಸ್ಕಾರ ಮಾಡಿ, ಮಗನನ್ನು ಕರೆದುಕೊಂಡು ಹೋದಳು.


ಯೆರಿಕೋವಿನ ಜನರು ಎಲೀಷನಿಗೆ, “ನಮ್ಮ ಒಡೆಯನಾದ ನಿನಗೆ ಗೊತ್ತಿರುವಂತೆ, ಈ ಊರು ಕಟ್ಟಲ್ಪಟ್ಟಿರುವ ಸ್ಥಳವು ಒಳ್ಳೆಯದಾಗಿದೆ. ಆದರೆ ನೀರು ಕೆಟ್ಟದ್ದಾಗಿರುವುದರಿಂದ ಬಂಜೆತನ ಉಂಟಾಗಿದೆ” ಎಂದು ಹೇಳಿದರು.


ಪ್ರವಾದಿ ಮಂಡಳಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಯೊರ್ದನಿಗೆ ಸ್ವಲ್ಪ ದೂರದಲ್ಲಿಯೇ ನಿಂತುಕೊಂಡರು.


ಆ ದಿನದಲ್ಲಿ ಯೆಹೋವನು ಯೆಹೋಶುವನನ್ನು ಎಲ್ಲಾ ಇಸ್ರಾಯೇಲ್ಯರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಹೇಗೆ ನಡೆದುಕೊಂಡರೋ ಹಾಗೆಯೇ ಯೆಹೋಶುವನು ಭಯ ಮತ್ತು ಗೌರವದಿಂದ ನಡೆದುಕೊಂಡರು.


ಆಗ ಯೆಹೋವನು ಯೆಹೋಶುವನಿಗೆ “ನಾನು ಈ ದಿನ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂದು ಅವರಿಗೆ ಗೊತ್ತಾಗುವುದು.


ಇಸ್ರಾಯೇಲರ ಸಮೂಹದವರೆಲ್ಲರೂ ಅವನಿಗೆ ವಿಧೇಯರಾಗಿರುವಂತೆ ನಿನ್ನ ಬಗ್ಗೆ ಇರುವ ಗೌರವವನ್ನು ಅವನಿಗೆ ಕೊಡಬೇಕು.


ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲರ ಅರಸನನ್ನಾಗಿಯೂ, ಆಬೇಲ್ ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭಿಷೇಕಿಸು.


ಅಲ್ಲಿಂದ ಫಿಲಿಷ್ಟಿಯರ ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು.


ಪ್ರವಾದಿಮಂಡಳಿಯಲ್ಲಿ ಒಬ್ಬನು ಯೆಹೋವನ ಆತ್ಮ ಪ್ರೇರಿತನಾಗಿ ತನ್ನ ಜೊತೆಗಾರನಿಗೆ “ನನ್ನನ್ನು ಹೊಡಿ” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.


ಅದಕ್ಕೆ ಗೇಹಜಿಯು, “ಕ್ಷೇಮ, ಎಫ್ರಾಯೀಮ್ ಪರ್ವತ ಪ್ರದೇಶದಿಂದ ಪ್ರವಾದಿಮಂಡಳಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗೋಸ್ಕರ ಬೇಗನೇ ಒಂದು ತಲಾಂತು ಬೆಳ್ಳಿಯನ್ನೂ, ಎರಡು ಜೋಡಿ ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂದು ನನ್ನ ಯಜಮಾನನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು” ಎಂದು ಉತ್ತರ ಕೊಟ್ಟನು.


ಪ್ರವಾದಿಯಾದ ಎಲೀಷನು ಪ್ರವಾದಿಮಂಡಳಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.”


ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನು, ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು