Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬೇತೇಲಿನ ಪ್ರವಾದಿ ಮಂಡಳಿಯವರು ಎಲೀಷನನ್ನು ಎದುರುಗೊಂಡು ಅವನನ್ನು, “ಯೆಹೋವನು ಈ ಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತೆಗೆದುಕೊಳ್ಳುವನೆಂಬುದು ನಿನಗೆ ಗೊತ್ತುಂಟೋ?” ಎಂದು ಕೇಳಿದರು. ಅದಕ್ಕೆ ಅವನು, “ಗೊತ್ತಿದೆ ನೀವು ಸುಮ್ಮನಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾದರು. “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರೆಂಬುದು ನಿಮಗೆ ಗೊತ್ತೇ?” ಎಂದು ಕೇಳಿದರು. ಅದಕ್ಕೆ ಎಲೀಷನು, “ನನಗೆ ಗೊತ್ತಿದೆ; ಆದರೆ ನೀವು ಸುಮ್ಮನಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತರುವಾಯ ಅವರಿಬ್ಬರೂ ಬೇತೇಲಿಗೆ ಹೋದರು. ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಎದುರುಗೊಂಡು ಅವನನ್ನು - ಯೆಹೋವನು ಈಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವನೆಂಬದು ನಿನಗೆ ಗೊತ್ತುಂಟೋ ಎಂದು ಕೇಳಿದರು. ಅದಕ್ಕೆ ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಬೇತೇಲಿನಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನ ಬಳಿಗೆ ಬಂದು, ಅವನಿಗೆ, “ಯೆಹೋವನು ಈ ದಿನ ನಿನ್ನ ಒಡೆಯನನ್ನು ನಿನ್ನಿಂದ ತೆಗೆದುಕೊಳ್ಳುತ್ತಾನೆಂಬುದು ನಿನಗೆ ತಿಳಿದಿದೆಯೇ?” ಎಂದು ಕೇಳಿದರು. ಎಲೀಷನು, “ಹೌದು, ನನಗೆ ಅದು ತಿಳಿದಿದೆ. ಅದರ ಬಗ್ಗೆ ಮಾತನಾಡಬೇಡಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಇಂದು ಯೆಹೋವ ದೇವರು ನಿನ್ನ ಯಜಮಾನನನ್ನು ನಿನ್ನಿಂದ ತೆಗೆದುಕೊಳ್ಳುವರೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ಹೌದು, ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:3
17 ತಿಳಿವುಗಳ ಹೋಲಿಕೆ  

ಎಲೀಷನು ತಿರುಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿಮಂಡಳಿಯವರು ತನ್ನ ಮುಂದೆ ಒಟ್ಟಿಗೆ ಸೇರಿ ಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಪಾತ್ರೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆ ಮಾಡು” ಎಂದು ಆಜ್ಞಾಪಿಸಿದನು.


ಒಂದು ದಿನ ಪ್ರವಾದಿ ಮಂಡಳಿಯಲ್ಲಿನ ಒಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ, “ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು. ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನು ಎಂಬುದು ನಿನಗೆ ಗೊತ್ತಿದೆಯಲ್ಲಾ. ಸಾಲಕೊಟ್ಟವನು, ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ಕರೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ” ಎಂದು ಮೊರೆಯಿಟ್ಟಳು.


ಪ್ರವಾದಿಯಾದ ಎಲೀಷನು ಪ್ರವಾದಿಮಂಡಳಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.”


ಪ್ರವಾದಿಮಂಡಳಿಯಲ್ಲಿ ಒಬ್ಬನು ಯೆಹೋವನ ಆತ್ಮ ಪ್ರೇರಿತನಾಗಿ ತನ್ನ ಜೊತೆಗಾರನಿಗೆ “ನನ್ನನ್ನು ಹೊಡಿ” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.


“ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.


ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ.


ಅದಕ್ಕೆ ಗೇಹಜಿಯು, “ಕ್ಷೇಮ, ಎಫ್ರಾಯೀಮ್ ಪರ್ವತ ಪ್ರದೇಶದಿಂದ ಪ್ರವಾದಿಮಂಡಳಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗೋಸ್ಕರ ಬೇಗನೇ ಒಂದು ತಲಾಂತು ಬೆಳ್ಳಿಯನ್ನೂ, ಎರಡು ಜೋಡಿ ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂದು ನನ್ನ ಯಜಮಾನನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು” ಎಂದು ಉತ್ತರ ಕೊಟ್ಟನು.


ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಳಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿದೆ” ಎಂದು ತಿಳಿದುಕೊಂಡು ಅವನನ್ನು ಎದುರುಗೊಂಡು, ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.


ಪ್ರವಾದಿ ಮಂಡಳಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಯೊರ್ದನಿಗೆ ಸ್ವಲ್ಪ ದೂರದಲ್ಲಿಯೇ ನಿಂತುಕೊಂಡರು.


ಯೆರಿಕೋವಿನಲ್ಲಿದ್ದ ಪ್ರವಾದಿ ಮಂಡಳಿಯವರು ಎಲೀಷನನ್ನು ಎದುರುಗೊಂಡು ಅವನಿಗೆ, “ಯೆಹೋವನು ಈ ಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವನೆಂಬುದು ನಿನಗೆ ಗೊತ್ತುಂಟೋ?” ಎಂದು ಕೇಳಿದರು. ಅದಕ್ಕೆ ಅವನು, ನನಗೆ “ಗೊತ್ತುಂಟು ನೀವು ಸುಮ್ಮನಿರಿ” ಎಂದು ಉತ್ತರ ಕೊಟ್ಟನು.


ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.


ಅವನು ದಾವೀದನನ್ನು ಹಿಡಿದು ತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿ ಸಮೂಹವು ಪ್ರವಾದಿಸುತ್ತಿರುವುದನ್ನೂ, ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನು ಕಂಡಾಗ, ದೇವರ ಆತ್ಮವು ಅವರ ಮೇಲೆಯೂ ಬಂದಿತು. ಅವರೂ ಪ್ರವಾದಿಸಿದರು.


“ಆತನು ತನ್ನ ಜನರನ್ನು ಪ್ರೀತಿಸುತ್ತಾನೆ. ಯೆಹೋವನೇ, ನಿನ್ನ ಪರಿಶುದ್ಧ ಜನರು ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣಸನ್ನಿಧಾನದಲ್ಲಿ ಕುಳಿತಿರುವರು; ನೀನು ಹೇಳುವ ಆಜ್ಞೆಗಳನ್ನು ತಪ್ಪದೆ ಪಾಲಿಸಿದರು.


ಅಲ್ಲಿಂದ ಫಿಲಿಷ್ಟಿಯರ ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು.


ಒಂದು ದಿನ ಪ್ರವಾದಿಮಂಡಳಿಯವರು ಎಲೀಷನಿಗೆ, “ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಈ ಸ್ಥಳವು ಬಹಳ ಇಕ್ಕಟ್ಟಾಗಿದೆ.


ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನು, ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು