Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಶಾಯನು ತಿರುಗಿ ಹಿಜ್ಕೀಯನನ್ನು, “ಅವರು ನಿನ್ನ ಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಅವನು, “ಅರಮನೆಯಲ್ಲಿ ಇರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ಒಂದು ವಸ್ತುವು ಇರುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯೆಶಾಯನು ಮತ್ತೆ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಹಿಜ್ಕೀಯನು, “ಅರಮನೆಯಲ್ಲಿರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ಒಡವೆ ವಸ್ತು ಒಂದೂ ಇಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಶಾಯನು ತಿರಿಗಿ ಅವನನ್ನು - ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು ಎಂದು ಕೇಳಲು ಅವನು - ಅರಮನೆಯಲ್ಲಿರುವದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಶಾಯನು, “ಅವರು ನಿನ್ನ ಮನೆಯಲ್ಲಿ ಏನನ್ನು ನೋಡಿದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ನನ್ನ ಮನೆಯಲ್ಲಿರುವುದನ್ನೆಲ್ಲಾ ನೋಡಿದರು. ಅವರಿಗೆ ತೋರಿಸದೆ ಉಳಿದಿರುವುದು ನನ್ನ ಭಂಡಾರದಲ್ಲಿ ಏನೂ ಇಲ್ಲ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅದಕ್ಕೆ ಯೆಶಾಯನು ಪುನಃ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನನ್ನು ನೋಡಿದರು?” ಎಂದು ಕೇಳಿದನು. ಹಿಜ್ಕೀಯನು, “ನನ್ನ ಅರಮನೆಯಲ್ಲಿ ಇರುವುದೆಲ್ಲವನ್ನು ಅವರು ನೋಡಿದರು, ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇಲ್ಲ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:15
9 ತಿಳಿವುಗಳ ಹೋಲಿಕೆ  

ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಮನುಷ್ಯನು ಜನ ಸಮುದಾಯಕ್ಕೆ ಹೆದರಿದ್ದರಿಂದಾಗಲಿ, ಕುಲೀನರ ತಿರಸ್ಕಾರವು ನನಗೆ ಭಯ ಹುಟ್ಟಿಸಿದ್ದರಿಂದಾಗಲಿ,


ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದ್ದದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ, ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.


ಆಗ ಯೆಹೋಶುವನು ಆಕಾನನಿಗೆ “ನನ್ನ ಮಗನೇ, ನೀನು ಇಸ್ರಾಯೇಲರ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವುದನ್ನೂ ಮುಚ್ಚಿಡಬೇಡ” ಅಂದನು.


ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನನ್ನು, “ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?” ಎಂದು ಕೇಳಲು ಅವನು, “ಅವರು ಬಹು ದೂರ ದೇಶವಾದ ಬಾಬೆಲಿನಿಂದ ಬಂದವರು” ಎಂದು ಉತ್ತರ ಕೊಟ್ಟನು.


ಆಗ ಯೆಶಾಯನು ಹಿಜ್ಕೀಯನಿಗೆ, “ಯೆಹೋವನ ಮಾತನ್ನು ಕೇಳು,


ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.


“ಈ ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುದು; ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಸಿವುಡಿನಂತೆ ಇರುವವು, ಯೆಹೋವನ ಈ ಮಾತನ್ನು ಸಾರು” ಎಂದು ನನಗೆ ಅಪ್ಪಣೆಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು