Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹಿಜ್ಕೀಯನು ಯೆಶಾಯನಿಗೆ, “ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ. ನನ್ನ ಜೀವಮಾನ ಕಾಲದಲ್ಲಿ ಸಮಾಧಾನವೂ, ಭದ್ರತೆಯೂ ಇರುವುದಲ್ಲವೇ?” ಎಂದು ಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ‘ನನ್ನ ಜೀವಮಾನದಲ್ಲಿ ಹೇಗೂ ಸೌಭಾಗ್ಯವಿದ್ದರೆ ಸಾಕು’ ಎಂದುಕೊಂಡ ಹಿಜ್ಕೀಯನು ಯೆಶಾಯನಿಗೆ, “ನೀವು ತಿಳಿಸಿದ ಸರ್ವೇಶ್ವರನ ಮಾತು ಹಿತಕರವಾಗಿದೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನ ಜೀವಮಾನದಲ್ಲಿ ಹೇಗೂ ತಪ್ಪದೆ ಸೌಭಾಗ್ಯವಿರುವದು ಅಂದುಕೊಂಡು ಹಿಜ್ಕೀಯನು ಯೆಶಾಯನಿಗೆ - ನೀನು ತಿಳಿಸಿದ ಯೆಹೋವನ ಮಾತು ಒಳ್ಳೇದಾಗಿದೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಹಿಜ್ಕೀಯನು ತನ್ನ ಜೀವಮಾನದಲ್ಲಿ ಹೇಗೂ ಶಾಂತಿಯಿರುವುದೆಂದು ತಿಳಿದುಕೊಂಡು ಯೆಶಾಯನಿಗೆ, “ಯೆಹೋವನ ಈ ಸಂದೇಶವು ಒಳ್ಳೆಯದಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಹಿಜ್ಕೀಯನು, “ನೀನು ಹೇಳಿದ ಯೆಹೋವ ದೇವರ ವಾಕ್ಯವು ಒಳ್ಳೆಯದೇ,” ಎಂದು ಯೆಶಾಯನಿಗೆ ಹೇಳಿದನು. ಅವನು, ಹೇಗೂ ನನ್ನ ಜೀವಮಾನದಲ್ಲಿ ಸಮಾಧಾನವು, ಭದ್ರತೆಯೂ ಇರುವುವು, ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:19
15 ತಿಳಿವುಗಳ ಹೋಲಿಕೆ  

ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನು ತಿಳಿಸಿದನು. ಏಲಿಯು ಅದನ್ನು ಕೇಳಿ, “ಆತನು ಯೆಹೋವನು; ತನಗೆ ಸರಿಕಾಣುವುದನ್ನು ಮಾಡಲಿ” ಎಂದನು.


ಆ ದೂತನು ಅವರಿಗೆ, “ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನು ಉಂಟುಮಾಡುವವು; ಹೀಗಿರಲು ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.’”


ಮನುಷ್ಯನಿಗೆ ಜೀವ ವರವಿರಲು ತನ್ನ ಪಾಪದ ಶಿಕ್ಷೆಗಾಗಿ ಗುಣುಗುಟ್ಟುವುದೇಕೆ?


ನಾನು ಉಳಿದಿರುವುದು ಒಡಂಬಡಿಕೆಗೆ ಬದ್ಧವಾಗಿರುವ ಆತನ ನಂಬಿಗಸ್ತಿಕೆಯಿಂದಲೇ; ಯೆಹೋವನ ಕೃಪಾವರಗಳ ಕಾರ್ಯಗಳು ನಿಂತುಹೋಗವು.


ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ, ಅದಕ್ಕೆ ಸಮಾಧಾನವನ್ನು ಕೊಟ್ಟು, ನಿವಾಸಿಗಳನ್ನು ಗುಣಪಡಿಸುವೆನು. ಸ್ಥೈರ್ಯ ಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು.


ನೀನೇ ಇದನ್ನು ಬರಮಾಡಿದ್ದರಿಂದ ನಾನು ಏನೂ ಹೇಳದೆ ಮೌನವಾಗಿರುವೆನು.


“ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು.


ಅವನು ಅಹಷ್ವೇರೋಷನ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿದ್ದ ಯೆಹೂದ್ಯರೆಲ್ಲರಿಗೂ ಪತ್ರವನ್ನು ಕಳುಹಿಸಿದನು.


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ಹಿಜ್ಕೀಯನ ಉಳಿದ ಚರಿತ್ರೆಯೂ, ಅವನ ಪರಾಕ್ರಮಕೃತ್ಯಗಳೂ, ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದ ರಾಜಕಾಲವೃತ್ತಾಂತ ಪುಸ್ತಕ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಅದಕ್ಕೆ ಶಿಮ್ಮೀಯು, “ಒಳ್ಳೇಯದು ನನ್ನ ಒಡೆಯನು ಅರಸನೂ ಆದ ನೀನು ಹೇಳಿದಂತೆಯೇ ಸೇವಕನಾದ ನಾನು ಮಾಡುವೆನು” ಎಂದು ಉತ್ತರಕೊಟ್ಟು ಬಹುದಿನಗಳ ವರೆಗೂ ಯೆರೂಸಲೇಮಿನಲ್ಲೇ ವಾಸಮಾಡುತ್ತಿದ್ದನು.


ಆದರೂ ನಾನು ನಿನ್ನ ತಂದೆಯಾದ ದಾವೀದನನ್ನು ನೆನಸಿ ನಿನ್ನ ಕಾಲದಲ್ಲಿ ಇದನ್ನು ಮಾಡುವುದಿಲ್ಲ. ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು.


ಆದುದರಿಂದ, ‘ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಆಶೀರ್ವದಿಸುವೆನು’ ಎಂದು ಹೇಳಿದ್ದನ್ನು ತಿಳಿಸಿರಿ” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು