Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅನಂತರ ಯೆಶಾಯನು, ಒಂದು ಅಂಜೂರಹಣ್ಣನ್ನು ತೆಗೆದು ಅವನ ಗಾಯದ ಮೇಲೆ ಇಟ್ಟಾಗ ಹಿಜ್ಕೀಯನು ಗುಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೆಶಾಯನು ಒಂದು ಅಂಜೂರದ ಹಣ್ಣಿನ ಉಂಡೆಯನ್ನು ತರಿಸಿ ಅದನ್ನು ಕುರುವಿನ ಮೇಲೆ ಇಡಿಸಿದಾಗ ಹಿಜ್ಕೀಯನು ಗುಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಶಾಯನು ಒಂದು ಅಂಜೂರಹಣ್ಣಿನ ಉಂಡೆಯನ್ನು ತರಿಸಿ ಅದನ್ನು ಕುರುವಿನ ಮೇಲೆ ಇಡಿಸಿದಾಗ ಹಿಜ್ಕೀಯನು ಗುಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಯೆಶಾಯನು, “ಅಂಜೂರದ ಹಣ್ಣಿನಿಂದ ಒಂದು ಉಂಡೆಯನ್ನು ಮಾಡಿಸಿ ಅದನ್ನು ಕುರುವಿನ ಮೇಲೆ ಇಡು” ಎಂದು ಹೇಳಿದನು. ಅಂತೆಯೇ ಅವರು ಅಂಜೂರಹಣ್ಣಿನ ಒಂದು ಉಂಡೆಯನ್ನು ಹಿಜ್ಕೀಯನ ಕುರುವಿನ ಮೇಲೆ ಇಟ್ಟರು. ಆಗ ಹಿಜ್ಕೀಯನಿಗೆ ಗುಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತೆಗೆದುಕೊಂಡು ಬರಲು ಹೇಳಿದ್ದನು. ಅವರು ಹಾಗೆಯೇ ತೆಗೆದುಕೊಂಡು ಬಂದು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:7
5 ತಿಳಿವುಗಳ ಹೋಲಿಕೆ  

ಯೆಶಾಯನು, “ಅಂಜೂರದ ಹಣ್ಣುಗಳ ಉಂಡೆಯನ್ನು ತರಿಸಿ ಹುಣ್ಣಿನ ಮೇಲೆ ಇಟ್ಟರೆ ಅರಸನು ಗುಣಹೊಂದುವನು” ಎಂದು ಅಪ್ಪಣೆಕೊಟ್ಟನು.


ಆಗ ಎಲೀಷನು, “ಹಿಟ್ಟನ್ನು ತಂದು ಕೊಡಿರಿ” ಎಂದು ಹೇಳಿದನು. ಅವರು ತಂದಾಗ, ಅದನ್ನು ಆ ಪಾತ್ರೆಯೊಳಗೆ ಹಾಕಿ, “ಈಗ ಇದನ್ನು ಬಡಿಸಬಹುದು. ಜನರು ಇದನ್ನು ಊಟಮಾಡಲಿ” ಎಂದನು. ಕೂಡಲೇ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಯಿತು.


ಇದಲ್ಲದೆ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಿಸಿದ್ದೇನೆ, ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರನ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು’ ಎಂಬುದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು” ಅಂದನು.


ಹಿಜ್ಕೀಯನು ಯೆಶಾಯನಿಗೆ, “ಯೆಹೋವನು ನನ್ನನ್ನು ಗುಣಪಡಿಸುವನೆಂಬುವುದಕ್ಕೂ, ನಾನು ಮೂರನೆಯ ದಿನ ಆತನ ಆಲಯಕ್ಕೆ ಹೋಗುವೆನೆಂಬುವುದಕ್ಕೂ, ಇರುವ ಗುರುತು ಏನು?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು