Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ಯೆಹೋವನ ಆಲಯದಲ್ಲಿ ಇಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಮತ್ತು ಅವನ ಮಗನಾದ ಸೊಲೊಮೋನನಿಗೂ, “ಈ ಆಲಯದಲ್ಲಿಯೂ, ಇಸ್ರಾಯೇಲರ ಸಕಲ ಗೋತ್ರಗಳಲ್ಲಿಯೂ, ನಾನು ಆರಿಸಿಕೊಂಡ ಯೆರೂಸಲೇಮಿನಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ದೇವಾಲಯದಲ್ಲಿ ಇಡಿಸಿದನು. ಸರ್ವೇಶ್ವರ ಆ ಆಲಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು ತಮಗೆ ಮೋಶೆಯ ಮುಖಾಂತರ ಕೊಡಲಾದ ನನ್ನ ಧರ್ಮಶಾಸ್ತ್ರದ ನಿಬಂಧನೆಗಳನ್ನು ಅನುಸರಿಸಿ ನಡೆಯುವುದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತಾನು ಮಾಡಿಸಿದ ಅಶೇರವಿಗ್ರಹಸ್ತಂಭವನ್ನು ದೇವಾಲಯದಲ್ಲಿ ಇಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ - ಇಸ್ರಾಯೇಲ್ಯರು ತಮಗೆ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ನನ್ನ ಧರ್ಮಶಾಸ್ತ್ರದ ನಿಬಂಧನೆಗಳನ್ನು ಅನುಸರಿಸಿ ನಡೆಯುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮನಸ್ಸೆಯು ಅಶೇರ ವಿಗ್ರಹಗಳನ್ನು ಕೆತ್ತಿಸಿದನು. ಅವನು ಈ ವಿಗ್ರಹಗಳನ್ನು ಆಲಯದಲ್ಲಿ ಇರಿಸಿದನು. ಯೆಹೋವನು ದಾವೀದನಿಗೆ ಮತ್ತು ದಾವೀದನ ಮಗನಾದ ಸೊಲೊಮೋನನಿಗೆ ಈ ಆಲಯವನ್ನು ಕುರಿತು ಹೀಗೆ ಹೇಳಿದ್ದನು: “ಇಸ್ರೇಲಿನಲ್ಲಿರುವ ಎಲ್ಲಾ ನಗರಗಳಿಂದ ನಾನು ಜೆರುಸಲೇಮನ್ನು ಆರಿಸಿದ್ದೇನೆ. ನಾನು ನನ್ನ ಹೆಸರನ್ನು ಜೆರುಸಲೇಮಿನ ಆಲಯದಲ್ಲಿ ಎಂದೆಂದಿಗೂ ಇರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಈ ಆಲಯದಲ್ಲಿಯೂ, ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿಯೂ, ನಾನು ಆಯ್ದುಕೊಂಡ ಯೆರೂಸಲೇಮಿನಲ್ಲಿಯೂ, ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು,” ಎಂದು ಯೆಹೋವ ದೇವರು ದಾವೀದನಿಗೂ, ಅವನ ಮಗನಾದ ಸೊಲೊಮೋನನಿಗೂ ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ತಾನು ಮಾಡಿದ ಅಶೇರ ವಿಗ್ರಹಸ್ತಂಭವನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:7
25 ತಿಳಿವುಗಳ ಹೋಲಿಕೆ  

ನನ್ನ ನಾಮ ಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಠಿಯೂ, ಮನಸ್ಸೂ ಸದಾ ಇಲ್ಲೇ ಇರುತ್ತದೆ.


ಆತನು ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ, ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು.


ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ. ಇಲ್ಲಿ ನಿನ್ನ ಸೇವಕರು ನಿನ್ನನ್ನು ಪ್ರಾರ್ಥಿಸುವಾಗೆಲ್ಲಾ ಅವರಿಗೆ ಸದುತ್ತರವನ್ನು ದಯಪಾಲಿಸು.


ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.


ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆ ಮಾಡಿದ್ದಾರೆ.


ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವುದಾದರೆ ನಿಮ್ಮ ಜನರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ, ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು’ ಎಂದು ಹೇಳಿರುವೆಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಿರಿ.


ಅನ್ಯದೇವತಾಪ್ರತಿಮೆಗಳನ್ನೂ, ತಾನು ಮಾಡಿಸಿದ್ದ ಸ್ತಂಭವನ್ನೂ ಯೆಹೋವನ ಆಲಯದಿಂದ ತೆಗೆಸಿ ಯೆಹೋವನ ಮಂದಿರವಿರುವ ಗುಡ್ಡದಲ್ಲಿಯೂ, ಯೆರೂಸಲೇಮಿನಲ್ಲಿಯೂ ಕಟ್ಟಿಸಿದ್ದ ಎಲ್ಲಾ ಯಜ್ಞವೇದಿಗಳನ್ನು ಕೆಡವಿ ಪಟ್ಟಣದ ಹೊರಗೆ ಹಾಕಿಸಿದನು.


ತಾನು ಮಾಡಿಸಿದ ವಿಗ್ರಹ ಸ್ತಂಭವನ್ನು ದೇವಾಲಯದಲ್ಲಿಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ, “ಇಸ್ರಾಯೇಲರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರದ ವಿಧಿವಿಧಾನಗಳನ್ನು ಅನುಸರಿಸಿ ನಡೆಯುವುದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲವಿರುವುದು.


ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು.


ಯೆಹೋವನು ಸೊಲೊಮೋನನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ, ಬಲಿಯನ್ನರ್ಪಿಸುವ ಆಲಯವಾಗಿ ಈ ಸ್ಥಳವನ್ನು ಆರಿಸಿಕೊಂಡಿದ್ದೇನೆ.


ಯೆಹೋವನು, “ಇಸ್ರಾಯೇಲರನ್ನು ತೆಗೆದುಹಾಕಿದಂತೆ, ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು, ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮದ ಮಹಿಮೆಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.


ಯೆಹೋವನ ಆಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು.


ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು” ಎಂದು ಯೆಹೋವನು ಯಾವುದನ್ನು ಕುರಿತು ಹೇಳಿದ್ದನೋ, ಆ ಯೆಹೋವನ ಆಲಯದಲ್ಲಿ ಮನಸ್ಸೆಯು ಯಜ್ಞವೇದಿಗಳನ್ನು ಕಟ್ಟಿಸಿದನು.


ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ, ಅಶೇರ ವಿಗ್ರಹಕ್ಕೆ ಸಂಬಂಧಪಟ್ಟ ಯಾವ ಮರದ ಸ್ತಂಭವನ್ನೂ ನೆಡಬಾರದು.


ನೀನು ಹಿಂದಿನ ಕಾಲದಲ್ಲಿ ಸ್ವಕುಲವಾಗಿರಬೇಕೆಂದು ಬಿಡುಗಡೆ ಮಾಡಿ ಸಂಪಾದಿಸಿಕೊಂಡ ನಿನ್ನ ಸಭಾಮಂಡಲಿಯನ್ನು ಜ್ಞಾಪಿಸಿಕೋ; ನಿನ್ನ ವಾಸಸ್ಥಾನವಾಗಿದ್ದ ಚೀಯೋನ್ ಪರ್ವತವನ್ನು ಮರೆಯಬೇಡ.


ಇಸ್ರಾಯೇಲರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದು ಹಾಕಿ, ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ‘ಇಸ್ರಾಯೇಲರು’ ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ, ಲೋಕದ ಅಪವಾದಕ್ಕೂ ಗುರಿಯಾಗುವಾಗುವರು.


ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೋಸ್ಕರ ಎಲ್ಲಿಗಾದರು ಕಳುಹಿಸಿದಾಗ ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ಯೆಹೋವನಾದ ನಿನ್ನನ್ನು ಪ್ರಾರ್ಥಿಸುವುದಾದರೆ


ತರುವಾಯ ಅರಸನು ಮಹಾಯಾಜಕನಾದ ಹಿಲ್ಕೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತೇಲಿಗೆ ಕಳುಹಿಸಿದನು.


ಇದನ್ನು ಮಾಡಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರ ಪಡಿಸಿ, ನಾನು ನೇಮಿಸಿದ ಸಬ್ಬತ್ ದಿನವನ್ನು ಅಪವಿತ್ರ ಮಾಡಿದ್ದಾರೆ.


ಅರಸನಾದ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಯಜ್ಞವೇದಿಯನ್ನು ಮಾಡಿಸಿಟ್ಟಿದ್ದನು.


ಆದರೆ ಈಗ ನನ್ನ ಹೆಸರಿಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.


ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ, ವಿಗ್ರಹಗಳಿಂದ ರೇಗಿಸಿದರು.


ಯೆಹೋವನು ಹೀಗೆನ್ನುತ್ತಾನೆ, “ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನೇ ನಡೆಸಿದ್ದಾರೆ, ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು